AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ವೆನೆಜುವೆಲಾದಲ್ಲಿ ಭೀಕರ ಪ್ರವಾಹ, ಭೂಕುಸಿತ; 22 ಜನ ಸಾವು, 50 ಮಂದಿ ನಾಪತ್ತೆ

ವರದಿಗಳ ಪ್ರಕಾರ, ವೆನೆಜುವೆಲಾ ಇತ್ತೀಚಿನ ವಾರಗಳಲ್ಲಿ ಪ್ರವಾಹ ಮತ್ತು ಭೂಕುಸಿತದ ಬಿಕ್ಕಟ್ಟಿನಿಂದ ತತ್ತರಿಸಿದೆ. ಇಲ್ಲಿಯವರೆಗೆ, 22 ಮಂದಿ ಸಾವನ್ನಪ್ಪಿರುವುದು ಪತ್ತೆಯಾಗಿದೆ ಮತ್ತು 52ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.

Big News: ವೆನೆಜುವೆಲಾದಲ್ಲಿ ಭೀಕರ ಪ್ರವಾಹ, ಭೂಕುಸಿತ; 22 ಜನ ಸಾವು, 50 ಮಂದಿ ನಾಪತ್ತೆ
ವೆನೆಜುವೆಲಾದಲ್ಲಿ ಭೂಕುಸಿತ
TV9 Web
| Edited By: |

Updated on: Oct 10, 2022 | 3:51 PM

Share

ವೆನೆಜುವೆಲಾ: ವೆನೆಜುವೆಲಾದಲ್ಲಿ ಭೂಕುಸಿತ (Venezuela Landslide) ಸಂಭವಿಸಿ ಸುಮಾರು 22 ಜನರು ಸಾವನ್ನಪ್ಪಿದ್ದಾರೆ. ನದಿಗಳು ಉಕ್ಕಿ ಹರಿದ ನಂತರ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಉಂಟಾದ ಇತ್ತೀಚಿನ ಮಾರಣಾಂತಿಕ ಪ್ರವಾಹ ವೆನೆಜುವೆಲಾ ದೇಶವನ್ನು ಅಪ್ಪಳಿಸಿದೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಬಿಕ್ಕಟ್ಟು ಪೀಡಿತ ದಕ್ಷಿಣ ಅಮೆರಿಕಾದ ರಾಷ್ಟ್ರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಡಜನ್​ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ.

ಈ ಘಟನೆಯಿಂದ ಮನೆಗಳು ಮತ್ತು ಅಂಗಡಿಗಳು ನಾಶವಾಗಿವೆ. ಸುಮಾರು 1 ಸಾವಿರ ಜನರು ರಕ್ಷಣಾ ಪ್ರಯತ್ನಕ್ಕೆ ಕೈಜೋಡಿಸಿದ್ದಾರೆ ಎಂದು ಆಂತರಿಕ ಮತ್ತು ನ್ಯಾಯ ಸಚಿವ ರೆಮಿಜಿಯೊ ಸೆಬಾಲ್ಲೋಸ್ ತಿಳಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ವೆನೆಜುವೆಲಾದಲ್ಲಿ 5 ನದಿಗಳು ಉಕ್ಕಿ ಹರಿಯುತ್ತಿದ್ದು, ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 52 ಮಂದಿ ನಾಪತ್ತೆಯಾಗಿದ್ದಾರೆ. ವೆನೆಜುವೆಲಾದಲ್ಲಿ ಪ್ರವಾಹವು ಭಾನುವಾರ ಬೆಳಿಗ್ಗೆ ಮೂರು ರಾಜ್ಯಗಳಲ್ಲಿ ಹಾನಿಯನ್ನುಂಟುಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ 25 ಜನ ಸಾವು; ಶಾಲೆಗಳಿಗೆ ರಜೆ ಘೋಷಣೆ

ವರದಿಗಳ ಪ್ರಕಾರ, ವೆನೆಜುವೆಲಾ ಇತ್ತೀಚಿನ ವಾರಗಳಲ್ಲಿ ಪ್ರವಾಹ ಮತ್ತು ಭೂಕುಸಿತದ ಬಿಕ್ಕಟ್ಟಿನಿಂದ ತತ್ತರಿಸಿದೆ. ಇಲ್ಲಿಯವರೆಗೆ, 22 ಮಂದಿ ಸಾವನ್ನಪ್ಪಿರುವುದು ಪತ್ತೆಯಾಗಿದೆ ಮತ್ತು 52ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ನಾವು ಈ ಜನರನ್ನು ಹುಡುಕಲು ಕೆಲಸ ಮಾಡುತ್ತಿದ್ದೇವೆ ಎಂದು ಉಪಾಧ್ಯಕ್ಷ ಡೆಲ್ಸಿ ರೋಡ್ರಿಗಸ್ ಹೇಳಿದ್ದಾರೆ.

ಈ ದುರಂತದ ನಂತರ 3 ದಿನಗಳ ಶೋಕಾಚರಣೆಯನ್ನು ಘೋಷಿಸಲಾಯಿತು. ಬಿಕ್ಕಟ್ಟಿನ ಮಧ್ಯೆ 1 ಸಾವಿರಕ್ಕೂ ಹೆಚ್ಚು ವೆನೆಜುವೆಲಾದವರು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದಾರೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ