ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ. ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಏನಿದು ಹಾಂಗ್‌ಕಾಂಗ್‌ ಮಾದರಿ? ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ […]

ಕೊರೊನಾ ಕ್ರಿಮಿ ಮಟ್ಟ ಹಾಕಲು ಹಾಂಗ್‌ಕಾಂಗ್‌ ಮಾದರಿ ಜಾರಿ ಆಗುತ್ತದಾ?
ಸಾಧು ಶ್ರೀನಾಥ್​

Updated on: Apr 30, 2020 | 11:02 AM

ಬೆಂಗಳೂರು: ಕೊರೊನಾ ಕ್ರಿಮಿ ಮಟ್ಟ ಹಾಕಲು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಎರಡನೆಯ ಹಂತ ಕೊನೆಗೊಳ್ಳಲು ಇನ್ನು ಮೂರೇ ದಿನ ಬಾಕಿಯಿದೆ. ಈ ಹಂತದಲ್ಲಿ ತೆರವು ಮಾಡಬೇಕೆ, ಬೇಡವೇ ಎಂಬ ಬಗ್ಗೆ ತಜ್ಞರ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ವಿವಿಧ ದೇಶಗಳ ಲಾಕ್ ಡೌನ್ ಎಕ್ಸಿಟ್​ ಪ್ಲಾನ್​ಗಳ ಅಧ್ಯಯನ ನಡೆಸುತ್ತಿರುವ ತಜ್ಞರು, ಮೇ 3 ರ ಬಳಿಕ ಹಾಂಕ್ ಕಾಂಗ್ ಮಾದರಿ ಅನುಸರಿಸುವಂತೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

ಏನಿದು ಹಾಂಗ್‌ಕಾಂಗ್‌ ಮಾದರಿ?
ಹಾಗಾಗಿ ಕೊರೊನಾ ಕಟ್ಟಿಹಾಕಲು,ಲಾಕ್‌ಡೌನ್‌ನಿಂದ ಹೊರಬರಲು ಹಾಂಗ್‌ಕಾಂಗ್‌ ಮಾಡೆಲ್ ಸಾಧ್ಯತೆಯಿದೆ. ಹಾಗಾದರೆ ಏನಿದು ಹಾಂಗ್‌ಕಾಂಗ್‌ ಮಾದರಿ?
ಲಾಕ್‌ಡೌನ್‌ ಮುಂದುವರಿಸದೆ, ಕೋವಿಡ್ ಸೋಂಕಿತರನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವುದು. ಸೋಂಕಿತರ ಸಂಪರ್ಕಕ್ಕೆ ಒಳಗಾದವರನ್ನು ಕಟ್ಟುನಿಟ್ಟಿನಲ್ಲಿ ಕ್ವಾರೆಂಟೈನ್​ಗೆ ಒಳಪಡಿಸುವುದು. ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ನಿಯಮದ ಶಿಸ್ತಿನ ಪಾಲನೆ ಮಾಡುವುದು.. ಈ ಮಾದರಿ ಅಂಶಗಳೇ ಹಾಂಗ್‌ಕಾಂಗ್‌ ಪಾಲಿಸುತ್ತಿರುವ ಸೂತ್ರವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us