AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಮಾರ್ಗ ಮಧ್ಯದಲ್ಲಿ ಡಿಕ್ಕಿ ಹೊಡೆದ ಎರಡು ವಿಮಾನಗಳು; ಮೂವರು ಪೈಲಟ್​​ಗಳು ಮೃತಪಟ್ಟಿದ್ದಾಗಿ ವರದಿ

ದಕ್ಷಿಣ ಕೊರಿಯಾದ ಆಗ್ನೇಯ ನಗರವಾದ ಸಚೆನ್​​ನಲ್ಲಿ ಘಟನೆ ನಡೆದಿದ್ದಾಗಿ ಅಲ್ಲಿನ ಏರ್​ಫೋರ್ಸ್​ ಹೇಳಿದೆ. ಪೈಲಟ್​ಗಳು ಸತ್ತಿದ್ದನ್ನು ಏರ್​ಫೋರ್ಸ್​ ದೃಢಪಡಿಸಿಲ್ಲ.

ವಾಯುಮಾರ್ಗ ಮಧ್ಯದಲ್ಲಿ ಡಿಕ್ಕಿ ಹೊಡೆದ ಎರಡು ವಿಮಾನಗಳು; ಮೂವರು ಪೈಲಟ್​​ಗಳು ಮೃತಪಟ್ಟಿದ್ದಾಗಿ ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 01, 2022 | 1:22 PM

Share

ಸಿಯೋಲ್​: ದಕ್ಷಿಣ ಕೊರಿಯಾದ  ಏರ್​ಫೋರ್ಸ್​ಗೆ ಸೇರಿದ ಎರಡು ತರಬೇತಿ ವಿಮಾನಗಳು ವಾಯು ಮಾರ್ಗದಲ್ಲಿ (ಆಕಾಶದಲ್ಲಿ ಹಾರಾಟ ನಡೆಸುತ್ತಿರುವ ಸಂದರ್ಭ) ಡಿಕ್ಕಿ ಹೊಡೆದುಕೊಂಡಿದ್ದು, ಮೂವರು ಪೈಲಟ್​ಗಳು ಮೃತಪಟ್ಟಿದ್ದು, ಇನ್ನೊಬ್ಬ ಪೈಲಟ್​ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಹೀಗೆ ವಿಮಾನಗಳು ಹಾರಾಟ ನಡೆಸುತ್ತಿರುವಾಗ ವಾಯುಮಾರ್ಗ ಮಧ್ಯೆ ಡಿಕ್ಕಿಯಾಗುವುದು ಅಪರೂಪದ ಪ್ರಕರಣ ಎಂದೂ ಹೇಳಲಾಗಿದೆ.

ದಕ್ಷಿಣ ಕೊರಿಯಾದ ಆಗ್ನೇಯ ನಗರವಾದ ಸಚೆನ್​​ನಲ್ಲಿ ಘಟನೆ ನಡೆದಿದ್ದಾಗಿ ಅಲ್ಲಿನ ಏರ್​ಫೋರ್ಸ್​ ಹೇಳಿದೆ. ಪೈಲಟ್​ಗಳು ಸತ್ತಿದ್ದನ್ನು ಏರ್​ಫೋರ್ಸ್​ ದೃಢಪಡಿಸಿಲ್ಲ. ಆದರೆ ದಕ್ಷಿಣ ಕೊರಿಯಾದ ಸುದ್ದಿ ಮಾಧ್ಯಮ ಯೊನ್ಹಾಪ್​ ಈ ಬಗ್ಗೆ ವರದಿ ಮಾಡಿದೆ. ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಕೆಳಗೆ ಬಿದ್ದಿವೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸುಮಾರು 30 ಸಿಬ್ಬಂದಿ ತೆರಳಿದ್ದಾರೆ. ಅಷ್ಟೇ ಅಲ್ಲ, ರಕ್ಷಣಾ ಪಡೆಗಳೂ ಧಾವಿಸಿವೆ ಎನ್ನಲಾಗಿದೆ.

ಇತ್ತೀಚೆಗೆ ಚೀನಾದಲ್ಲಿ ಭೀಕರ ವಿಮಾನ ಅಪಘಾತ ಆಗಿತ್ತು. ಒಟ್ಟು 133 ಪ್ರಯಾಣಿಕರಿದ್ದ, ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ 737 ವಿಮಾನ ಪತನ ಆಗಿತ್ತು. ಕುನ್ಮಿಂಗ್​ ನಗರದಿಂದ ಗುವಾಂಗ್​ಝೌಗೆ ತೆರಳುತ್ತಿದ್ದ ವಿಮಾನ ಗುವಾಂಗ್ಸ್ಕಿ ಪ್ರದೇಶದ ವುಝೌ ಬಳಿ, ಪರ್ವತ ಪ್ರದೇಶದಲ್ಲಿ ವಾಯುಗಾಮಿ ಸಂಪರ್ಕ ಕಳೆದುಕೊಂಡು ಅದೇ ಜಾಗದಲ್ಲಿಯೇ ಅಪಘಾತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ಎಲ್ಲ 133 ಪ್ರಯಾಣಿಕರೂ ಮೃತಪಟ್ಟಿದ್ದರು. ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ವಿಮಾನ ಅಪಘಾತ ಇದಾಗಿದೆ. ಚೀನಾ ವಿಮಾನ ಪತನದ ಭಯ ಹುಟ್ಟಿಸುವ ವಿಡಿಯೋಗಳು ವೈರಲ್ ಆಗಿದ್ದವು.

ಇದನ್ನೂ ಓದಿ: Literature: ನೆರೆನಾಡ ನುಡಿಯೊಳಗಾಡಿ; ಪ್ರಾಣಿಯಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲೂ ಆಗುತ್ತಿರಲಿಲ್ಲ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್