Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 40 ಮಂದಿ ಸಾವು, 10ಕ್ಕೂ ಹೆಚ್ಚು ಜನ ನಾಪತ್ತೆ

ಆ ಗಣಿಯಲ್ಲಿ 110 ಜನರು ಕೆಲಸ ಮಾಡುತ್ತಿದ್ದರು. ಸ್ಫೋಟ ಉಂಟಾದಾಗ ಅವರಲ್ಲಿ ಕೆಲವರು ತಾವಾಗಿಯೇ ಹೊರಬಂದರು ಮತ್ತು ಅವರಲ್ಲಿ ಕೆಲವರನ್ನು ರಕ್ಷಿಸಲಾಯಿತು.

ಟರ್ಕಿಯಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 40 ಮಂದಿ ಸಾವು, 10ಕ್ಕೂ ಹೆಚ್ಚು ಜನ ನಾಪತ್ತೆ
ಗಣಿ ಸ್ಫೋಟ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 15, 2022 | 3:48 PM

ಅಂಕಾರಾ: ಉತ್ತರ ಟರ್ಕಿಯ (Turkey) ಕಲ್ಲಿದ್ದಲು ಗಣಿಯೊಂದರಲ್ಲಿ ಶನಿವಾರ ಮಿಥೇನ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ 40 ಜನರು ಸಾವನ್ನಪ್ಪಿದ್ದಾರೆ. ಹಾಗೇ, ಇನ್ನೂ 10ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿದ್ದಾರೆ. ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಶುಕ್ರವಾರ ಸಂಜೆಯ ಸಮಯದಲ್ಲಿ ಟರ್ಕಿಯಲ್ಲಿ ನಡೆದ ಮಾರಣಾಂತಿಕ ಕೈಗಾರಿಕಾ ಅಪಘಾತದಿಂದ ಈಗಾಗಲೇ 11 ಜನರನ್ನು ರಕ್ಷಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿರುವ ಸಣ್ಣ ಕಲ್ಲಿದ್ದಲು ಗಣಿಗಾರಿಕೆ ಪಟ್ಟಣವಾದ ಅಮಾಸ್ರಾಗೆ ತುರ್ತಾಗಿ ಪ್ರಯಾಣ ಬೆಳೆಸಿದ ಸಚಿವ ಸುಲೇಮಾನ್ ಸೊಯ್ಲು ಸುದ್ದಿಗಾರರೊಂದಿಗೆ ಮಾತನಾಡಿ, “ಇದು ಬಹಳ ಆಘಾತಕಾರಿ ಘಟನೆ. ನಾವು ನಿಜವಾಗಿಯೂ ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ : ಕರ್ತವ್ಯ ಲೋಪ ಎಸಗಿದ ಇನ್ಸ್​​ಪೆಕ್ಟರ್ ಅಮಾನತು

ಆ ಗಣಿಯಲ್ಲಿ 110 ಜನರು ಕೆಲಸ ಮಾಡುತ್ತಿದ್ದರು. ಸ್ಫೋಟ ಉಂಟಾದಾಗ ಅವರಲ್ಲಿ ಕೆಲವರು ತಾವಾಗಿಯೇ ಹೊರಬಂದರು ಮತ್ತು ಅವರಲ್ಲಿ ಕೆಲವರನ್ನು ರಕ್ಷಿಸಲಾಯಿತು. ಇನ್ನೂ ಹಲವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. 300 ಮತ್ತು 350 ಮೀಟರ್ ನಡುವಿನ 2 ಪ್ರದೇಶಗಳಲ್ಲಿ ಸುಮಾರು 50 ಗಣಿಗಾರರು ಸಿಕ್ಕಿಬಿದ್ದಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ.

ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ತಮ್ಮ ಎಲ್ಲಾ ಇತರ ಕೆಲಸಗಳನ್ನು ರದ್ದುಗೊಳಿಸಿ ಇಂದು ಗಣಿ ಸ್ಫೋಟದ ಸ್ಥಳಕ್ಕೆ ವಿಮಾನದ ಮೂಲಕ ತಲುಪಲಿದ್ದಾರೆ. ಇನ್ನಷ್ಟು ಜನರು ಸಾಯುವಂತಾಗಬಾರದು, ನಮ್ಮ ಗಣಿಗಾರರು ಜೀವಂತವಾಗಿ ಸಿಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಎರ್ಡೊಗನ್ ಟ್ವೀಟ್ ಮಾಡಿದ್ದಾರೆ.

ನಿನ್ನೆ ಸೂರ್ಯಾಸ್ತದ ಕೆಲವೇ ಕ್ಷಣಗಳಲ್ಲಿ ಸ್ಫೋಟ ಸಂಭವಿಸಿದ್ದು, ಕತ್ತಲೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 am, Sat, 15 October 22

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ