AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

ಕೆನಡಾದ ಬ್ಯಾಂಕ್​​ನಲ್ಲಿ ಶೂಟೌಟ್; ಇಬ್ಬರು ಗನ್​ಮ್ಯಾನ್​​ಗಳು ಸಾವು, 6 ಪೊಲೀಸರಿಗೆ ಗಾಯ
ಕೆನಡಾದಲ್ಲಿ ಶೂಟೌಟ್Image Credit source: Reuters
TV9 Web
| Edited By: |

Updated on: Jun 29, 2022 | 9:33 AM

Share

ನವದೆಹಲಿ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಬ್ಯಾಂಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸರು ಇಬ್ಬರು ಗನ್​ಮ್ಯಾನ್​ಗಳನ್ನು ಶೂಟ್ ಮಾಡಿ ಕೊಂದಿದ್ದಾರೆ. ಈ ಶೂಟೌಟ್​ನಲ್ಲಿ 6 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಸಂಭಾವ್ಯ ಸ್ಫೋಟಕ ಸಾಧನವನ್ನು ಪತ್ತೆಹಚ್ಚಿದ ನಂತರ ಹತ್ತಿರದ ಮನೆಗಳಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮಂಗಳವಾರ ಸುಮಾರು 11 ಗಂಟೆಗೆ ಕೆನಡಾದ ವಾಷಿಂಗ್ಟನ್‌ನ ಗಡಿಯ ಸಮೀಪ ಇರುವ ವ್ಯಾಂಕೋವರ್ ದ್ವೀಪದಲ್ಲಿರುವ ಸಾನಿಚ್‌ನಲ್ಲಿರುವ ಬ್ಯಾಂಕ್ ಆಫ್ ಮಾಂಟ್ರಿಯಲ್‌ಗೆ ಆಗಮಿಸಿದರು. ಶಂಕಿತರಿಗೆ ಸಂಬಂಧಿಸಿದ ವಾಹನದಲ್ಲಿ ಸಂಭಾವ್ಯ ಸ್ಫೋಟಕ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಆ ಸ್ಥಳದ ಸಮೀಪದಲ್ಲಿರುವ ಮನೆಗಳು ಮತ್ತು ಅಂಗಡಿಗಳನ್ನು ಸ್ಥಳಾಂತರಿಸಲಾಯಿತು.

ಇದನ್ನೂ ಓದಿ: ವಾಷಿಂಗ್ಟನ್ ಡಿಸಿಯಲ್ಲಿ ಶೂಟೌಟ್; 15 ವರ್ಷದ ಯುವಕ ಸಾವು, ಪೊಲೀಸ್ ಸೇರಿ ಮೂವರಿಗೆ ಗಾಯ

ಬಳಿಕ, ಬ್ಯಾಂಕ್​ನೊಳಗೆ ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಬ್ಯಾಂಕ್​ನೊಳಗೆ ನುಗ್ಗಿದ ಪೊಲೀಸರು ಅಲ್ಲಿದ್ದ ಗನ್​ಮ್ಯಾನ್​ಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆ ಗನ್​ಮ್ಯಾನ್​ಗಳು ಶಸ್ತ್ರಸಜ್ಜಿತರಾಗಿದ್ದರು ಮತ್ತು ರಕ್ಷಾಕವಚವನ್ನು ಧರಿಸಿದ್ದರು ಎಂದು ಸಾನಿಚ್ ಪೊಲೀಸ್ ಮುಖ್ಯಸ್ಥ ಡೀನ್ ಡುಥಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ, ಅವರ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಆರು ಪೊಲೀಸ್ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರಿಗೆ ಆಪರೇಷನ್ ಮಾಡಲಾಗಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್