AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್​ ದಾಳಿ; ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Pakistan: ಬೈಕ್​​ನಲ್ಲಿ ಬಂದ ಸೂಸೈಡ್​ ಬಾಂಬರ್​ ಚೆಕ್​ಪೋಸ್ಟ್ ಬಳಿ ಕಾನೂನು ಜಾರಿ ಸಂಸ್ಥೆಗೆ ಸೇರಿದ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ದಾಳಿಯಲ್ಲಿ ಮೃತಪಟ್ಟ ಮೂರೂ ಮಂದಿ ಈ ಪ್ಯಾರಾಮಿಲಿಟರಿ ಸಿಬ್ಬಂದಿಯೇ ಆಗಿದ್ದಾರೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್​ ದಾಳಿ; ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಕ್ವೆಟ್ಟಾದಲ್ಲಿ ಬಾಂಬ್​ ದಾಳಿ ನಡೆದ ಸ್ಥಳ
TV9 Web
| Edited By: |

Updated on:Sep 05, 2021 | 3:31 PM

Share

ಮೋಟಾರ್​ ಬೈಕ್​​ನಲ್ಲಿ ಬಂದ ವ್ಯಕ್ತಿಯ ಆತ್ಮಾಹುತಿ ಬಾಂಬ್​ ದಾಳಿ ( Suicide Bomb Attack)ಗೆ ಮೂವರು ಮೃತಪಟ್ಟು, 20 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದಿದೆ. ಈ ದಾಳಿಯ ಹೊಣೆಯನ್ನು ತೆಹ್ರಿಕ್​-ಇ-ತಾಲಿಬಾನ್​ ಪಾಕಿಸ್ತಾನ್ (Tehrik-e-Taliban Pakistan)​ ಸಂಘಟನೆ ಹೊತ್ತುಕೊಂಡಿದೆ. ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದ ದಕ್ಷಿಣ ಭಾಗದಿಂದ ಸುಮಾರು 25 ಕಿಮೀ ದೂರದಲ್ಲಿ, ಕ್ವೆಟ್ಟಾ-ಮಸ್ತುಂಗ್​ ರಸ್ತೆಯ ಅರೆ ಮಿಲಿಟರಿ ಫ್ರಂಟಿಯರ್​ ಕಾರ್ಪ್ಸ್ (ಅರೆಸೇನಾ ಗಡಿ ಪೊಲೀಸ್​) ಇರುವ ಚೆಕ್​ಪಾಯಿಂಟ್​ ಸಮೀಪ ಈ ಆತ್ಮಾಹುತಿ ಬಾಂಬ್​ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಶೇಖ್​ ಜೈದ್​ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೈಕ್​​ನಲ್ಲಿ ಬಂದ ಸೂಸೈಡ್​ ಬಾಂಬರ್​ ಚೆಕ್​ಪೋಸ್ಟ್ ಬಳಿ ಕಾನೂನು ಜಾರಿ ಸಂಸ್ಥೆಗೆ ಸೇರಿದ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ದಾಳಿಯಲ್ಲಿ ಮೃತಪಟ್ಟ ಮೂರೂ ಮಂದಿ ಈ ಪ್ಯಾರಾಮಿಲಿಟರಿ ಸಿಬ್ಬಂದಿಯೇ ಆಗಿದ್ದಾರೆ. ಐಟಿಪಿ ನಡೆಸಿದ ಈ ಸೂಸೈಡ್​ ಬಾಂಬ್​ ದಾಳಿಯನ್ನು ಪ್ರಧಾನಿ ಇಮ್ರಾನ್ ಖಾನ್​ ಖಂಡಿಸಿದ್ದಾರೆ. ದಾಳಿಯಲ್ಲಿ ಹುತಾತ್ಮರಾದವರ ಕುಟುಂಬಕ್ಕೆ ಸಾಂತ್ವನಗಳು ಹಾಗೂ ಗಾಯಗೊಂಡವರು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ವಿದೇಶಿ ಬೆಂಬಲಿತ ಉಗ್ರರಿಂದ ನಮ್ಮನ್ನು ಸದಾಕಾಲ ಸುರಕ್ಷಿತವಾಗಿಡುವ ರಕ್ಷಣಾ ಸಿಬ್ಬಂದಿಗೆ ಸೆಲ್ಯೂಟ್​ ಎಂದು ಹೇಳಿದ್ದಾರೆ.

ಟಿಟಿಪಿ ಸಂಘಟನೆಯ ಸಮಸ್ಯೆಗಳನ್ನು ಇಮ್ರಾನ್​ ಖಾನ್​ ಸರ್ಕಾರ ಶೀಘ್ರವೇ ಬಗೆಹರಿಸಬೇಕು. ಅದನ್ನು ಬಗೆಹರಿಸಬೇಕಾಗಿದ್ದು ಅಫ್ಘಾನಿಸ್ತಾನವಲ್ಲ. ಸಂಘಟನೆಯ ಕಷ್ಟ ಆಲಿಸಿ ಪರಿಹಾರ ಕೊಡುವ ಜವಾಬ್ದಾರಿ ಪಾಕಿಸ್ತಾನಿ ಸರ್ಕಾರ, ಧಾರ್ಮಿಕ ಗುಂಪುಗಳದ್ದೇ ಹೊರತು, ಅಫ್ಘಾನಿಸ್ತಾನದ ತಾಲಿಬಾನಿಗಳದ್ದಲ್ಲ ಎಂದು ತಾಲಿಬಾನ್​ ವಕ್ತಾರ ಜಬಿಹುಲ್ಲಾ ಮುಜಾಹಿದ್​ ಹೇಳಿದ್ದರು. ಈ ಮೂಲಕ ಟಿಟಿಪಿಗೂ ತಮಗೂ ಸಂಬಂಧವಿಲ್ಲ ಎಂದಿದ್ದರು. ಇತ್ತೀಚೆಗೆ ಈ ಬಲೂಚಿಸ್ತಾನ ಸ್ವಾತಂತ್ರ್ಯಕ್ಕೆ ಆಗ್ರಹಿಸಿ ಉಗ್ರರ ದಾಳಿಗಳು ಪದೇಪದೆ ನಡೆಯುತ್ತಿವೆ.

ಏನಿದು ಟಿಟಿಪಿ ಸಂಘಟನೆ? ತೆಹ್ರಿಕ್​ ಇ ತಾಲಿಬಾನ್​ ಪಾಕಿಸ್ತಾನ ಎಂದರೆ ಪಾಕಿಸ್ತಾನ ತಾಲಿಬಾನ್ ಸಂಘಟನೆಯ ಇನ್ನೊಂದು ಹೆಸರು. ಮೂಲತಃ ಅಫ್ಘಾನಿಸ್ತಾನದವರಾದ ಪಶ್ತೂನ್​ ಇಸ್ಲಾಮಿಸ್ಟ್​ನ ಸಶಸ್ತ್ರ ವಿದ್ಯಾರ್ಥಿಗಳ ಸಂಘಟನೆ. ಅಫ್ಘಾನ್​-ಪಾಕಿಸ್ತಾನದ ಗಡಿ ಭಾಗದಲ್ಲಿರುವ ವಿವಿಧ ವಿದ್ಯಾರ್ಥಿ ಭಯೋತ್ಪಾದಕ ಸಂಘಟನೆಗಳ ಅಂಬ್ರೆಲ್ಲಾ ಗುಂಪಾಗಿದೆ. ಅಂದರೆ, ಒಂದೇ ಧ್ಯೇಯವನ್ನಿಟ್ಟು ಕೆಲಸ ಮಾಡುತ್ತಿರುವ ವಿದ್ಯಾರ್ಥಿ ಭಯೋತ್ಪಾದಕ ಸಂಘಟನೆಗಳ ಒಕ್ಕೂಟ. ಪಾಕಿಸ್ತಾನದಲ್ಲಿರುವ ಬಹುತೇಕ ತಾಲಿಬಾನಿ ಗುಂಪುಗಳೆಲ್ಲ ಈ ಟಿಟಿಪಿ ಅಡಿಯಲ್ಲೇ ಬರುತ್ತವೆ.

ಇದನ್ನೂ ಓದಿ: ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ

ಪರಿಸರ ಸ್ನೇಹಿ ಗಣೇಶ ವಿಗ್ರಹಗಳು; ಧಾರವಾಡದ ಕಲಾವಿದ ಕುಟುಂಬದ ಅದ್ಭುತ ಕಾರ್ಯ

Published On - 3:20 pm, Sun, 5 September 21

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು