AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಿ ತುದಿಯಲ್ಲಿ ನೇತಾಡುತ್ತಿದೆ ಅಧ್ಯಕ್ಷರ ಗೆಲುವು.. ಯಾರಾಗಲಿದ್ದಾರೆ ವೈಟ್​ಹೌಸ್ ಅಧಿಪತಿ?

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ. ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 5-6 […]

ಕತ್ತಿ ತುದಿಯಲ್ಲಿ ನೇತಾಡುತ್ತಿದೆ ಅಧ್ಯಕ್ಷರ ಗೆಲುವು.. ಯಾರಾಗಲಿದ್ದಾರೆ ವೈಟ್​ಹೌಸ್ ಅಧಿಪತಿ?
ಆಯೇಷಾ ಬಾನು
|

Updated on: Nov 05, 2020 | 6:37 AM

Share

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ.

ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 5-6 ರಾಜ್ಯಗಳ ಫಲಿತಾಂಶದಲ್ಲಿ ವಿಳಂಬವಾಗಿರುವುದೇ ಇದಕ್ಕೆ ಕಾರಣ.

ವೈಟ್​ಹೌಸ್​ಗೆ ಹೋಗಲು ‘ಮಿಷಿಗನ್’ ಗೆಲ್ಲಲೇಬೇಕು! ಅಮೆರಿಕದಲ್ಲಿ ಚುನಾವಣಾ ಸಮೀಕ್ಷೆಗಳು ಮಕಾಡೆ ಮಲಗಿವೆ. ಈಬಾರಿ ಜೋ ಬಿಡೆನ್ ಭಾರಿ ಅಂತರದಲ್ಲಿ ಅಧಿಕಾರ ಹಿಡಿಯಲಿದ್ದಾರೆ. ಅಮೆರಿಕದ 46ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಊಹೆ ಹುಸಿಯಾಗಿದೆ. ಈ ಬಾರಿ ಟ್ರಂಪ್ ಹೀನಾಯವಾಗಿ ಸೋಲ್ತಾರೆ ಎನ್ನುತ್ತಿರುವ ನಡುವೆಯೇ ಪುಟಿದೆದ್ದಿರುವ ಹಾಲಿ ಅಧ್ಯಕ್ಷ ಟ್ರಂಪ್ ಬಿಡೆನ್ ಪಡೆಗೆ ಶಾಕ್ ನೀಡಿದ್ದಾರೆ. ತಮ್ಮ ಎದುರಾಳಿ ಬಿಡೆನ್ ವಿರುದ್ಧ ಉತ್ತಮ ಪ್ರದರ್ಶನ ನೀಡಿರುವ ಟ್ರಂಪ್, ಈಗಾಗಲೇ ಗೆಲುವಿಗೆ ಸನಿಹದಲ್ಲಿದ್ದಾರೆ. ಅಲ್ಲದೆ ಅಧ್ಯಕ್ಷರ ಹಣೆಬರಹ ನಿರ್ಧರಿಸುವ ಪೆನ್ಸಿಲ್ವೇನಿಯಾ, ಜಾರ್ಜಿಯಾ ಮತ್ತು ನಾರ್ತ್ ಕೊರೊಲೀನಾ ರಾಜ್ಯಗಳಲ್ಲಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನುಳಿದಂತೆ ಮಿಷಿಗನ್, ವಿಸ್ಕಾನ್ಸಿನ್ ಹಾಗೂ ನೆವಾಡಾ ರಾಜ್ಯಗಳಲ್ಲೂ ಟ್ರಂಪ್ ಬಿಡೆನ್​ಗೆ ಠಕ್ಕರ್ ಕೊಡುತ್ತಿದ್ದಾರೆ.

ಟ್ರಂಪ್ ಗೆಲ್ತಾರಾ..? ಬಿಡೆನ್ ಸೋಲ್ತಾರಾ? ಹೌದು ಈ ಟ್ರಿಲಿಯನ್ ಡಾಲರ್ ಪ್ರಶ್ನೆ ಇಡೀ ಜಗತ್ತನ್ನೇ ಕಾಡುತ್ತಿದೆ. ಆದರೆ ಈವರೆಗೂ ಈ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಏಕೆಂದರೆ ನೆವಾಡಾ ರಾಜ್ಯದಲ್ಲಿ ಮತ ಎಣಿಕೆ ವಿಳಂಬವಾಗಿದ್ದರೆ, ಪೆನ್ಸಿಲ್ವೇನಿಯಾ ರಾಜ್ಯದಲ್ಲಿ ಬ್ಯಾಲಟ್​ಗಳೇ ಇನ್ನು ಬಂದಿಲ್ಲ. ಪೆನ್ಸಿಲ್ವೇನಿಯಾ ರಾಜ್ಯದಲ್ಲಿ ಮತ ಎಣಿಕೆ ಅರ್ಧಕ್ಕೆ ನಿಂತಿದ್ದು, ಯಾರು ಅಧ್ಯಕ್ಷರಾಗುತ್ತಾರೆ ಎಂಬುದನ್ನ ಇನ್ನೂ ಫೈನಲ್ ಮಾಡಲು ಆಗಿಲ್ಲ. ಹೀಗಾಗಿ ವೈಟ್​ಹೌಸ್​ಗೆ ಅಧಿಪತಿ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಫಲಿತಾಂಶದ ನಡುವೆ ಟ್ರಂಪ್ ಹೊಸ ಬಾಂಬ್! ಅಂದಹಾಗೆ ಫಲಿತಾಂಶ ಇನ್ನೂ ಸಂಪೂರ್ಣವಾಗಿ ಹೊರಬಿದ್ದಿಲ್ಲ. ಆದರೂ ಟ್ರಂಪ್ ಗಂಭೀರ ಆರೋಪವನ್ನು ಮಾಡಿದ್ದಾರೆ. ಅದೇನೆಂದರೆ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು. ಮೋಸದ ಮತದಾನ ನಿಲ್ಲಿಸಲು ಅಮೆರಿಕದ ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಮ್ಮ ಹೋರಾಟದ ಬಗ್ಗೆ ಮಾಹಿತಿ ನೀಡಿದ್ರು. ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಹಾಗೂ ಅದನ್ನ ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿ 5 ಲಕ್ಷ ಮತಗಳು ಮಾಯಗಿವೆ ಎಂದಿದ್ದಾರೆ ಟ್ರಂಪ್.

ಒಟ್ನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಇಂದು ಸಂಜೆಯವರೆಗೂ ಅಮೆರಿಕ ಅಧ್ಯಕ್ಷರ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಗುವ ಲಕ್ಷಣಗಳಿಲ್ಲ. ಆದರೆ ಜೋ ಬಿಡೆನ್ ಹಾಗೂ ಡೊನಾಲ್ಡ್ ಟ್ರಂಪ್ ನಡುವೆ ಭಾರಿ ಪೈಪೋಟಿ ಇದೆ. ಅಮೆರಿಕ ಮತದಾರರು ಕೂಡ ಇದೇ ಕ್ಷಣಕ್ಕಾಗಿ ಕಾದು ಕುಳಿತಿದ್ದಾರೆ. ಮತ್ತೊಂದು ಬದಿಯಲ್ಲಿ ತಾವು ಸೋತರೆ ಹೋರಾಟಕ್ಕೆ ಮುಂದಾಗುವುದಾಗಿ ಟ್ರಂಪ್ ಹೇಳಿರುವುದು, ಕಿಚ್ಚು ಹೊತ್ತಿಸಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​