AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lahari Pathivada: ಅಮೆರಿಕಾದಲ್ಲಿ ಮತ್ತೊಬ್ಬ ತೆಲುಗು ಯುವತಿಯ ಅನುಮಾನಾಸ್ಪದ ಸಾವು

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲಹರಿ ಹೇಗೆ ಸತ್ತಳು ಎಂಬ ತನಿಖೆ ಇನ್ನೂ ಮುಂದುವರೆದಿದೆ.

Lahari Pathivada: ಅಮೆರಿಕಾದಲ್ಲಿ ಮತ್ತೊಬ್ಬ ತೆಲುಗು ಯುವತಿಯ ಅನುಮಾನಾಸ್ಪದ ಸಾವು
ಅಮೆರಿಕಾದಲ್ಲಿ ಮತ್ತೊಬ್ಬ ತೆಲುಗು ಯುವತಿಯ ಅನುಮಾನಾಸ್ಪದ ಸಾವು
ಸಾಧು ಶ್ರೀನಾಥ್​
|

Updated on:May 18, 2023 | 8:19 PM

Share

ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಇತ್ತೀಚೆಗೆ, ಟೆಕ್ಸಾಸ್‌ನಲ್ಲಿ ನಾಪತ್ತೆಯಾಗಿದ್ದ 25 ವರ್ಷದ ತೆಲುಗು ಹುಡುಗಿ ಲಹರಿ ಪತಿವಾಡ (Lahari Pathivada) 322 ಕಿಲೋಮೀಟರ್ ದೂರದ ಓಕ್ಲಹೋಮಾದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕಪ್ಪು ಬಣ್ಣದ ಟೊಯೊಟಾ ಕಾರಿನಲ್ಲಿ ಕೆಲಸಕ್ಕೆ ತೆರಳಿದ್ದ ಲಹರಿ, ಮರುದಿನದಿಂದ ನಾಪತ್ತೆಯಾಗಿದ್ದರು. ಈ ವಿಷಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಓಕ್ಲಹೋಮಾದಲ್ಲಿ ಮೃತದೇಹ ಪತ್ತೆಯಾದ ವಿಷಯ ಬೆಳಕಿಗೆ ಬಂದಿದೆ.

ಟೆಕ್ಸಾಸ್‌ನ ಮೆಕ್‌ ಇಂಡಿಯನ್ ಮೂಲದ ಲಹರಿ, ಬ್ಲೂ ವ್ಯಾಲಿ ವೆಸ್ಟ್ ಹೈಸ್ಕೂಲ್‌ನಲ್ಲಿ ಓದಿದ್ದಾರೆ. ಕಾನ್ಸಾಸ್ ವಿಶ್ವವಿದ್ಯಾಲಯದಿಂದ ಪದವಿ ಗಳಿಸಿದ್ದಾರೆ. ಅದರ ನಂತರ ಅವರು ಓವರ್ಲ್ಯಾಂಡ್ ಪ್ರಾದೇಶಿಕ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡಿದ್ದಾರೆ. ಮೇ 12ರಂದು ಕರ್ತವ್ಯ ಮುಗಿಸಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಡಲ್ಲಾಸ್‌ನ ಉಪನಗರದಲ್ಲಿ ಲಹರಿ ಕೊನೆಯ ಬಾರಿ ಕಾರು ಚಾಲನೆ ಮಾಡಿರುವುದು ತಿಳಿದುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆಕೆ ನಾಪತ್ತೆಯಾದ ಒಂದು ದಿನದ ನಂತರ ಮೇ 13 ರಂದು ಆಕೆಯ ಶವ ಪತ್ತೆಯಾಗಿತ್ತು.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬದವರು ಹಾಗೂ ಸ್ನೇಹಿತರು ಆಕೆಯ ಸಾವಿನ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ. ಮತ್ತೊಂದೆಡೆ, ಲಹರಿ ಹೇಗೆ ಸತ್ತಳು ಎಂಬ ತನಿಖೆ ಇನ್ನೂ ಮುಂದುವರೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:15 pm, Thu, 18 May 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್