AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಪೇಶಾವರದ ಮಸೀದಿಯೊಂದರಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 30 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Peshawar mosque bomb blast: ಪೇಶಾವರದ ಮಸೀದಿಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.

ಪಾಕಿಸ್ತಾನ: ಪೇಶಾವರದ ಮಸೀದಿಯೊಂದರಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 30 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 04, 2022 | 3:40 PM

Share

ಪೇಶಾವರ: ಪಾಕಿಸ್ತಾನದ ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ (Peshawar Mosque blast) ಶುಕ್ರವಾರ ಪ್ರಾರ್ಥನೆ ವೇಳೆ ಸ್ಫೋಟ (Bomb blast) ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ಖಚಿತಪಡಿಸಿದ ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್, ‘‘ನಾವು ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದೇವೆ’’ ಎಂದು ತಿಳಿಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳು ಉಲ್ಲೇಖಿಸಿದಂತೆ ಪೇಶಾವರ ನಗರ ಪೊಲೀಸ್ ಅಧಿಕಾರಿ ಇಜಾಜ್ ಅಹ್ಸಾನ್ ಈ ಕುರಿತು ಮಾತನಾಡಿ, ‘‘ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಜತೆಗೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದರು. ಗುಂಡಿನ ದಾಳಿಯ ನಂತರ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ’’ ಎಂದಿದ್ದಾರೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.

ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುವ ಸಿಬ್ಬಂದಿಗಳು:

ಮಸೀದಿ ಮೇಲಿನ ದಾಳಿಯನ್ನು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ ಎಂದಿರುವ ಪಾಕಿಸ್ತಾನ ಪ್ರಧಾನ ಮಂತ್ರಿಗಳ ಕಚೇರಿ, ತುರ್ತು ವೈದ್ಯಕೀಯ ಸೇವೆ ನೀಡಲು ಆದೇಶಿಸಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:

Russia- Ukraine Crisis: ರಷ್ಯಾ- ಉಕ್ರೇನ್ ಬಿಕ್ಕಟ್ಟಿನಿಂದಾಗಿ 13 ವರ್ಷಗಳ ನಂತರ ಅತ್ಯಧಿಕ ಮಟ್ಟಕ್ಕೆ ಏರಿದ ಗೋಧಿ ಬೆಲೆ

Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು

Published On - 3:23 pm, Fri, 4 March 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು