AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಮಾರ್ಗ ಮಧ್ಯದಲ್ಲಿ ಡಿಕ್ಕಿ ಹೊಡೆದ ಎರಡು ವಿಮಾನಗಳು; ಮೂವರು ಪೈಲಟ್​​ಗಳು ಮೃತಪಟ್ಟಿದ್ದಾಗಿ ವರದಿ

ದಕ್ಷಿಣ ಕೊರಿಯಾದ ಆಗ್ನೇಯ ನಗರವಾದ ಸಚೆನ್​​ನಲ್ಲಿ ಘಟನೆ ನಡೆದಿದ್ದಾಗಿ ಅಲ್ಲಿನ ಏರ್​ಫೋರ್ಸ್​ ಹೇಳಿದೆ. ಪೈಲಟ್​ಗಳು ಸತ್ತಿದ್ದನ್ನು ಏರ್​ಫೋರ್ಸ್​ ದೃಢಪಡಿಸಿಲ್ಲ.

ವಾಯುಮಾರ್ಗ ಮಧ್ಯದಲ್ಲಿ ಡಿಕ್ಕಿ ಹೊಡೆದ ಎರಡು ವಿಮಾನಗಳು; ಮೂವರು ಪೈಲಟ್​​ಗಳು ಮೃತಪಟ್ಟಿದ್ದಾಗಿ ವರದಿ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Apr 01, 2022 | 1:22 PM

Share

ಸಿಯೋಲ್​: ದಕ್ಷಿಣ ಕೊರಿಯಾದ  ಏರ್​ಫೋರ್ಸ್​ಗೆ ಸೇರಿದ ಎರಡು ತರಬೇತಿ ವಿಮಾನಗಳು ವಾಯು ಮಾರ್ಗದಲ್ಲಿ (ಆಕಾಶದಲ್ಲಿ ಹಾರಾಟ ನಡೆಸುತ್ತಿರುವ ಸಂದರ್ಭ) ಡಿಕ್ಕಿ ಹೊಡೆದುಕೊಂಡಿದ್ದು, ಮೂವರು ಪೈಲಟ್​ಗಳು ಮೃತಪಟ್ಟಿದ್ದು, ಇನ್ನೊಬ್ಬ ಪೈಲಟ್​ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಹೀಗೆ ವಿಮಾನಗಳು ಹಾರಾಟ ನಡೆಸುತ್ತಿರುವಾಗ ವಾಯುಮಾರ್ಗ ಮಧ್ಯೆ ಡಿಕ್ಕಿಯಾಗುವುದು ಅಪರೂಪದ ಪ್ರಕರಣ ಎಂದೂ ಹೇಳಲಾಗಿದೆ.

ದಕ್ಷಿಣ ಕೊರಿಯಾದ ಆಗ್ನೇಯ ನಗರವಾದ ಸಚೆನ್​​ನಲ್ಲಿ ಘಟನೆ ನಡೆದಿದ್ದಾಗಿ ಅಲ್ಲಿನ ಏರ್​ಫೋರ್ಸ್​ ಹೇಳಿದೆ. ಪೈಲಟ್​ಗಳು ಸತ್ತಿದ್ದನ್ನು ಏರ್​ಫೋರ್ಸ್​ ದೃಢಪಡಿಸಿಲ್ಲ. ಆದರೆ ದಕ್ಷಿಣ ಕೊರಿಯಾದ ಸುದ್ದಿ ಮಾಧ್ಯಮ ಯೊನ್ಹಾಪ್​ ಈ ಬಗ್ಗೆ ವರದಿ ಮಾಡಿದೆ. ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಕೆಳಗೆ ಬಿದ್ದಿವೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸುಮಾರು 30 ಸಿಬ್ಬಂದಿ ತೆರಳಿದ್ದಾರೆ. ಅಷ್ಟೇ ಅಲ್ಲ, ರಕ್ಷಣಾ ಪಡೆಗಳೂ ಧಾವಿಸಿವೆ ಎನ್ನಲಾಗಿದೆ.

ಇತ್ತೀಚೆಗೆ ಚೀನಾದಲ್ಲಿ ಭೀಕರ ವಿಮಾನ ಅಪಘಾತ ಆಗಿತ್ತು. ಒಟ್ಟು 133 ಪ್ರಯಾಣಿಕರಿದ್ದ, ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ 737 ವಿಮಾನ ಪತನ ಆಗಿತ್ತು. ಕುನ್ಮಿಂಗ್​ ನಗರದಿಂದ ಗುವಾಂಗ್​ಝೌಗೆ ತೆರಳುತ್ತಿದ್ದ ವಿಮಾನ ಗುವಾಂಗ್ಸ್ಕಿ ಪ್ರದೇಶದ ವುಝೌ ಬಳಿ, ಪರ್ವತ ಪ್ರದೇಶದಲ್ಲಿ ವಾಯುಗಾಮಿ ಸಂಪರ್ಕ ಕಳೆದುಕೊಂಡು ಅದೇ ಜಾಗದಲ್ಲಿಯೇ ಅಪಘಾತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ಎಲ್ಲ 133 ಪ್ರಯಾಣಿಕರೂ ಮೃತಪಟ್ಟಿದ್ದರು. ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ವಿಮಾನ ಅಪಘಾತ ಇದಾಗಿದೆ. ಚೀನಾ ವಿಮಾನ ಪತನದ ಭಯ ಹುಟ್ಟಿಸುವ ವಿಡಿಯೋಗಳು ವೈರಲ್ ಆಗಿದ್ದವು.

ಇದನ್ನೂ ಓದಿ: Literature: ನೆರೆನಾಡ ನುಡಿಯೊಳಗಾಡಿ; ಪ್ರಾಣಿಯಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲೂ ಆಗುತ್ತಿರಲಿಲ್ಲ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್