Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ

ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಶ್ವಾಸಕೋಶದ ತೀವ್ರ ನಿಗಾ ಘಟಕ ಇರುವ ಬಳಿ. ನಂತರ ಅದು ಆವರಿಸಿಕೊಳ್ಳುತ್ತ ಹೋಯಿತು. ಆಸ್ಪತ್ರೆಯಿಂದ 90-120 ಜನರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ
ಬಾಗ್ದಾದ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ
Follow us
Lakshmi Hegde
|

Updated on: Apr 25, 2021 | 10:04 AM

ಇರಾಕ್​​ನ ರಾಜಧಾನಿ ಬಾಗ್ದಾದ್​​ದ ಕೊವಿಡ್​ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಅಗ್ನಿದುರಂತದಲ್ಲಿ 27 ರೋಗಿಗಳು ಸಾವನ್ನಪ್ಪಿದ್ದು, 46 ಮಂದಿ ಗಭೀರ ಗಾಯಗೊಂಡಿದ್ದಾರೆ. ಬಾಗ್ದಾದ್​ನ ಆಗ್ನೇಯದಲ್ಲಿರುವ ದಿಯಾಲಾ ಬ್ರಿಜ್​ ಏರಿಯಾದಲ್ಲಿರುವ ಐಬಿಎನ್​​ ಖತೀಬ್ ಆಸ್ಪತ್ರೆಯಲ್ಲಿ ಆಕ್ಸಿಜನ್​ ಟ್ಯಾಂಕ್​ ಸ್ಫೋಟಗೊಂಡ ಪರಿಣಾಮ ಈ ದುರಂತ ನಡೆದಿದೆ.

ಬೆಂಕಿ ಹೊತ್ತು ಉರಿಯುತ್ತಿರುವ ಬೆನ್ನಲ್ಲೇ ಅನೇಕ ಆಂಬುಲೆನ್ಸ್​ಗಳ ಮೂಲಕ ಇಲ್ಲಿನ ರೋಗಿಗಳನ್ನು ರಕ್ಷಿಸುವ ಕಾರ್ಯ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಬೇರೆ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟೇ ಅಲ್ಲ, ಗಾಯಗೊಳ್ಳದೆ ಇರುವವರನ್ನೂ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಶ್ವಾಸಕೋಶದ ತೀವ್ರ ನಿಗಾ ಘಟಕ ಇರುವ ಬಳಿ. ನಂತರ ಅದು ಆವರಿಸಿಕೊಳ್ಳುತ್ತ ಹೋಯಿತು. ಆಸ್ಪತ್ರೆಯಿಂದ 90-120 ಜನರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇರಾಕ್​​ನಲ್ಲಿ 102,5288 ಕೊರೊನಾ ಸೋಂಕಿತರು ಇದ್ದು, ಇದುವರೆಗೆ 15,217 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ನಡುವೆ ಮಾಂಸ ಖರೀದಿಗೆ ಮುಗಿಬಿದ್ದ ಜನ, ಅಂಗಡಿ ಮುಚ್ಚಿಸಿ ಪೊಲೀಸರಿಂದ ವಾರ್ನಿಂಗ್

ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು

27 people have died in a fire Accident in covid 19 hospital of Baghdad hospital

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ