AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಮೂರು ಮನೆಗಳಿಗೆ ಬಡಿದ ಸಿಡಿಲು; ಮಕ್ಕಳು ಸೇರಿ 17 ಮಂದಿ ಸಾವು

ಹಜಾರಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಈ ಕೆಲವು ಪರ್ವತ ಆವೃತ ಜಿಲ್ಲೆಗಳಲ್ಲಿ ಮಳೆಗಾಲದ ಸಮಯದಲ್ಲಿ ಯಾವಾಗಲೂ ಭೂಕುಸಿತ ಸೇರಿ ಮಳೆ ಸಂಬಂಧಿ ಅವಘಡಗಳು ನಡೆಯುತ್ತಲೇ ಇರುತ್ತವೆ.

ಪಾಕಿಸ್ತಾನದಲ್ಲಿ ಮೂರು ಮನೆಗಳಿಗೆ ಬಡಿದ ಸಿಡಿಲು; ಮಕ್ಕಳು ಸೇರಿ 17 ಮಂದಿ ಸಾವು
ಪಾಕಿಸ್ತಾನದಲ್ಲಿ ಸಿಡಿಲು ಬಡಿದು 17 ಮಂದಿ ಸಾವು
TV9 Web
| Edited By: |

Updated on:Sep 13, 2021 | 11:17 AM

Share

ಪಾಕಿಸ್ತಾನ (Pakistan)ದ ವಾಯುವ್ಯ ಭಾಗದಲ್ಲಿರುವ ದುರ್ಗಮ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ಮೂರು ಮನೆಗಳಿಗೆ ಸಿಡಿಲು ಬಡಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಮೂರೂ ಮನೆಗಳೂ ಜಖಂಗೊಂಡಿವೆ. ಶನಿವಾರ ರಾತ್ರಿಯಿಂದಲೇ ಪಾಕಿಸ್ತಾನದ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವಿಪರೀತ ಮಳೆ ಪ್ರಾರಂಭವಾಗಿತ್ತು. ಭಾನುವಾರ ಮುಂಜಾನೆಯವರೆಗೂ ಇದು ಮುಂದುವರಿದಿತ್ತು. ಈ ವೇಳೆ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ತೋರ್ಗಡ್​ ಎಂಬ ಹಳ್ಳಿಯಲ್ಲಿ ಮೂರು ಮಣ್ಣಿನ ಮನೆಗಳಿಗೆ ಸಿಡಿಲು ಬಡಿದು ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಹಜಾರಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಈ ಕೆಲವು ಪರ್ವತ ಆವೃತ ಜಿಲ್ಲೆಗಳಲ್ಲಿ ಮಳೆಗಾಲದ ಸಮಯದಲ್ಲಿ ಯಾವಾಗಲೂ ಭೂಕುಸಿತ ಸೇರಿ ಮಳೆ ಸಂಬಂಧಿ ಅವಘಡಗಳು ನಡೆಯುತ್ತಲೇ ಇರುತ್ತವೆ. ಹಾಗೇ ಈ ಬಾರಿ ಸಿಡಿಲಿಗೆ 17 ಜನ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಡಿಲಿನಿಂದಾಗಿ ಮೂರು ಮನೆಗಳೂ ಕುಸಿದುಬಿದ್ದಿದ್ದು, ಅದರ ಅವಶೇಷಗಳಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಲ್ಲಿಗೆ ಆಗಮಿಸಿದ್ದ ರಕ್ಷಣಾ ತಂಡಗಳ ಜತೆ ಸ್ಥಳೀಯರು ಕೈಜೋಡಿಸಿದ್ದರು. ಗಾಯಗೊಂಡ ಇಬ್ಬರನ್ನು ಸಮೀಪದ ಅಬ್ಬೋಟ್ಟಾಬಾದ್​ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಈ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವುದು ಸುಲಭವಾಗಿರಲಿಲ್ಲ. ಅವಘಡ ನಡೆದ ಹಳ್ಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಸಾಮಗ್ರಿಗಳು, ಸಿಬ್ಬಂದಿಯನ್ನು ತತ್​ಕ್ಷಣವೇ ಕಳಿಸಿದೆ. ಆದರೆ ಇಲ್ಲಿ ವಿಪರೀತ ಮಳೆಯಿಂದಾಗಿ ಅಲ್ಲಲ್ಲಿ ಒಂದೇಸಮ ಮಣ್ಣುಕುಸಿತ ಆಗುತ್ತಿದ್ದು, ತಲುಪುವುದೂ ಕಷ್ಟವಾಗಿತ್ತು. ಹಾಗೇ, ರಕ್ಷಣಾ ಕಾರ್ಯಾಚರಣೆಯೂ ವಿಳಂಬವಾಯಿತು. ಇಲ್ಲಿನ ರಸ್ತೆಗಳೆಲ್ಲ ಬ್ಲಾಕ್​ ಆಗಿದ್ದು, ಮಣ್ಣು-ಕಲ್ಲು, ಬುಡಸಮೇತ ಬಿದ್ದ ಮರಗಳೆಲ್ಲ ರಸ್ತೆಗೆ ಬಿದ್ದಿವೆ. ಅದನ್ನೆಲ್ಲ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಪಾಕ್​ ಮಾಧ್ಯಮಗಳು ವರದಿ ಮಾಡಿವೆ.  ಸದ್ಯ ಖೈಬರ್​ ಪಖ್ತುಂಖ್ವಾ, ಪಂಜಾಬ್​, ಇಸ್ಲಮಾಬಾದ್​ ಮತ್ತು ಬಲೂಚಿಸ್ತಾದ ಪೂರ್ವಭಾಗಗಳಲ್ಲಿ, ವಿಪತ್ತು ನಿರ್ವಹಣಾ ಪ್ರಾಧಿಕಾರ ಮಳೆಯ ಎಚ್ಚರಿಕೆ ನೀಡಿದೆ. ಸ್ಥಳೀಯರು ಜಾಗರೂಕರಾಗಿ ಇರಬೇಕು ಎಂದು ಹೇಳಿದೆ.

ಇದನ್ನೂ ಓದಿ: Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ

Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

Published On - 11:14 am, Mon, 13 September 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ