AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ; 36 ಜನ ಸಾವು, ಇಬ್ಬರು ನಾಪತ್ತೆ

ಸೋಮವಾರ ಸಂಜೆ ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ಅನ್ಯಾಂಗ್ ನಗರದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಚೀನಾದ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ; 36 ಜನ ಸಾವು, ಇಬ್ಬರು ನಾಪತ್ತೆ
ಚೀನಾದಲ್ಲಿ ಬೆಂಕಿ ಅವಘಡImage Credit source: NDTV
TV9 Web
| Edited By: |

Updated on: Nov 22, 2022 | 8:29 AM

Share

ಬೀಜಿಂಗ್: ಚೀನಾದ ಫ್ಯಾಕ್ಟರಿಯೊಂದರಲ್ಲಿ (China Fire Accident) ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ 36 ಜನರು ಸಾವನ್ನಪ್ಪಿದ್ದಾರೆ. ಈ ಬೆಂಕಿ ದುರಂತದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಫ್ಯಾಕ್ಟರಿಯೊಳಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಸೋಮವಾರ ಸಂಜೆ ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ಅನ್ಯಾಂಗ್ ನಗರದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ” ಎಂದು ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ. ಬೆಂಕಿ ಹೊತ್ತಿಕೊಂಡ ಸೂಚನೆ ಸಿಕ್ಕ ಕೂಡಲೆ ಅಗ್ನಿಶಾಮಕ ರಕ್ಷಣಾ ತುಕಡಿ ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸುವ ಕೆಲಸ ಮಾಡಿವೆ.

ಇದನ್ನೂ ಓದಿ: Video Viral: ತಮಿಳುನಾಡಿನ ಶಿವಕಾಶಿ ದೇವಸ್ಥಾನದ ಗೋಪುರಕ್ಕೆ ಬೆಂಕಿ

ಸಾರ್ವಜನಿಕ ಭದ್ರತೆ, ತುರ್ತು ಪ್ರತಿಕ್ರಿಯೆ, ಪುರಸಭೆ ಆಡಳಿತ ಮತ್ತು ವಿದ್ಯುತ್ ಸರಬರಾಜು ಘಟಕಗಳು ತುರ್ತು ನಿರ್ವಹಣೆ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳಲು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿವೆ. ಸ್ಥಳೀಯ ಸಮಯ ರಾತ್ರಿ 11ರ ಸುಮಾರಿಗೆ ಬೆಂಕಿಯನ್ನು ಪೂರ್ತಿಯಾಗಿ ನಂದಿಸಲಾಗಿದೆ. ಈ ಘಟನೆಯಲ್ಲಿ 36 ಜನರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕಳೆದ ವರ್ಷ ಚೀನಾದಲ್ಲಿ ನಡೆದ ಅನಿಲ ಸ್ಫೋಟದಲ್ಲಿ 25 ಜನರು ಮೃತಪಟ್ಟಿದ್ದರು. ಮಾರ್ಚ್ 2019ರಲ್ಲಿ ಶಾಂಘೈನಿಂದ 260 ಕಿ.ಮೀ. ದೂರದಲ್ಲಿರುವ ಯಾಂಚೆಂಗ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 78 ಜನರು ಮೃತಪಟ್ಟಿದ್ದರು. ಇದರಿಂದ ಹಲವಾರು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳು ಧ್ವಂಸವಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ