AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು

ಕಲ್ಲಿದ್ದಲು ಗಣಿ ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 25, 2023 | 3:26 PM

Share

ಗುಝೌ, ಸೆ.25: ಕಲ್ಲಿದ್ದಲು ಗಣಿ  ಪ್ರದೇಶದ (Coal mine) ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ (China) ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ. ಸರಕುಗಳ ಸಲಹಾ ಸಂಸ್ಥೆ ಮಿಸ್ಟೀಲ್ ಪ್ರಕಾರ, ಈ ಘಟನೆಯಿಂದ ಎಲ್ಲಾ ಕಲ್ಲಿದ್ದಲು ಗಣಿಗಳಲ್ಲಿ ಒಂದು ದಿನದ ಮಟ್ಟಿಗೆ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಗಣಿ ಮಾಲೀಕರಿಗೆ ಈ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಪ್ರದೇಶದಲ್ಲಿ ವರ್ಷಕ್ಕೆ ಸುಮಾರು 52.5 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಗಣಿ ಉತ್ಪಾದನೆಗಳನ್ನು ತೆಗೆಯುವ ಸಾಮರ್ಥ್ಯ ಇದೆ. ಇನ್ನು ಚೀನಾದ ಒಟ್ಟು ಕೋಕಿಂಗ್ ಕಲ್ಲಿದ್ದಲು ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ, ಸುಮಾರು 5%ದಷ್ಟು ಕಲ್ಲಿದ್ದಲು ಉತ್ಪಾದನೆಯನ್ನು ಈ ಪ್ರದೇಶದಿಂದ ತೆಗೆಯುವ ಸಾಮರ್ಥ್ಯವನ್ನು ಹೊಂದಿದೆ.

ಪಂಜಿಯಾಂಗ್ ಕೋಲ್ ಎಂದೂ ಕರೆಯಲ್ಪಡುವ ಸರ್ಕಾರಿ ಸ್ವಾಮ್ಯದ ಕಂಪನಿಯು ತನ್ನ ಎಲ್ಲ ಗಣಿ ಉತ್ಪಾದನ ಪ್ರದೇಶಗಳಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ, ಜತೆಗೆ ಸುರಕ್ಷಿತ ನಿಮಯಗಳನ್ನು ಪಾಲಿಸುವಂತೆ ಆದೇಶವನ್ನು ನೀಡಿದೆ. ಈ ಕಂಪನಿಯು 17.3 ಮಿಲಿಯನ್ ಟನ್‌ಗಳಷ್ಟು ಒಟ್ಟು ಸಾಮರ್ಥ್ಯವನ್ನು ಹೊಂದಿದ್ದು, ಇಂತಹ ಏಳು ಕಲ್ಲಿದ್ದಲು ಗಣಿಗಳನ್ನು ನಿರ್ವಹಿಸುತ್ತಿದೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಚೀನಾದ ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಆಗ್ಗಾಗ್ಗೆ ಇಂತಹ ಅಪಘಾತಗಳು ನಡೆಯುತ್ತದೆ. ಫೆಬ್ರವರಿಯಲ್ಲಿ ಇನ್ನರ್ ಮಂಗೋಲಿಯಾ ಪ್ರದೇಶದಲ್ಲಿ ತೆರೆದ ಪಿಟ್ ಗಣಿಯಲ್ಲಿ ಕುಸಿದು 53 ಜನರು ಸಾವನ್ನಪ್ಪಿದರು. ಅಧಿಕಾರಿಗಳು ಇಂತಹ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಅಧಿಕಾರಿಗಳು ನೋಟಿಸ್​​​ ಜಾರಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾ

Published On - 3:10 pm, Mon, 25 September 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ