AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ

Libya: ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿವ ಮಾಡಿದ್ದು,"ಅನೌಪಚಾರಿಕ ಮೂಲಗಳ" ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ
ಲಿಬಿಯಾImage Credit source: Twitter/@vikramsahney
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 21, 2023 | 1:15 PM

Share

ಟ್ರಿಪೋಲಿ: ಲಿಬಿಯಾದಲ್ಲಿ (Libya) ಶಸ್ತ್ರಸಜ್ಜಿತ ಗುಂಪಿನ ವಶದಲ್ಲಿದ್ದ 17 ಭಾರತೀಯರ ಗುಂಪನ್ನು ಹಲವಾರು ತಿಂಗಳುಗಳ ಸೆರೆಯಲ್ಲಿ ಮುಕ್ತಗೊಳಿಸಲಾಗಿದೆ. ಇವರನ್ನು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ (Indian embassy) ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಯತ್ನದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಂಧಿಯಾಗಿದ್ದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ಹರ್ಯಾಣದವರು.ಈ ವರ್ಷದ ಮೇ 26 ರಂದು ಈ ಬಗ್ಗೆ ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾಯಿತು. ಭಾರತದಿಂದ ಕಳ್ಳಸಾಗಣೆ ಮಾಡಿದ ನಂತರ ಲಿಬಿಯಾದ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪು ಇವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಘಟನೆ ನಡೆದದ್ದು ಯಾವಾಗ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಟುನಿಸ್‌ನಲ್ಲಿರುವ ಭಾರತೀಯ ರಾಜತಾಂತ್ರಿಕರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಧ್ಯಪ್ರವೇಶದ ನಂತರ, 17 ಜನರ ಗುಂಪನ್ನು ಲಿಬಿಯಾದಿಂದ ಸ್ಥಳಾಂತರಿಸಲಾಯಿತು. ಅವರು ಆಗಸ್ಟ್ 20 ರಂದು ಸಂಜೆ ನವದೆಹಲಿಗೆ ತಲುಪಿದ್ದಾರೆ.

ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿಮಯ ಮಾಡಿದ್ದು,”ಅನೌಪಚಾರಿಕ ಮೂಲಗಳ” ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಜೂನ್ 13 ರಂದು, ಲಿಬಿಯಾ ಅಧಿಕಾರಿಗಳು ಭಾರತೀಯ ಪ್ರಜೆಗಳನ್ನು ರಕ್ಷಿಸಿದ್ದರು. ಆದರೆ ಈ ಭಾರತೀಯರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆಂದು ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡರು ಎಂದು ಮೂಲಗಳು ಹೇಳಿವೆ. ಟುನಿಸ್‌ನಲ್ಲಿರುವ ಭಾರತೀಯ ರಾಯಭಾರಿ ಎನ್‌ಜೆ ಗ್ಯಾಂಗ್ಟೆ ಮತ್ತು ನವದೆಹಲಿಯ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಮಧ್ಯಸ್ಥಿಕೆಯ ನಂತರ, ಲಿಬಿಯಾ ಅಧಿಕಾರಿಗಳು ಭಾರತೀಯರನ್ನು ಬಿಡುಗಡೆ ಮಾಡಲು ಒಪ್ಪಿಕೊಂಡರು.

ಅವರು ಲಿಬಿಯಾದಲ್ಲಿದ್ದ ಸಮಯದಲ್ಲಿ, ಭಾರತೀಯ ರಾಯಭಾರ ಕಚೇರಿಯು ಆಹಾರ, ಔಷಧಗಳು ಮತ್ತು ಬಟ್ಟೆ ಸೇರಿದಂತೆ ಭಾರತೀಯರ ಅಗತ್ಯಗಳನ್ನು ನೋಡಿಕೊಳ್ಳುತ್ತಿತ್ತು. ಅವರು ಪಾಸ್‌ಪೋರ್ಟ್‌ಗಳನ್ನು ಹೊಂದಿಲ್ಲದ ಕಾರಣ, ಅವರ ಭಾರತಕ್ಕೆ ಪ್ರಯಾಣಿಸಲು ತುರ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.

17 ಭಾರತೀಯರಿಗೆ ಟಿಕೆಟ್‌ಗಳನ್ನು ಭಾರತೀಯ ರಾಯಭಾರ ಕಚೇರಿಯಿಂದ ಒದಗಿಸಿದ್ದು ಅದಕ್ಕೆ ರಾಯಭಾರ ಕಚೇರಿಯೇ ಪಾವತಿ ಮಾಡಿತ್ತು.

ಮೇ ತಿಂಗಳಲ್ಲಿ, ಮೂರು ತಿಂಗಳಿಗೂ ಹೆಚ್ಚು ಕಾಲ ಲಿಬಿಯಾದಲ್ಲಿ ಸೇನೆಯ ವಶದಲ್ಲಿದ್ದ ವ್ಯಾಪಾರಿ ಹಡಗಿನ ಒಂಬತ್ತು ಭಾರತೀಯ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ಚಂದ್ರಯಾನ 3 : ವಿಕ್ರಮ್ ಲ್ಯಾಂಡರ್ ತೆಗೆದ ಚಂದ್ರನ ಹೊಸ ಚಿತ್ರಗಳನ್ನು ಹಂಚಿಕೊಂಡ ಇಸ್ರೋ

ಎಂ.ಟಿ ಮಾಯಾ 1 ಸಿಬ್ಬಂದಿಯ ಭಾಗವಾಗಿದ್ದ ನಾವಿಕರನ್ನು ಫೆಬ್ರವರಿ 15 ರಂದು ಲಿಬಿಯಾದ ಕರಾವಳಿಯ ಬಳಿ ಹಡಗು ಮುರಿದು ಬಿದ್ದ ನಂತರ ಅವರನ್ನು ಅಲ್ಲಿನ ಪಡೆ ವಶಪಡಿಸಿಕೊಂಡಿದೆ ಎಂದು ಮೂಲಗಳು ಟುನೀಶಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಗೆ ತಿಳಿಸಿವೆ. ಭಾರತೀಯ ನಾವಿಕರು ಮೇ 31 ರಂದು ಬಿಡುಗಡೆ ಮಾಡಲಾಗಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು