AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ

ಸಂಕೀರ್ಣ ಭೌತಿಕ ವ್ಯವಸ್ಥೆಯನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಲು ಈ ಮೂವರೂ ವಿಜ್ಞಾನಿಗಳು ನೀಡಿದ ಅಭೂತಪೂರ್ವ ಕೊಡುಗೆಯನ್ನು ಪರಿಗಣಿಸಿ ನೊಬೆಲ್​ ನೀಡಲಾಗುತ್ತಿದೆ ಎಂದು ನೊಬೆಲ್​ ಕಮಿಟಿ ತಿಳಿಸಿದೆ.

Nobel Prize 2021: ಪ್ರಸಕ್ತ ವರ್ಷದ ಭೌತಶಾಸ್ತ್ರ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಈ ಮೂವರು ವಿಜ್ಞಾನಿಗಳಿಗೆ
ಭೌತಶಾಸ್ತ್ರದಲ್ಲಿ ನೊಬೆಲ್​ ಪ್ರಶಸ್ತಿ ಪುರಸ್ಕೃತಗೊಂಡ ವಿಜ್ಞಾನಿಗಳು
Follow us
TV9 Web
| Updated By: Lakshmi Hegde

Updated on:Oct 05, 2021 | 4:48 PM

ಭೌತಶಾಸ್ತ್ರ ಕ್ಷೇತ್ರದಲ್ಲಿ ನೀಡಲಾಗುವ ನೊಬೆಲ್​ ಪ್ರಶಸ್ತಿ(Nobel Prize In Physics)ಗೆ ಈ ಬಾರಿ (2021)ವಿಜ್ಞಾನಿಗಳಾದ ಸಿಯುಕುರೊ ಮನಾಬೆ(Syukuro Manabe), ಕ್ಲಾಸ್ ಹ್ಯಾಸೆಲ್ಮನ್ (Klaus Hasselmann) ಮತ್ತು ಜಾರ್ಜಿಯೊ ಪ್ಯಾರಿಸಿ(Giorgio Parisi) ಪಾತ್ರರಾಗಿದ್ದಾರೆ. ನಿನ್ನೆ ವೈದ್ಯಕೀಯ ಕ್ಷೇತ್ರದ ನೊಬೆಲ್​ ಪ್ರಶಸ್ತಿ ಘೋಷಿಸಿದ್ದ ನೊಬೆಲ್ ಅಸ್ಸೆಂಬ್ಲಿ ಇಂದು ಭೌತಶಾಸ್ತ್ರ ಕ್ಷೇತ್ರಕ್ಕೆ ನೊಬೆಲ್​ ಪ್ರಶಸ್ತಿ ಪ್ರಕಟಿಸಿದೆ. ಸಂಕೀರ್ಣ ಭೌತಿಕ ವ್ಯವಸ್ಥೆಯನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಲು ಈ ಮೂವರೂ ವಿಜ್ಞಾನಿಗಳು ನೀಡಿದ ಅಭೂತಪೂರ್ವ ಕೊಡುಗೆಯನ್ನು ಪರಿಗಣಿಸಿ ನೊಬೆಲ್​ ನೀಡಲಾಗುತ್ತಿದೆ ಎಂದು ನೊಬೆಲ್​ ಕಮಿಟಿ ತಿಳಿಸಿದೆ.

ಈ ಮೂವರಲ್ಲಿ ಸಿಯುಕುರೊ ಮನಾಬೆ ಪ್ರಿನ್ಸ್ಟನ್ ವಿಶ್ವವಿದ್ಯಾಲಯದಲ್ಲಿ ಹಿರಿಯ ಹವಾಮಾನ ತಜ್ಞ. ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್​ ಪ್ರಮಾಣ ಹೆಚ್ಚುವುದರಿಂದ ಭೂ ಮೇಲ್ಮೈ ಮೇಲೆ ಉಷ್ಣತೆ ಹೇಗೆ ಹೆಚ್ಚುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಧನೆ ಗುರುತಿಸಿ ನೊಬೆಲ್​ ನೀಡಲಾಗಿದೆ. ಹಾಗೇ, ಕ್ಲಾಸ್ ಹ್ಯಾಸೆಲ್ಮನ್ ಜರ್ಮನಿಯ ಹವಾಮಾನಶಾಸ್ತ್ರ ಸಂಸ್ಥೆಯಾದ ಮ್ಯಾಕ್ಸ್​ ಪ್ಲ್ಯಾಂಕ್​​ನಲ್ಲಿ ಪ್ರೊಫೆಸರ್​ ಆಗಿದ್ದು, weather (ಹವಾಮಾನ) ಮತ್ತು climate (ವಾಯುಗುಣ)ವನ್ನು ಒಂದಕ್ಕೊಂದನ್ನು ಸಂಪರ್ಕಿಸಿ, ಜಂಟಿ ಮಾಡೆಲ್​ ರಚಿಸಿದ್ದರು. ಈ ಮೂಲಕ ವೆದರ್​ ಪದೇಪದೆ ಬದಲಾಗುತ್ತಿದ್ದರೂ, ಕ್ಲೈಮೇಟ್​ ಮಾಡೆಲ್​ಗಳು ಹೇಗೆ ವಿಶ್ವಾಸಾರ್ಹವಾಗಿರುತ್ತವೆ ಎಂಬುದಕ್ಕೆ ಉತ್ತರ ಕಂಡು ಹಿಡಿದಿದ್ದಾರೆ. ಇದೇ ಸಾಧನೆಗೆ ಈಗ ಅವರಿಗೆ ನೊಬೆಲ್​ ಒಲಿದಿದೆ.

ಇನ್ನು ಜಾರ್ಜಿಯೋ ಪ್ಯಾರಿಸಿಯವರು ರೋಮ್​​ನ ಸಪಿಯಾನ್ಜಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದಾರೆ. ಅಸ್ತವ್ಯಸ್ತಗೊಂಡ ಸಂಕೀರ್ಣ ಅಂಶಗಳಲ್ಲಿ ಅಡಗಿರುವ ಗುಪ್ತ ಮಾದರಿಯನ್ನು ಅನ್ವೇಷಿಸುವ ಮೂಲಕ, ಇವರು ಭೌತಶಾಸ್ತ್ರದ ಸಂಕೀರ್ಣ ವ್ಯವಸ್ಥೆಯ ಥೇರಿಯನ್ನು ಅರ್ಥ ಮಾಡಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅದ್ಭುತ ಕೊಡುಗೆ ನೀಡಿದ್ದನ್ನು ಪರಿಗಣಿಸಿ ನೊಬೆಲ್​ ನೀಡಲಾಗುತ್ತಿದೆ.

ಇದನ್ನೂ ಓದಿ: Nobel Prize 2021 ಅಮೆರಿಕದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್​​ಗೆ 2021ರ ವೈದ್ಯಕೀಯ ನೊಬೆಲ್ ಪ್ರಶಸ್ತಿ

ಚಿರಾಗ್ ಪಾಸ್ವಾನ್​​ಗೆ ಹೆಲಿಕಾಪ್ಟರ್, ಪರಾಸ್​​ಗೆ ಹೊಲಿಗೆ ಯಂತ್ರ ಚಿಹ್ನೆ ನೀಡಿದ ಚುನಾವಣಾ ಆಯೋಗ

Published On - 4:24 pm, Tue, 5 October 21

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ