AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ

ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ
ಅಪಘಾತದ ದೃಶ್ಯImage Credit source: Twitter
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 16, 2022 | 5:25 PM

Share

ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ ಪ್ಯಾಸೆಂಜರ್ ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ(Accident) 20 ಮಂದಿ ಸಜೀವ ದಹನವಾಗಿದ್ದಾರೆ. ಮೂರು ದಿನಗಳಲ್ಲಿ ಸಂಭವಿಸಿದ ಎರಡನೇ ದೊಡ್ಡ ಅಪಘಾತ ಇದಾಗಿದೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ. ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.ಅಪಘಾತ ಸಂಭವಿಸಿದ ರಸ್ತೆಯಲ್ಲಿ ಹಲವಾರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿದೆ. ಲಾಹೋರ್​​ ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಸುಟ್ಟು ಕರಕಲಾಗಿದ್ದಾರೆ. ಎರಡೂ ವಾಹನಗಳು ಗುದ್ದಿದ ನಂತರ ಬೆಂಕಿ ಹತ್ತಿಕೊಂಡಿದ್ದು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 6 ಮಂದಿಗೆ ಸುಟ್ಟಗಳಾಗಿದ್ದು ಅವರನ್ನು ಮುಲ್ತಾನ್ ನಲ್ಲಿರುವ ನಿಶ್ತಾರ್ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೆಸ್ಕ್ಯೂ 1122 ವಕ್ತಾರ ಹೇಳಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ ಅವರು.

ಪ್ರಯಾಣಿಕರ ದೇಹ ಸುಟ್ಟು ಕರಕಲಾಗಿದ್ದು ಗುರುತು ಸಿಗುತ್ತಿಲ್ಲ. ಡಿಎನ್ಎ ಪರೀಕ್ಷೆ ನಂತರವೇ ಇವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರ ಹೇಳಿದ್ದಾರೆ ಅಪಘಾತದ ತಕ್ಷಣವೇ ಬೆಂಕಿ ಹತ್ತಿಕೊಂಡಿದ್ದರಿಂದ ಅಗ್ನಿಶಾಮಕ ದಳದವರಿಗೆ ರಕ್ಷಣಾ ಕಾರ್ಯ ಮಾಡುವುದೂ ಕಷ್ಟವಾಗಿತ್ತು ಎಂದು ಅವರು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಪರ್ವೇಜ್ ಇಲಾಹಿ ಈ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.ಅದೇ ವೇಳೆ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಕುಟುಂಬದವರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶನಿವಾರ ಸಾಮಾಗ್ರಿ ಹೇರಿಕೊಂಡು ಬರುತ್ತಿದ್ದ ಟ್ರಕ್- ಬಸ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

Published On - 4:58 pm, Tue, 16 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ