Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು

ಕಲ್ಲಿದ್ದಲು ಗಣಿ ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 25, 2023 | 3:26 PM

ಗುಝೌ, ಸೆ.25: ಕಲ್ಲಿದ್ದಲು ಗಣಿ  ಪ್ರದೇಶದ (Coal mine) ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಚೀನಾದ (China) ಗುಝೌ ಪ್ರಾಂತ್ಯದ ಪನ್‌ಝೌ ನಗರದಲ್ಲಿ ಭಾನುವಾರ ನಡೆದಿದೆ ಎಂದು ಗಣಿ ಮಾಲೀಕ ಗುಯಿಝೌ ಪಂಜಿಯಾಂಗ್ ರಿಫೈನ್ಡ್ ಕೋಲ್ ಕೋ ಶಾಂಘೈ ಸ್ಟಾಕ್ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ. ಸರಕುಗಳ ಸಲಹಾ ಸಂಸ್ಥೆ ಮಿಸ್ಟೀಲ್ ಪ್ರಕಾರ, ಈ ಘಟನೆಯಿಂದ ಎಲ್ಲಾ ಕಲ್ಲಿದ್ದಲು ಗಣಿಗಳಲ್ಲಿ ಒಂದು ದಿನದ ಮಟ್ಟಿಗೆ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಗಣಿ ಮಾಲೀಕರಿಗೆ ಈ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಪ್ರದೇಶದಲ್ಲಿ ವರ್ಷಕ್ಕೆ ಸುಮಾರು 52.5 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಗಣಿ ಉತ್ಪಾದನೆಗಳನ್ನು ತೆಗೆಯುವ ಸಾಮರ್ಥ್ಯ ಇದೆ. ಇನ್ನು ಚೀನಾದ ಒಟ್ಟು ಕೋಕಿಂಗ್ ಕಲ್ಲಿದ್ದಲು ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ, ಸುಮಾರು 5%ದಷ್ಟು ಕಲ್ಲಿದ್ದಲು ಉತ್ಪಾದನೆಯನ್ನು ಈ ಪ್ರದೇಶದಿಂದ ತೆಗೆಯುವ ಸಾಮರ್ಥ್ಯವನ್ನು ಹೊಂದಿದೆ.

ಪಂಜಿಯಾಂಗ್ ಕೋಲ್ ಎಂದೂ ಕರೆಯಲ್ಪಡುವ ಸರ್ಕಾರಿ ಸ್ವಾಮ್ಯದ ಕಂಪನಿಯು ತನ್ನ ಎಲ್ಲ ಗಣಿ ಉತ್ಪಾದನ ಪ್ರದೇಶಗಳಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ, ಜತೆಗೆ ಸುರಕ್ಷಿತ ನಿಮಯಗಳನ್ನು ಪಾಲಿಸುವಂತೆ ಆದೇಶವನ್ನು ನೀಡಿದೆ. ಈ ಕಂಪನಿಯು 17.3 ಮಿಲಿಯನ್ ಟನ್‌ಗಳಷ್ಟು ಒಟ್ಟು ಸಾಮರ್ಥ್ಯವನ್ನು ಹೊಂದಿದ್ದು, ಇಂತಹ ಏಳು ಕಲ್ಲಿದ್ದಲು ಗಣಿಗಳನ್ನು ನಿರ್ವಹಿಸುತ್ತಿದೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಪೋಟ, ಭಾರಿ ಭೂಕುಸಿತ, ಶೌಚಕ್ಕೆಂದು ತೆರಳಿದ್ದ 3 ಮಹಿಳೆಯರು ಜೀವಂತ ಸಮಾಧಿ

ಚೀನಾದ ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಆಗ್ಗಾಗ್ಗೆ ಇಂತಹ ಅಪಘಾತಗಳು ನಡೆಯುತ್ತದೆ. ಫೆಬ್ರವರಿಯಲ್ಲಿ ಇನ್ನರ್ ಮಂಗೋಲಿಯಾ ಪ್ರದೇಶದಲ್ಲಿ ತೆರೆದ ಪಿಟ್ ಗಣಿಯಲ್ಲಿ ಕುಸಿದು 53 ಜನರು ಸಾವನ್ನಪ್ಪಿದರು. ಅಧಿಕಾರಿಗಳು ಇಂತಹ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಅಧಿಕಾರಿಗಳು ನೋಟಿಸ್​​​ ಜಾರಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾ

Published On - 3:10 pm, Mon, 25 September 23

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ