AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ

ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಬಸ್-ತೈಲ ಟ್ಯಾಂಕರ್​​ಗೆ ಡಿಕ್ಕಿ: 20 ಮಂದಿ ಸಜೀವ ದಹನ
ಅಪಘಾತದ ದೃಶ್ಯImage Credit source: Twitter
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 16, 2022 | 5:25 PM

Share

ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ ಪ್ಯಾಸೆಂಜರ್ ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ(Accident) 20 ಮಂದಿ ಸಜೀವ ದಹನವಾಗಿದ್ದಾರೆ. ಮೂರು ದಿನಗಳಲ್ಲಿ ಸಂಭವಿಸಿದ ಎರಡನೇ ದೊಡ್ಡ ಅಪಘಾತ ಇದಾಗಿದೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ. ಲಾಹೋರ್​​ನಿಂದ ಸರಿಸುಮಾರು 350 ಕಿಮಿ ದೂರವಿರುವ ಮುಲ್ತಾನ್​​ನಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವೇ ಇದಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.ಅಪಘಾತ ಸಂಭವಿಸಿದ ರಸ್ತೆಯಲ್ಲಿ ಹಲವಾರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿದೆ. ಲಾಹೋರ್​​ ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಸುಟ್ಟು ಕರಕಲಾಗಿದ್ದಾರೆ. ಎರಡೂ ವಾಹನಗಳು ಗುದ್ದಿದ ನಂತರ ಬೆಂಕಿ ಹತ್ತಿಕೊಂಡಿದ್ದು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 6 ಮಂದಿಗೆ ಸುಟ್ಟಗಳಾಗಿದ್ದು ಅವರನ್ನು ಮುಲ್ತಾನ್ ನಲ್ಲಿರುವ ನಿಶ್ತಾರ್ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೆಸ್ಕ್ಯೂ 1122 ವಕ್ತಾರ ಹೇಳಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದ್ದಾರೆ ಅವರು.

ಪ್ರಯಾಣಿಕರ ದೇಹ ಸುಟ್ಟು ಕರಕಲಾಗಿದ್ದು ಗುರುತು ಸಿಗುತ್ತಿಲ್ಲ. ಡಿಎನ್ಎ ಪರೀಕ್ಷೆ ನಂತರವೇ ಇವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರ ಹೇಳಿದ್ದಾರೆ ಅಪಘಾತದ ತಕ್ಷಣವೇ ಬೆಂಕಿ ಹತ್ತಿಕೊಂಡಿದ್ದರಿಂದ ಅಗ್ನಿಶಾಮಕ ದಳದವರಿಗೆ ರಕ್ಷಣಾ ಕಾರ್ಯ ಮಾಡುವುದೂ ಕಷ್ಟವಾಗಿತ್ತು ಎಂದು ಅವರು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಪರ್ವೇಜ್ ಇಲಾಹಿ ಈ ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.ಅದೇ ವೇಳೆ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಕುಟುಂಬದವರಿಗೆ ಸಹಾಯ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶನಿವಾರ ಸಾಮಾಗ್ರಿ ಹೇರಿಕೊಂಡು ಬರುತ್ತಿದ್ದ ಟ್ರಕ್- ಬಸ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

Published On - 4:58 pm, Tue, 16 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್