AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾನಾ ಹೋಟೆಲ್​ನಲ್ಲಿ ಅನಿಲ ಸೋರಿಕೆಯಿಂದ ಭಾರೀ ಸ್ಫೋಟ; 22 ಜನ ಸಾವು, 74 ಜನರಿಗೆ ಗಾಯ

ಅದೃಷ್ಟವಶಾತ್ ಹವಾನಾದ 96 ಕೊಠಡಿಗಳ ಹೋಟೆಲ್ ಸರಟೋಗಾದಲ್ಲಿ ಯಾವುದೇ ಪ್ರವಾಸಿಗರು ಉಳಿದುಕೊಂಡಿರಲಿಲ್ಲ. ಇಲ್ಲವಾದರೆ ಇನ್ನಷ್ಟು ದೊಡ್ಡ ದುರಂತ ಸಂಭವಿಸುತ್ತಿತ್ತು ಎಂದು ಹವಾನಾ ಗವರ್ನರ್ ರೆನಾಲ್ಡೊ ಗಾರ್ಸಿಯಾ ತಿಳಿಸಿದ್ದಾರೆ.

ಹವಾನಾ ಹೋಟೆಲ್​ನಲ್ಲಿ ಅನಿಲ ಸೋರಿಕೆಯಿಂದ ಭಾರೀ ಸ್ಫೋಟ; 22 ಜನ ಸಾವು, 74 ಜನರಿಗೆ ಗಾಯ
ಹವಾನಾ ಹೋಟೆಲ್ ಸ್ಫೋಟ
TV9 Web
| Updated By: ಸುಷ್ಮಾ ಚಕ್ರೆ|

Updated on: May 07, 2022 | 8:13 PM

Share

ಕ್ಯೂಬಾ: ನೈಸರ್ಗಿಕ ಅನಿಲ ಸೋರಿಕೆಯಿಂದ ಕ್ಯೂಬಾದ (Cuba) ರಾಜಧಾನಿಯ ಹೃದಯಭಾಗದಲ್ಲಿರುವ ಹವಾನಾದ (Havana Hotel) ಐಷಾರಾಮಿ ಹೋಟೆಲ್​ನಲ್ಲಿ ಭಾರೀ ಸ್ಫೋಟವಾಗಿದ್ದು, ಹೋಟೆಲ್​ನ ಹೊರಗಿನ ಗೋಡೆಗಳು ಸ್ಫೋಟಗೊಂಡಿವೆ. ಈ ದುರಂತದಲ್ಲಿ ಒಂದು ಮಗು ಸೇರಿದಂತೆ 22ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನವೀಕರಣ ಕಾರ್ಯ ನಡೆಯುತ್ತಿದ್ದುದರಿಂದ ಅದೃಷ್ಟವಶಾತ್ ಹವಾನಾದ 96 ಕೊಠಡಿಗಳ ಹೋಟೆಲ್ ಸರಟೋಗಾದಲ್ಲಿ ಯಾವುದೇ ಪ್ರವಾಸಿಗರು ಉಳಿದುಕೊಂಡಿರಲಿಲ್ಲ. ಇಲ್ಲವಾದರೆ ಇನ್ನಷ್ಟು ದೊಡ್ಡ ದುರಂತ ಸಂಭವಿಸುತ್ತಿತ್ತು ಎಂದು ಹವಾನಾ ಗವರ್ನರ್ ರೆನಾಲ್ಡೊ ಗಾರ್ಸಿಯಾ ತಿಳಿಸಿದ್ದಾರೆ.

ಈ ದುರಂತದಲ್ಲಿ ಆರಂಭದಲ್ಲಿ 15ರಿಂದ 20 ಮಂದಿ ಗಾಯಗೊಂಡಿದ್ದರು. ಇದೀಗ ಗಾಯಗೊಂಡವರ ಸಂಖ್ಯೆ 74 ದಾಟಿದೆ ಎಂದು ಆರೋಗ್ಯ ಸಚಿವಾಲಯದ ಆಸ್ಪತ್ರೆ ಸೇವೆಗಳ ಮುಖ್ಯಸ್ಥ ಡಾ ಜೂಲಿಯೊ ಗುರ್ರಾ ಇಜ್ಕ್ವಿರ್ಡೊ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರಲ್ಲಿ 14 ಮಕ್ಕಳೂ ಸೇರಿದ್ದಾರೆ. ಈ ಭಾರೀ ಸ್ಫೋಟದ ಬಳಿಕ ಆ ಹೋಟೆಲ್ ಬಳಿಯ ಕಟ್ಟಡಗಳಲ್ಲಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲಾಗಿದೆ ಎಂದು ಡಿಯಾಜ್-ಕನೆಲ್ ಹೇಳಿದ್ದಾರೆ.

ಹೋಟೆಲ್‌ಗೆ ನೈಸರ್ಗಿಕ ಅನಿಲವನ್ನು ಪೂರೈಸುತ್ತಿದ್ದ ಟ್ರಕ್‌ನಿಂದ ಸ್ಫೋಟ ಸಂಭವಿಸಿದೆ ಎಂದು ಕ್ಯೂಬಾದ ಸ್ಟೇಟ್ ಟಿವಿ ವರದಿ ಮಾಡಿದೆ. ಆದರೆ ಅನಿಲವು ಹೇಗೆ ಸೋರಿಕೆಯಾಯಿತು ಎಂಬುದರ ಕುರಿತು ವಿವರಗಳನ್ನು ನೀಡಿಲ್ಲ. ಸ್ಫೋಟವು ಹೋಟೆಲ್‌ನ ಸುತ್ತ ಗಾಳಿಯಲ್ಲಿ ಹೊಗೆಯನ್ನು ಹರಡಿತು. ಬೀದಿಯಲ್ಲಿ ಜನರು ಇದನ್ನು ಅಚ್ಚರಿಯಿಂದ ದಿಟ್ಟಿಸಿ ನೋಡುತ್ತಿದ್ದರು. ಪ್ರವಾಸೋದ್ಯಮವೇ ಇಲ್ಲಿನ ಪ್ರಮುಖ ಆದಾಯವಾಗಿದ್ದು, ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದ ಧ್ವಂಸಗೊಂಡ ತನ್ನ ಪ್ರಮುಖ ಪ್ರವಾಸೋದ್ಯಮ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಲು ಕ್ಯೂಬಾ ಹೆಣಗಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ.

“ನಾವು ಇನ್ನೂ ಅವಶೇಷಗಳಡಿಯಲ್ಲಿ ಇರುವ ಜನರ ದೊಡ್ಡ ಗುಂಪನ್ನು ಹುಡುಕುತ್ತಿದ್ದೇವೆ” ಎಂದು ಅಗ್ನಿಶಾಮಕ ಇಲಾಖೆಯ ಲೆಫ್ಟಿನೆಂಟ್ ಕರ್ನಲ್ ನೋಯೆಲ್ ಸಿಲ್ವಾ ಹೇಳಿದ್ದಾರೆ. ಇದು ಬಾಂಬ್ ದಾಳಿಯಲ್ಲ, ಇದು ನೈಸರ್ಗಿಕ ಅನಿಲ ಸೋರಿಕೆಯಿಂದ ಉಂಟಾಗಿರುವ ಸ್ಫೋಟ ಎಂದು ಕ್ಯೂಬಾ ಸಚಿವಾಲಯ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?