ಬೆಲ್ಜಿಯಂ:14 ವರ್ಷದ ಬಾಲಕಿ ಮೇಲೆ 10 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಕಾಡಿಗೆ ಕರೆದೊಯ್ದು ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಇದೀಗ ಎಲ್ಲರನ್ನೂ ಬಂಧಿಸಲಾಗಿದೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬೆಲ್ಜಿಯಂ:14 ವರ್ಷದ ಬಾಲಕಿ ಮೇಲೆ 10 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ
ಅಪರಾಧImage Credit source: Times Of India
Follow us
|

Updated on: May 10, 2024 | 8:05 AM

ಬೆಲ್ಜಿಯಂನ ವೆಸ್ಟ್ ಫ್ಲಾಂಡರ್ಸ್ ಪ್ರಾಂತ್ಯದ ಅರಣ್ಯದಲ್ಲಿ 14 ವರ್ಷದ ಬಾಲಕಿಯ ಮೇಲೆ ಹತ್ತು ಮಂದಿ ಅಪ್ರಾಪ್ತರು ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಹತ್ತು ಆರೋಪಿಗಳು 11 ಮತ್ತು 16 ರ ನಡುವಿನ ವಯಸ್ಸಿನವರು, ಬ್ರಸೆಲ್ಸ್ ಟೈಮ್ಸ್ ಪ್ರಕಾರ , ದೇಶವನ್ನು ಬೆಚ್ಚಿಬೀಳಿಸಿದೆ.

ಕೊರ್ಟ್ರಿಜ್ಕ್ ನಗರದಲ್ಲಿ ಬಾಲಕಿ ತನ್ನ ಗೆಳೆಯನೊಂದಿಗೆ ಹೊರಗಡೆ ಹೋಗಿದ್ದಳು, ಅಲ್ಲಿ ಆತನ ಹಲವು ಸ್ನೇಹಿತರು ಕೂಡ ಬಂದಿದ್ದರು. ಏಪ್ರಿಲ್​ 2 ರಿಂದ ಏಪ್ರಿಲ್​ 6ರ ನಡುವೆ 10 ಮಂದಿ ಅಪ್ರಾಪ್ತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಓರ್ವ ಬಾಲಕನಿಗೆ 11 ವರ್ಷ ಆತ ತುಂಬಾ ಚಿಕ್ಕವನಾದ ಕಾರಣ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅವರೆಲ್ಲರನ್ನೂ ಗುರುತಿಸಿ ಬಂಧಿಸಲಾಗಿದೆ ಮತ್ತು ಬಾಲಾಪರಾಧಿ ನ್ಯಾಯಾಲಯವು ಕ್ರಮ ಕೈಗೊಂಡಿದೆ. ಬಾಲಕಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೂರು ವರ್ಷಗಳ ಹಿಂದೆ ಈಸ್ಟ್ ಫ್ಲಾಂಡರ್ಸ್‌ನ ಘೆಂಟ್‌ನಲ್ಲಿ ಇದೇ ರೀತಿಯ ಪ್ರಕರಣವು ನಡೆದಿತ್ತು.

14 ವರ್ಷದೊಳಗಿನ ಅಪರಾಧಿಗಳಿಗೆ ಎರಡು ವರ್ಷಗಳವರೆಗೆ, 14-16 ವರ್ಷ ವಯಸ್ಸಿನವರಿಗೆ ಐದು ವರ್ಷಗಳವರೆಗೆ ಮತ್ತು 16 ವರ್ಷಕ್ಕಿಂತ ಮೇಲ್ಪಟ್ಟ ಅಪರಾಧಿಗಳಿಗೆ ಏಳು ವರ್ಷಗಳವರೆಗೆ ಬಂಧನದಲ್ಲಿಡುವಂತೆ ಕೋರ್ಟ್​ ತೀರ್ಪು ನೀಡಿತ್ತು.

ಮತ್ತಷ್ಟು ಓದಿ: ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಲ್ಜಿಯಂ ಸರ್ಕಾರವು ಜೂನ್ 2021 ರಲ್ಲಿ ಬಾಲಾಪರಾಧ ಕಾನೂನನ್ನು ತಿದ್ದುಪಡಿ ಮಾಡಿತು, ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಶಿಕ್ಷೆಗೊಳಗಾದ 12 ವರ್ಷ ವಯಸ್ಸಿನ ಯುವಕರಿಗೆ ದೀರ್ಘಾವಧಿಯ ಬಂಧನವನ್ನು ಅನುಮತಿಸುತ್ತದೆ. 2022 ರಿಂದ, ಅತ್ಯಾಚಾರ ಅಥವಾ ಗ್ಯಾಂಗ್-ಸಂಬಂಧಿತ ಹಿಂಸಾಚಾರವನ್ನು ಮಾಡುವ 16 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಬಾಲಾಪರಾಧಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ