AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ

ಪಾಕಿಸ್ತಾನದ ಕ್ವೆಟ್ಟಾದಲ್ಲಿನ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಹೋಗುತ್ತಿದ್ದ ಪ್ರಯಾಣಿಕ ರೈಲಿನ ಮೇಲೆ ಆತ್ಮಾಹುತಿ ದಾಳಿ ನಡೆಸಲಾಗಿದೆ. ಇದರಿಂದಾಗಿ 24 ಜನ ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ರೈಲು ಹಳಿ ತಪ್ಪಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಸ್ಥಳದಲ್ಲಿ ಗುಂಡಿನ ಚಕಮಕಿಯೂ ಕೇಳಿಬಂದಿದೆ. ತಕ್ಷಣ ಆಂಬ್ಯುಲೆನ್ಸ್‌ಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿವೆ. ಈ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಹೊತ್ತುಕೊಂಡಿದೆ.

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ
Quetta Train BlastImage Credit source: AP
ಸುಷ್ಮಾ ಚಕ್ರೆ
|

Updated on: May 24, 2026 | 2:06 PM

Share

ಇಸ್ಲಮಾಬಾದ್, ಮೇ 24: ಪಾಕಿಸ್ತಾನದ (Pakistan) ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿಯಾದ ಕ್ವೆಟ್ಟಾ ನಗರದ ರೈಲ್ವೆ ಹಳಿ ಬಳಿ ಇಂದು ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಭೀಕರ ದುರಂತದಲ್ಲಿ 24 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಪಡೆಗಳ ಮೂಲಗಳು ಖಚಿತಪಡಿಸಿವೆ. ಕ್ವೆಟ್ಟಾದ ಚಮನ್ ಫಾಟಕ್ (Chaman Phatak) ರೈಲ್ವೆ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ.

ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಒಬ್ಬನೇ ಬಂದಿದ್ದ ಆತ್ಮಾಹುತಿ ಬಾಂಬರ್ ಸ್ಫೋಟಕಗಳನ್ನು ತುಂಬಿದ್ದ ವಾಹನವನ್ನು ಸೀದಾ ಮಿಲಿಟರಿ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ. ಈ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ರೈಲಿನ 2 ಬೋಗಿಗಳು ಸಂಪೂರ್ಣವಾಗಿ ಜಖಂಗೊಂಡು ರಸ್ತೆಗೆ ಉರುಳಿಬಿದ್ದಿದೆ. ಆಗ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ: ಬಲೂಚಿಸ್ತಾನದ ಗಣಿಯಲ್ಲಿ ಉಗ್ರರ ದಾಳಿ; ಟರ್ಕಿಶ್ ಪ್ರಜೆ ಸೇರಿದಂತೆ 10 ಜನ ಸಾವು

ಸುತ್ತಮುತ್ತಲಿನ ಹಲವು ಕಿಲೋಮೀಟರ್ ದೂರದವರೆಗೆ ಸ್ಫೋಟದ ಭೀಕರ ಸೌಂಡ್ ಕೇಳಿಸಿದೆ. ಬಲೂಚಿಸ್ತಾನ್ ಪ್ರಾಂತ್ಯದ ರಕ್ಷಣಾ ತಂಡಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಗೊಂಡವರನ್ನು ತಕ್ಷಣವೇ ಕ್ವೆಟ್ಟಾದ ಮಿಲಿಟರಿ ಆಸ್ಪತ್ರೆ ಮತ್ತು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಈ ಬಾಂಬ್ ಸ್ಫೋಟದ ತೀವ್ರತೆಗೆ ರೈಲ್ವೆ ಹಳಿಯ ಪಕ್ಕದಲ್ಲಿದ್ದ 10ಕ್ಕೂ ಹೆಚ್ಚು ವಾಹನಗಳು ಮತ್ತು ಹಲವು ನಾಗರಿಕರ ಮನೆಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ. ಬಲೂಚಿಸ್ತಾನ್ ಗೃಹ ಸಚಿವಾಲಯದ ವಕ್ತಾರ ಬಾಬರ್ ಯೂಸುಫ್‌ಜಾಯ್ ಅವರು, ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಎಲ್ಲಾ ಇಲಾಖೆಗಳನ್ನು ಹೈ ಅಲರ್ಟ್‌ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿನ ಸ್ಫೋಟದ ಹೊಣೆ ಹೊತ್ತ ಬಲೂಚಿಸ್ತಾನ್​​ ಲಿಬರೇಶನ್​​ ಆರ್ಮಿ; ಕೃತ್ಯವೆಸಗಿದ್ದು ಮಹಿಳಾ ಬಾಂಬರ್​​

ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಸ್ಥಳೀಯ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಈ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ರೈಲಿನಲ್ಲಿದ್ದ ಪಾಕಿಸ್ತಾನಿ ಸೇನಾ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ತಮ್ಮ ಸಂಘಟನೆಯ ಆತ್ಮಾಹುತಿ ದಳದ ಸದಸ್ಯ ಈ ದಾಳಿ ನಡೆಸಿದ್ದಾನೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಸ್ಫೋಟದ ಬೆನ್ನಲ್ಲೇ ಆ ಪ್ರದೇಶದಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದೂ ವರದಿಯಾಗಿದೆ.

ಖನಿಜ ಸಂಪತ್ತಿನಿಂದ ಸಮೃದ್ಧವಾಗಿರುವ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪಾಕಿಸ್ತಾನ ಸರ್ಕಾರ ಮತ್ತು ಚೀನಾದ ಒಡೆತನದ ‘ಚೀನಾ-ಪಾಕಿಸ್ತಾನ್ ಆರ್ಥಿಕ ಕಾರಿಡಾರ್’ (CPEC) ಯೋಜನೆಗಳ ವಿರುದ್ಧ ದೀರ್ಘಕಾಲದಿಂದ ಪ್ರತ್ಯೇಕತಾವಾದಿ ಬಂಡುಕೋರರು ಮತ್ತು ಉಗ್ರಗಾಮಿ ಸಂಘಟನೆಗಳು ನಿರಂತರವಾಗಿ ಇಂತಹ ಭೀಕರ ದಾಳಿಗಳನ್ನು ನಡೆಸುತ್ತಾ ಬಂದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು