AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ
ಕೆನಡಾದಲ್ಲಿ ಶೂಟೌಟ್Image Credit source: Reuters
TV9 Web
| Edited By: |

Updated on: Jun 29, 2022 | 9:33 AM

Share

ನವದೆಹಲಿ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಬ್ಯಾಂಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸರು ಇಬ್ಬರು ಗನ್​ಮ್ಯಾನ್​ಗಳನ್ನು ಶೂಟ್ ಮಾಡಿ ಕೊಂದಿದ್ದಾರೆ. ಈ ಶೂಟೌಟ್​ನಲ್ಲಿ 6 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಸಂಭಾವ್ಯ ಸ್ಫೋಟಕ ಸಾಧನವನ್ನು ಪತ್ತೆಹಚ್ಚಿದ ನಂತರ ಹತ್ತಿರದ ಮನೆಗಳಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮಂಗಳವಾರ ಸುಮಾರು 11 ಗಂಟೆಗೆ ಕೆನಡಾದ ವಾಷಿಂಗ್ಟನ್‌ನ ಗಡಿಯ ಸಮೀಪ ಇರುವ ವ್ಯಾಂಕೋವರ್ ದ್ವೀಪದಲ್ಲಿರುವ ಸಾನಿಚ್‌ನಲ್ಲಿರುವ ಬ್ಯಾಂಕ್ ಆಫ್ ಮಾಂಟ್ರಿಯಲ್‌ಗೆ ಆಗಮಿಸಿದರು. ಶಂಕಿತರಿಗೆ ಸಂಬಂಧಿಸಿದ ವಾಹನದಲ್ಲಿ ಸಂಭಾವ್ಯ ಸ್ಫೋಟಕ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಆ ಸ್ಥಳದ ಸಮೀಪದಲ್ಲಿರುವ ಮನೆಗಳು ಮತ್ತು ಅಂಗಡಿಗಳನ್ನು ಸ್ಥಳಾಂತರಿಸಲಾಯಿತು.

ಇದನ್ನೂ ಓದಿ: ವಾಷಿಂಗ್ಟನ್ ಡಿಸಿಯಲ್ಲಿ ಶೂಟೌಟ್; 15 ವರ್ಷದ ಯುವಕ ಸಾವು, ಪೊಲೀಸ್ ಸೇರಿ ಮೂವರಿಗೆ ಗಾಯ

ಬಳಿಕ, ಬ್ಯಾಂಕ್​ನೊಳಗೆ ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಬ್ಯಾಂಕ್​ನೊಳಗೆ ನುಗ್ಗಿದ ಪೊಲೀಸರು ಅಲ್ಲಿದ್ದ ಗನ್​ಮ್ಯಾನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆ ಗನ್​ಮ್ಯಾನ್​ಗಳು ಶಸ್ತ್ರಸಜ್ಜಿತರಾಗಿದ್ದರು ಮತ್ತು ರಕ್ಷಾಕವಚವನ್ನು ಧರಿಸಿದ್ದರು ಎಂದು ಸಾನಿಚ್ ಪೊಲೀಸ್ ಮುಖ್ಯಸ್ಥ ಡೀನ್ ಡುಥಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ, ಅವರ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?