AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ

Dhaka: ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ ಬೋಟ್​ನಿಂದ ಇಳಿದರು.

ಮದುವೆಮನೆಯನ್ನು ಸೂತಕದ ಮನೆಯನ್ನಾಗಿಸಿದ ಸಿಡಿಲು; ಸೆಕೆಂಡ್​ಗಳ ಅಂತರದಲ್ಲಿ 16 ಮಂದಿ ಸಾವು, ವರನಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 04, 2021 | 5:03 PM

Share

ಸಂಭ್ರಮದಿಂದ ನಡೆಯುತ್ತಿದ್ದ ಮದುವೆಮನೆ, ಸಿಡಿಲು ಬಡಿದ (lightning Strike) ಪರಿಣಾಮ ಸೂತಕದ ಮನೆಯಂತಾಗಿದೆ. ದುರ್ಘಟನೆ ನಡೆದದ್ದು ಬಾಂಗ್ಲಾದೇಶ (Banglasesh)ದ ಢಾಕಾದಲ್ಲಿ. ಒಂದೇ ಸೆಕೆಂಡ್​ನಲ್ಲಿ ಮೂರ್ನಾಲ್ಕು ಬಾರಿ ಸಿಡಿಲು ಬಡಿದು, ಮದುವೆ ಮನೆಯಲ್ಲಿ ಇದ್ದ, 16 ಜನರು ಮೃತಪಟ್ಟಿದ್ದಾರೆ. ವರ ಗಂಭೀರವಾಗಿ ಗಾಯಗೊಂಡಿದ್ದು, ವಧು ಪಾರಾಗಿದ್ದಾಳೆ.

ಇನ್ನೂ ಮದುವೆ ಕಾರ್ಯಕ್ರಮ ಶುರುವಾಗಿರಲಿಲ್ಲ. ಪಾರ್ಟಿ ನಡೆಯಲಿರುವ ಸ್ಥಳಕ್ಕೆ ವರ ಮತ್ತು ಅವನ ಕಡೆಯವರು ಒಂದಷ್ಟು ಜನ ಬೋಟ್​ನಲ್ಲಿ ಹೊರಟಿದ್ದರು. ಆಗ ಒಮ್ಮೆಲೇ ಗುಡುಗು ಶುರುವಾದ ಕಾರಣ ಶಿಬ್​ಗಂಜ್​ ಪಟ್ಟಣದ ಸಮೀಪ, ಆಶ್ರಯ ಪಡೆಯಲು ಬೋಟ್​ನಿಂದ ಇಳಿದರು. ಆದರೆ ಅಷ್ಟರಲ್ಲಿ ಸಿಡಿಲು ಬಡಿದ 16 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ. ಈ ವೇಳೆ ವಧು ಅಲ್ಲಿ ಇಲ್ಲದ ಕಾರಣ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಾನ್ಸೂನ್​ ಮಾರುತಗಳ ಆರ್ಭಟಕ್ಕೆ ಬಾಂಗ್ಲಾದೇಶ ತತ್ತರಿಸುತ್ತಿದೆ. ಆಗ್ನೇಯ ಜಿಲ್ಲೆಯಾದ ಕಾಕ್ಸ್ ಬಜಾರ್​​ನಲ್ಲಿ ಒಂದು ವಾರದಿಂದಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತತ್ಪರಿಣಾಮ ಸುಮಾರು 20 ಜನರ ಜೀವ ಹೋಗಿದೆ. ಅದರಲ್ಲಿ ಆರು ಮಂದಿ ರೊಹಿಂಗ್ಯಾ ನಿರಾಶ್ರಿತರು ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಕೈ ಕೊಯ್ದುಕೊಂಡ ಅಭಿಮಾನಿ..

ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 4:51 pm, Wed, 4 August 21

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್