AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಮೂರು ಮನೆಗಳಿಗೆ ಬಡಿದ ಸಿಡಿಲು; ಮಕ್ಕಳು ಸೇರಿ 17 ಮಂದಿ ಸಾವು

ಹಜಾರಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಈ ಕೆಲವು ಪರ್ವತ ಆವೃತ ಜಿಲ್ಲೆಗಳಲ್ಲಿ ಮಳೆಗಾಲದ ಸಮಯದಲ್ಲಿ ಯಾವಾಗಲೂ ಭೂಕುಸಿತ ಸೇರಿ ಮಳೆ ಸಂಬಂಧಿ ಅವಘಡಗಳು ನಡೆಯುತ್ತಲೇ ಇರುತ್ತವೆ.

ಪಾಕಿಸ್ತಾನದಲ್ಲಿ ಮೂರು ಮನೆಗಳಿಗೆ ಬಡಿದ ಸಿಡಿಲು; ಮಕ್ಕಳು ಸೇರಿ 17 ಮಂದಿ ಸಾವು
ಪಾಕಿಸ್ತಾನದಲ್ಲಿ ಸಿಡಿಲು ಬಡಿದು 17 ಮಂದಿ ಸಾವು
TV9 Web
| Edited By: |

Updated on:Sep 13, 2021 | 11:17 AM

Share

ಪಾಕಿಸ್ತಾನ (Pakistan)ದ ವಾಯುವ್ಯ ಭಾಗದಲ್ಲಿರುವ ದುರ್ಗಮ ಹಳ್ಳಿಯೊಂದರಲ್ಲಿ ಭಾನುವಾರ ಸಂಜೆ ಮೂರು ಮನೆಗಳಿಗೆ ಸಿಡಿಲು ಬಡಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಮೂರೂ ಮನೆಗಳೂ ಜಖಂಗೊಂಡಿವೆ. ಶನಿವಾರ ರಾತ್ರಿಯಿಂದಲೇ ಪಾಕಿಸ್ತಾನದ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವಿಪರೀತ ಮಳೆ ಪ್ರಾರಂಭವಾಗಿತ್ತು. ಭಾನುವಾರ ಮುಂಜಾನೆಯವರೆಗೂ ಇದು ಮುಂದುವರಿದಿತ್ತು. ಈ ವೇಳೆ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ತೋರ್ಗಡ್​ ಎಂಬ ಹಳ್ಳಿಯಲ್ಲಿ ಮೂರು ಮಣ್ಣಿನ ಮನೆಗಳಿಗೆ ಸಿಡಿಲು ಬಡಿದು ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಹಜಾರಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಈ ಕೆಲವು ಪರ್ವತ ಆವೃತ ಜಿಲ್ಲೆಗಳಲ್ಲಿ ಮಳೆಗಾಲದ ಸಮಯದಲ್ಲಿ ಯಾವಾಗಲೂ ಭೂಕುಸಿತ ಸೇರಿ ಮಳೆ ಸಂಬಂಧಿ ಅವಘಡಗಳು ನಡೆಯುತ್ತಲೇ ಇರುತ್ತವೆ. ಹಾಗೇ ಈ ಬಾರಿ ಸಿಡಿಲಿಗೆ 17 ಜನ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಡಿಲಿನಿಂದಾಗಿ ಮೂರು ಮನೆಗಳೂ ಕುಸಿದುಬಿದ್ದಿದ್ದು, ಅದರ ಅವಶೇಷಗಳಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಲ್ಲಿಗೆ ಆಗಮಿಸಿದ್ದ ರಕ್ಷಣಾ ತಂಡಗಳ ಜತೆ ಸ್ಥಳೀಯರು ಕೈಜೋಡಿಸಿದ್ದರು. ಗಾಯಗೊಂಡ ಇಬ್ಬರನ್ನು ಸಮೀಪದ ಅಬ್ಬೋಟ್ಟಾಬಾದ್​ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಈ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುವುದು ಸುಲಭವಾಗಿರಲಿಲ್ಲ. ಅವಘಡ ನಡೆದ ಹಳ್ಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ರಕ್ಷಣಾ ಸಾಮಗ್ರಿಗಳು, ಸಿಬ್ಬಂದಿಯನ್ನು ತತ್​ಕ್ಷಣವೇ ಕಳಿಸಿದೆ. ಆದರೆ ಇಲ್ಲಿ ವಿಪರೀತ ಮಳೆಯಿಂದಾಗಿ ಅಲ್ಲಲ್ಲಿ ಒಂದೇಸಮ ಮಣ್ಣುಕುಸಿತ ಆಗುತ್ತಿದ್ದು, ತಲುಪುವುದೂ ಕಷ್ಟವಾಗಿತ್ತು. ಹಾಗೇ, ರಕ್ಷಣಾ ಕಾರ್ಯಾಚರಣೆಯೂ ವಿಳಂಬವಾಯಿತು. ಇಲ್ಲಿನ ರಸ್ತೆಗಳೆಲ್ಲ ಬ್ಲಾಕ್​ ಆಗಿದ್ದು, ಮಣ್ಣು-ಕಲ್ಲು, ಬುಡಸಮೇತ ಬಿದ್ದ ಮರಗಳೆಲ್ಲ ರಸ್ತೆಗೆ ಬಿದ್ದಿವೆ. ಅದನ್ನೆಲ್ಲ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಪಾಕ್​ ಮಾಧ್ಯಮಗಳು ವರದಿ ಮಾಡಿವೆ.  ಸದ್ಯ ಖೈಬರ್​ ಪಖ್ತುಂಖ್ವಾ, ಪಂಜಾಬ್​, ಇಸ್ಲಮಾಬಾದ್​ ಮತ್ತು ಬಲೂಚಿಸ್ತಾದ ಪೂರ್ವಭಾಗಗಳಲ್ಲಿ, ವಿಪತ್ತು ನಿರ್ವಹಣಾ ಪ್ರಾಧಿಕಾರ ಮಳೆಯ ಎಚ್ಚರಿಕೆ ನೀಡಿದೆ. ಸ್ಥಳೀಯರು ಜಾಗರೂಕರಾಗಿ ಇರಬೇಕು ಎಂದು ಹೇಳಿದೆ.

ಇದನ್ನೂ ಓದಿ: Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ

Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

Published On - 11:14 am, Mon, 13 September 21

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ