ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ

Libya: ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿವ ಮಾಡಿದ್ದು,"ಅನೌಪಚಾರಿಕ ಮೂಲಗಳ" ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ 17 ಭಾರತೀಯರು ಬಂಧಮುಕ್ತರಾಗಿ ಸ್ವದೇಶಕ್ಕೆ
ಲಿಬಿಯಾ
Image Credit source: Twitter/@vikramsahney
ರಶ್ಮಿ ಕಲ್ಲಕಟ್ಟ

Updated on: Aug 21, 2023 | 1:15 PM

ಟ್ರಿಪೋಲಿ: ಲಿಬಿಯಾದಲ್ಲಿ (Libya) ಶಸ್ತ್ರಸಜ್ಜಿತ ಗುಂಪಿನ ವಶದಲ್ಲಿದ್ದ 17 ಭಾರತೀಯರ ಗುಂಪನ್ನು ಹಲವಾರು ತಿಂಗಳುಗಳ ಸೆರೆಯಲ್ಲಿ ಮುಕ್ತಗೊಳಿಸಲಾಗಿದೆ. ಇವರನ್ನು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ (Indian embassy) ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಯತ್ನದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಂಧಿಯಾಗಿದ್ದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ಹರ್ಯಾಣದವರು.ಈ ವರ್ಷದ ಮೇ 26 ರಂದು ಈ ಬಗ್ಗೆ ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾಯಿತು. ಭಾರತದಿಂದ ಕಳ್ಳಸಾಗಣೆ ಮಾಡಿದ ನಂತರ ಲಿಬಿಯಾದ ಜ್ವಾರಾ ನಗರದಲ್ಲಿ ಸಶಸ್ತ್ರ ಗುಂಪು ಇವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಘಟನೆ ನಡೆದದ್ದು ಯಾವಾಗ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಟುನಿಸ್‌ನಲ್ಲಿರುವ ಭಾರತೀಯ ರಾಜತಾಂತ್ರಿಕರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಧ್ಯಪ್ರವೇಶದ ನಂತರ, 17 ಜನರ ಗುಂಪನ್ನು ಲಿಬಿಯಾದಿಂದ ಸ್ಥಳಾಂತರಿಸಲಾಯಿತು. ಅವರು ಆಗಸ್ಟ್ 20 ರಂದು ಸಂಜೆ ನವದೆಹಲಿಗೆ ತಲುಪಿದ್ದಾರೆ.


ಈ ಪ್ರಕರಣವನ್ನು ಭಾರತೀಯ ಪ್ರಜೆಗಳ ಕುಟುಂಬ ಸದಸ್ಯರು ಟುನಿಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿದ್ದಾರೆ. ರಾಯಭಾರ ಕಚೇರಿಯು ಕುಟುಂಬಗಳೊಂದಿಗೆ ನಿಕಟ ಸಂಪರ್ಕದಲ್ಲಿತ್ತು, ಇದು ಮೇ ಮತ್ತು ಜೂನ್‌ನಲ್ಲಿ ಲಿಬಿಯಾ ಅಧಿಕಾರಿಗಳೊಂದಿಗೆ ನಿಯಮಿತವಾಗಿ ವಿಷಯವನ್ನು ವಿನಿಮಯ ಮಾಡಿದ್ದು,”ಅನೌಪಚಾರಿಕ ಮೂಲಗಳ” ಮೂಲಕವೂ ಇವರನ್ನು ಬಂಧಮುಕ್ತಗೊಳಿಸುವ ಪ್ರಯತ್ನ ಮಾಡಲಾಗಿತ್ತು,

ಜೂನ್ 13 ರಂದು, ಲಿಬಿಯಾ ಅಧಿಕಾರಿಗಳು ಭಾರತೀಯ ಪ್ರಜೆಗಳನ್ನು ರಕ್ಷಿಸಿದ್ದರು. ಆದರೆ ಈ ಭಾರತೀಯರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆಂದು ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡರು ಎಂದು ಮೂಲಗಳು ಹೇಳಿವೆ. ಟುನಿಸ್‌ನಲ್ಲಿರುವ ಭಾರತೀಯ ರಾಯಭಾರಿ ಎನ್‌ಜೆ ಗ್ಯಾಂಗ್ಟೆ ಮತ್ತು ನವದೆಹಲಿಯ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಮಧ್ಯಸ್ಥಿಕೆಯ ನಂತರ, ಲಿಬಿಯಾ ಅಧಿಕಾರಿಗಳು ಭಾರತೀಯರನ್ನು ಬಿಡುಗಡೆ ಮಾಡಲು ಒಪ್ಪಿಕೊಂಡರು.

ಅವರು ಲಿಬಿಯಾದಲ್ಲಿದ್ದ ಸಮಯದಲ್ಲಿ, ಭಾರತೀಯ ರಾಯಭಾರ ಕಚೇರಿಯು ಆಹಾರ, ಔಷಧಗಳು ಮತ್ತು ಬಟ್ಟೆ ಸೇರಿದಂತೆ ಭಾರತೀಯರ ಅಗತ್ಯಗಳನ್ನು ನೋಡಿಕೊಳ್ಳುತ್ತಿತ್ತು. ಅವರು ಪಾಸ್‌ಪೋರ್ಟ್‌ಗಳನ್ನು ಹೊಂದಿಲ್ಲದ ಕಾರಣ, ಅವರ ಭಾರತಕ್ಕೆ ಪ್ರಯಾಣಿಸಲು ತುರ್ತು ಪ್ರಮಾಣಪತ್ರಗಳನ್ನು ನೀಡಲಾಯಿತು.

17 ಭಾರತೀಯರಿಗೆ ಟಿಕೆಟ್‌ಗಳನ್ನು ಭಾರತೀಯ ರಾಯಭಾರ ಕಚೇರಿಯಿಂದ ಒದಗಿಸಿದ್ದು ಅದಕ್ಕೆ ರಾಯಭಾರ ಕಚೇರಿಯೇ ಪಾವತಿ ಮಾಡಿತ್ತು.

ಮೇ ತಿಂಗಳಲ್ಲಿ, ಮೂರು ತಿಂಗಳಿಗೂ ಹೆಚ್ಚು ಕಾಲ ಲಿಬಿಯಾದಲ್ಲಿ ಸೇನೆಯ ವಶದಲ್ಲಿದ್ದ ವ್ಯಾಪಾರಿ ಹಡಗಿನ ಒಂಬತ್ತು ಭಾರತೀಯ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ಚಂದ್ರಯಾನ 3 : ವಿಕ್ರಮ್ ಲ್ಯಾಂಡರ್ ತೆಗೆದ ಚಂದ್ರನ ಹೊಸ ಚಿತ್ರಗಳನ್ನು ಹಂಚಿಕೊಂಡ ಇಸ್ರೋ

ಎಂ.ಟಿ ಮಾಯಾ 1 ಸಿಬ್ಬಂದಿಯ ಭಾಗವಾಗಿದ್ದ ನಾವಿಕರನ್ನು ಫೆಬ್ರವರಿ 15 ರಂದು ಲಿಬಿಯಾದ ಕರಾವಳಿಯ ಬಳಿ ಹಡಗು ಮುರಿದು ಬಿದ್ದ ನಂತರ ಅವರನ್ನು ಅಲ್ಲಿನ ಪಡೆ ವಶಪಡಿಸಿಕೊಂಡಿದೆ ಎಂದು ಮೂಲಗಳು ಟುನೀಶಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಗೆ ತಿಳಿಸಿವೆ. ಭಾರತೀಯ ನಾವಿಕರು ಮೇ 31 ರಂದು ಬಿಡುಗಡೆ ಮಾಡಲಾಗಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us