ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ

Libya: ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿವ ಮಾಡಿದ್ದು,"ಅನೌಪಚಾರಿಕ ಮೂಲಗಳ" ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ
ಲಿಬಿಯಾImage Credit source: Twitter/@vikramsahney
Follow us
|

Updated on: Aug 21, 2023 | 1:15 PM

ಟ್ರಿಪೋಲಿ: ಲಿಬಿಯಾದಲ್ಲಿ (Libya) ಶಸ್ತ್ರಸಜ್ಜಿತ ಗುಂಪಿನ ವಶದಲ್ಲಿದ್ದ 17 ಭಾರತೀಯರ ಗುಂಪನ್ನು ಹಲವಾರು ತಿಂಗಳುಗಳ ಸೆರೆಯಲ್ಲಿ ಮುಕ್ತಗೊಳಿಸಲಾಗಿದೆ. ಇವರನ್ನು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ (Indian embassy) ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಯತ್ನದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಂಧಿಯಾಗಿದ್ದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ಹರ್ಯಾಣದವರು.ಈ ವರ್ಷದ ಮೇ 26 ರಂದು ಈ ಬಗ್ಗೆ ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾಯಿತು. ಭಾರತದಿಂದ ಕಳ್ಳಸಾಗಣೆ ಮಾಡಿದ ನಂತರ ಲಿಬಿಯಾದ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪು ಇವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಘಟನೆ ನಡೆದದ್ದು ಯಾವಾಗ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಟುನಿಸ್‌ನಲ್ಲಿರುವ ಭಾರತೀಯ ರಾಜತಾಂತ್ರಿಕರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಧ್ಯಪ್ರವೇಶದ ನಂತರ, 17 ಜನರ ಗುಂಪನ್ನು ಲಿಬಿಯಾದಿಂದ ಸ್ಥಳಾಂತರಿಸಲಾಯಿತು. ಅವರು ಆಗಸ್ಟ್ 20 ರಂದು ಸಂಜೆ ನವದೆಹಲಿಗೆ ತಲುಪಿದ್ದಾರೆ.

ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿಮಯ ಮಾಡಿದ್ದು,”ಅನೌಪಚಾರಿಕ ಮೂಲಗಳ” ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಜೂನ್ 13 ರಂದು, ಲಿಬಿಯಾ ಅಧಿಕಾರಿಗಳು ಭಾರತೀಯ ಪ್ರಜೆಗಳನ್ನು ರಕ್ಷಿಸಿದ್ದರು. ಆದರೆ ಈ ಭಾರತೀಯರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆಂದು ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡರು ಎಂದು ಮೂಲಗಳು ಹೇಳಿವೆ. ಟುನಿಸ್‌ನಲ್ಲಿರುವ ಭಾರತೀಯ ರಾಯಭಾರಿ ಎನ್‌ಜೆ ಗ್ಯಾಂಗ್ಟೆ ಮತ್ತು ನವದೆಹಲಿಯ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಮಧ್ಯಸ್ಥಿಕೆಯ ನಂತರ, ಲಿಬಿಯಾ ಅಧಿಕಾರಿಗಳು ಭಾರತೀಯರನ್ನು ಬಿಡುಗಡೆ ಮಾಡಲು ಒಪ್ಪಿಕೊಂಡರು.

ಅವರು ಲಿಬಿಯಾದಲ್ಲಿದ್ದ ಸಮಯದಲ್ಲಿ, ಭಾರತೀಯ ರಾಯಭಾರ ಕಚೇರಿಯು ಆಹಾರ, ಔಷಧಗಳು ಮತ್ತು ಬಟ್ಟೆ ಸೇರಿದಂತೆ ಭಾರತೀಯರ ಅಗತ್ಯಗಳನ್ನು ನೋಡಿಕೊಳ್ಳುತ್ತಿತ್ತು. ಅವರು ಪಾಸ್‌ಪೋರ್ಟ್‌ಗಳನ್ನು ಹೊಂದಿಲ್ಲದ ಕಾರಣ, ಅವರ ಭಾರತಕ್ಕೆ ಪ್ರಯಾಣಿಸಲು ತುರ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.

17 ಭಾರತೀಯರಿಗೆ ಟಿಕೆಟ್‌ಗಳನ್ನು ಭಾರತೀಯ ರಾಯಭಾರ ಕಚೇರಿಯಿಂದ ಒದಗಿಸಿದ್ದು ಅದಕ್ಕೆ ರಾಯಭಾರ ಕಚೇರಿಯೇ ಪಾವತಿ ಮಾಡಿತ್ತು.

ಮೇ ತಿಂಗಳಲ್ಲಿ, ಮೂರು ತಿಂಗಳಿಗೂ ಹೆಚ್ಚು ಕಾಲ ಲಿಬಿಯಾದಲ್ಲಿ ಸೇನೆಯ ವಶದಲ್ಲಿದ್ದ ವ್ಯಾಪಾರಿ ಹಡಗಿನ ಒಂಬತ್ತು ಭಾರತೀಯ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ಚಂದ್ರಯಾನ 3 : ವಿಕ್ರಮ್ ಲ್ಯಾಂಡರ್ ತೆಗೆದ ಚಂದ್ರನ ಹೊಸ ಚಿತ್ರಗಳನ್ನು ಹಂಚಿಕೊಂಡ ಇಸ್ರೋ

ಎಂ.ಟಿ ಮಾಯಾ 1 ಸಿಬ್ಬಂದಿಯ ಭಾಗವಾಗಿದ್ದ ನಾವಿಕರನ್ನು ಫೆಬ್ರವರಿ 15 ರಂದು ಲಿಬಿಯಾದ ಕರಾವಳಿಯ ಬಳಿ ಹಡಗು ಮುರಿದು ಬಿದ್ದ ನಂತರ ಅವರನ್ನು ಅಲ್ಲಿನ ಪಡೆ ವಶಪಡಿಸಿಕೊಂಡಿದೆ ಎಂದು ಮೂಲಗಳು ಟುನೀಶಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಗೆ ತಿಳಿಸಿವೆ. ಭಾರತೀಯ ನಾವಿಕರು ಮೇ 31 ರಂದು ಬಿಡುಗಡೆ ಮಾಡಲಾಗಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?