AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್​​ನಲ್ಲಿ ಸೇರಿದ್ದಾರೆ 20 ಸಾವಿರ ವಿದೇಶಿ ಸ್ವಯಂ ಸೇವಕರು; ಭಾರತದವರೂ ಇದ್ದಾರೆ !

ತಾವು ಇಂಟರ್​ನ್ಯಾಷನಲ್​ ಬ್ರಿಗೇಡ್​ ರಚನೆ ಮಾಡುತ್ತಿದ್ದೇವೆ. ಉಕ್ರೇನ್​ ಪರ ಹೋರಾಟ ಮಾಡಲು ಇಚ್ಛೆ ಇರುವ, ಪೂರ್ವ ಯುರೋಪ್​​ನ ಇತರ ದೇಶಗಳ ನಾಗರಿಕರು, ಸೈನಿಕರು ಈ ಬ್ರಿಗೇಡ್​ ಸೇರ್ಪಡೆಯಾಗಬಹುದು ಎಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದರು.

ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್​​ನಲ್ಲಿ ಸೇರಿದ್ದಾರೆ 20 ಸಾವಿರ ವಿದೇಶಿ ಸ್ವಯಂ ಸೇವಕರು; ಭಾರತದವರೂ ಇದ್ದಾರೆ !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 09, 2022 | 12:50 PM

Share

ರಷ್ಯಾ (Russia) ವಿರುದ್ಧ ಹೋರಾಟದಲ್ಲಿ ಉಕ್ರೇನ್​ ಸೇನೆಯಷ್ಟೇ ಅಲ್ಲ, ಅಲ್ಲಿನ ನಾಗರಿಕರೂ ಕೈಜೋಡಿಸಿದ್ದಾರೆ. ಇವರೊಂದಿಗೆ ಸುಮಾರು 52 ಇತರ ದೇಶಗಳ 20 ಸಾವಿರ ಸೈನಿಕರು ಕೈಜೋಡಿಸಿದ್ದಾರೆ. ಅಂದರೆ ಇವರೆಲ್ಲ ಉಕ್ರೇನ್​​ನಲ್ಲಿ ನೆಲದಲ್ಲಿ ನಿಂತು ರಷ್ಯಾ ಸೈನಿಕರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಉಕ್ರೇನ್​ನ ಪ್ರಮುಖ ಇಂಗ್ಲಿಷ್​ ಪತ್ರಿಕೆಯಾದ ಕೀವ್​ ಇಂಡಿಪೆಂಡೆಂಟ್​ ವರದಿ ಮಾಡಿದೆ. ಅಷ್ಟೇ ಅಲ್ಲ, ಇವರೆಲ್ಲ ಉಕ್ರೇನ್​ ಪೌರತ್ವ ಪಡೆಯಲು ಇಚ್ಛಿಸಿದ್ದೇ ಆದರೆ, ಅರ್ಜಿ ಸಲ್ಲಿಸಬಹುದು ಎಂದು ಅಲ್ಲಿನ ಸರ್ಕಾರ ಹೇಳಿದ್ದಾಗಿಯೂ ಪತ್ರಿಕೆ ವರದಿಯಲ್ಲಿ ಉಲ್ಲೇಖಿಸಿದೆ.

ಟ್ವಿಟರ್​ ಅಕೌಂಟ್​ನಲ್ಲಿ ಕೂಡ ಪೋಸ್ಟ್ ಮಾಡಿರುವ ಕೀವ್ ಇಂಡಿಪೆಂಡೆಂಟ್​ ಪತ್ರಿಕೆ, ಈಗಾಗಲೇ ಹಲವು ವಿದೇಶಿಯರು ಉಕ್ರೇನ್​​ನಲ್ಲಿದ್ದು, ಅವರೀಗ ರಷ್ಯಾ ದಾಳಿಯ ವಿರುದ್ಧ ಹೋರಾಟಕ್ಕೆ ಕೈಗೆ ಬಂದೂಕು ಎತ್ತಿಕೊಂಡಿದ್ದಾರೆ. ಅವರು ಬಯಸಿದರೆ ಉಕ್ರೇನ್​ ಪೌರತ್ವವನ್ನೂ ನೀಡಲಾಗುವುದು ಎಂದು ಆಂತರಿಕ ವ್ಯವಹಾರಗಳ ಸಚಿವಾಲಯದ ಕಿರಿಯ ಸಚಿವ ಯೆವ್ಹೆನ್​ ಯೆನಿನ್​ ಹೇಳಿದ್ದಾರೆ. ಈಗಾಗಲೇ ಸುಮಾರು 20 ಸಾವಿರ ವಿದೇಶಿಯರು ಉಕ್ರೇನ್​ ಸೈನ್ಯ ಸೇರಿಕೊಂಡಿದ್ದಾರೆ ಎಂದು ಹೇಳಿದೆ.

ಫೆಬ್ರವರಿ 24ರಿಂದ ರಷ್ಯಾ ಉಕ್ರೇನ್​ ಮೇಲೆ ದಂಡೆತ್ತಿ ಹೋಗಿದೆ. ಅದಾಗಿ ಮೂರನೇ ದಿನಕ್ಕೆ ಅಂದರೆ ಫೆ.27ರಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದೇಶವನ್ನುದ್ದೇಶಿಸಿ ಮಾತನಾಡಿ, ತಾವು ಇಂಟರ್​ನ್ಯಾಷನಲ್​ ಬ್ರಿಗೇಡ್​ ರಚನೆ ಮಾಡುತ್ತಿದ್ದೇವೆ. ಉಕ್ರೇನ್​ ಪರ ಹೋರಾಟ ಮಾಡಲು ಇಚ್ಛೆ ಇರುವ, ಪೂರ್ವ ಯುರೋಪ್​​ನ ಇತರ ದೇಶಗಳ ನಾಗರಿಕರು, ಸೈನಿಕರು ಈ ಬ್ರಿಗೇಡ್​ ಸೇರ್ಪಡೆಯಾಗಬಹುದು. ಹೀಗೆ ಸ್ವಯಂಸೇವಕರಾಗಿ ಬರಲು ಇಚ್ಛಿಸುವವರು ತಮ್ಮ ದೇಶದಲ್ಲಿರುವ ಉಕ್ರೇನ್​ ರಾಯಭಾರಿ ಕಚೇರಿಯಲ್ಲಿ ಹೆಸರು ನೋಂದಾಯಿಸಿ, ಇಲ್ಲಿಗೆ ಬರಬಹುದು ಎಂದು ಹೇಳಿದ್ದರು. ಈ ಕರೆಗೆ ವಿದೇಶಗಳ ಅನೇಕರ ಸ್ವಯಂಸೇವಕರು ಉಕ್ರೇನ್​ಗೆ ತಲುಪಿದ್ದಾರೆ. ಭಾರತದ ಕೆಲವರೂ ಕೂಡ ಉಕ್ರೇನ್​​ನಲ್ಲಿದ್ದು ರಷ್ಯಾ ವಿರುದ್ಧ ಯುದ್ಧದಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾ ವಿರುದ್ಧದ ಉಕ್ರೇನ್ ಹೋರಾಟ ಬೆಂಬಲಿಸಿ ಶಸ್ತ್ರ ಹಿಡಿಯಲು ಸಿದ್ಧರಾದ ಕೆಲ ಭಾರತೀಯರು

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!