AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine Crisis: 12ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್​ ಯುದ್ಧ; ಇಂದು 3ನೇ ಸುತ್ತಿನ ಮಾತುಕತೆ ಫಲಪ್ರದವಾಗಬಹುದೇ?

ಉಕ್ರೇನ್​ ಸೈನ್ಯವನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ದಾಳಿಯ ಉದ್ದೇಶ ಎಂದು ಹೇಳಿದ್ದ ರಷ್ಯಾ ನಾಗರಿಕರನ್ನೂ ಹತ್ಯೆಗೈಯುತ್ತಿದೆ ಎಂಬ ಆರೋಪವನ್ನು ಉಕ್ರೇನ್​ ಅಧ್ಯಕ್ಷರ ಸಲಹೆಗಾರ ಒಲೆಕ್ಸಿ ಒಲೆಕ್ಸಿ ಅರೆಸ್ಟೋವಿಚ್ ಆರೋಪಿಸಿದ್ದಾರೆ.

Russia-Ukraine Crisis: 12ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್​ ಯುದ್ಧ; ಇಂದು 3ನೇ ಸುತ್ತಿನ ಮಾತುಕತೆ ಫಲಪ್ರದವಾಗಬಹುದೇ?
ಉಕ್ರೇನ್​ ಮತ್ತು ರಷ್ಯಾ ಅಧ್ಯಕ್ಷರು
TV9 Web
| Edited By: |

Updated on:Mar 07, 2022 | 12:22 PM

Share

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿ 12ನೇ ದಿನ ಇಂದು. ರಷ್ಯಾ ದಾಳಿಗೆ ಉಕ್ರೇನ್​ ಪ್ರತಿ ದಾಳಿ ನಡೆಸುತ್ತಿದ್ದು, ಎಲ್ಲಿ ನೋಡಿದರೂ ಬಾಂಬ್​, ಶೆಲ್​, ಮಿಸೆಲ್​ ದಾಳಿ ನಡೆಯುತ್ತಿದೆ. ಅದರಲ್ಲೂ ಕೀವ್​​ನ ಹೊರವಲಯ, ಉಕ್ರೇನ್​​ ಉತ್ತರದಲ್ಲಿರುವ ಚೆರ್ನಿಹಿವ್​, ದಕ್ಷಿಣದ ಮೈಕೊಲೈವ್, ಖಾರ್ಕೀವ್​​ಗಳಲ್ಲಿ ಯುದ್ಧತೀವ್ರತೆ ಹೆಚ್ಚಾಗಿದೆ.  ಇನ್ನೊಂದೆಡೆ ಉಕ್ರೇನ್​ ಮೇಲೆ ದಾಳಿ ನಡೆಸಿರುವ ರಷ್ಯಾದ ಕ್ರಮ ವಿರೋಧಿಸಿ ವಿವಿಧ ದೇಶಗಳು, ಕಂಪನಿಗಳು ಅದರ ಮೇಲಿನ ನಿರ್ಬಂಧ ಹೆಚ್ಚಿಸುತ್ತಿವೆ. ರಷ್ಯಾ ಮತ್ತು ಉಕ್ರೇನ್​ ಮಧ್ಯೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆದಿದ್ದು, ಅದು ಯಾವುದೇ ಪ್ರಯೋಜನಕ್ಕೆ ಬರುತ್ತಿಲ್ಲ. ಈ ಮಧ್ಯೆ ಇಂದು ಎರಡೂ ದೇಶಗಳ ಮಧ್ಯೆ ಮೂರನೇ ಸುತ್ತಿನ ಮಾತುಕತೆ ನಡೆಯಲಿದೆ.

ರಷ್ಯಾ ಮತ್ತು ಉಕ್ರೇನ್​ ಮಧ್ಯೆ ಮೂರನೇ ಸುತ್ತಿನ ಮಾತುಕತೆ ಸೋಮವಾರ ನಡೆಯಲಿದೆ ಎಂದು ಶನಿವಾರ ಉಕ್ರೇನಿಯನ್​ ಸಂಧಾನಕಾರ ಡೆವಿಡ್​ ಅರಾಖ್​​ಮಿಯಾ ತಿಳಿಸಿದ್ದರು. ಉಕ್ರೇನ್​​ ಪರ ಮಾತುಕತೆಯಲ್ಲಿ ತೊಡಗಿಕೊಂಡಿದ್ದ ಡೆನಿಸ್ ಕಿರೀವ್​ ಕಳೆದ ವಾರ ಮೃತಪಟ್ಟಿದ್ದಾರೆ. ಇವರನ್ನು ಉಕ್ರೇನ್​​ನ ಗುಪ್ತ ಸೇವೆ ಸಿಬ್ಬಂದಿಯೇ ಹತ್ಯೆ ಮಾಡಿದ್ದಾರೆ ಎಂಬುದು ಬಲವಾದ ಮೂಲಗಳಿಂದಲೇ ತಿಳಿದಿದೆ ಎಂದು ಮಾಸ್ಕೋ ಮೂಲದ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಡೆನಿಸ್​ ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂಬ ಶಂಕೆ ಮೇರೆಗೆ ಉಕ್ರೇನಿಯನ್​ ಗುಪ್ತ ಸೇವೆ ಅವರನ್ನು ಕೊಂದಿದೆ ಎಂದು ರಷ್ಯಾ ಪ್ರತಿಪಾದಿಸಿದರೂ, ಉಕ್ರೇನಿಯನ್ ರಕ್ಷಣಾ ಸಚಿವಾಲಯ ಅದನ್ನು ನಿರಾಕರಿಸಿದೆ.

ಉಕ್ರೇನ್​ ಸೈನ್ಯವನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ದಾಳಿಯ ಉದ್ದೇಶ ಎಂದು ಹೇಳಿದ್ದ ರಷ್ಯಾ ನಾಗರಿಕರನ್ನೂ ಹತ್ಯೆಗೈಯುತ್ತಿದೆ ಎಂಬ ಆರೋಪವನ್ನು ಉಕ್ರೇನ್​ ಅಧ್ಯಕ್ಷರ ಸಲಹೆಗಾರ ಒಲೆಕ್ಸಿ ಒಲೆಕ್ಸಿ ಅರೆಸ್ಟೋವಿಚ್ ಆರೋಪಿಸಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಕೂಡ ಈಗಾಗಲೇ ಹಲವು ಬಾರಿ ಇದನ್ನು ಪ್ರತಿಪಾದಿಸಿದ್ದಾರೆ. ರಷ್ಯಾ ಸೇನೆ ಉಕ್ರೇನ್​ನ ವಸತಿ ಪ್ರದೇಶಗಳ ಮೇಲೆ ಶೆಲ್ಲಿಂಗ್ ಮಾಡುತ್ತಿದೆ.  ಎಲ್ಲ ಕಡೆ ಆಹಾರ, ನೀರು, ಔಷಧ, ಗ್ಯಾಸ್​ ಪೂರೈಕೆಗೆ ಅಡ್ಡಿಯಾಗಿದೆ ಎಂದು ಉಕ್ರೇನ್​ ನಾಯಕರು ಆರೋಪಿಸುತ್ತಿದ್ದಾರೆ. ಸದ್ಯ ರಷ್ಯಾ ನಾಲ್ಕು ನಗರಗಳಲ್ಲಿ 11ತಾಸುಗಳ ಕದನ ವಿರಾಮ ಘೋಷಣೆ ಮಾಡಿದೆ.  ಈ ಸುತ್ತಿನ ಶಾಂತಿ ಮಾತುಕತೆಯತ್ತ ಕುತೂಹಲ ಮೂಡಿದೆ.

ಇದನ್ನೂ ಓದಿ: ಅಧ್ಯಕ್ಷ ಝೆಲೆನ್​ಸ್ಕಿ ಹತ್ಯೆಯಾದರೂ ಹೋರಾಟ ನಿಲ್ಲುವುದಿಲ್ಲ: ಪರ್ಯಾಯ ಯೋಜನೆಗಳನ್ನು ರೂಪಿಸಿಕೊಂಡಿದೆ ಉಕ್ರೇನ್

Published On - 11:10 am, Mon, 7 March 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!