AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯ ಏರೋಸ್ಪೇಸ್ ಕಂಪನಿ ಮೇಲೆ ಉಗ್ರರ ದಾಳಿ; ನಾಲ್ವರು ಸಾವು, 14 ಮಂದಿಗೆ ಗಾಯ

ಟರ್ಕಿಯ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ಕಂಪನಿ ಮೇಲೆ ಇಂದು ಭಯೋತ್ಪಾದಕರು ದಾಳಿ ಮಾಡಿದ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 14 ಜನ ಗಾಯಗೊಂಡಿದ್ದಾರೆ. ಟರ್ಕಿಯ ಅಂಕಾರದ ಕಹ್ರಾಮಂಕಜನ್‌ನಲ್ಲಿರುವ ಟುಸಾಸ್ ಕಂಪನಿ ಮೇಲೆ ಉಗ್ರರ ದಾಳಿ ನಡೆಸಲಾಯಿತು.

ಟರ್ಕಿಯ ಏರೋಸ್ಪೇಸ್ ಕಂಪನಿ ಮೇಲೆ ಉಗ್ರರ ದಾಳಿ; ನಾಲ್ವರು ಸಾವು, 14 ಮಂದಿಗೆ ಗಾಯ
ಟರ್ಕಿಯಲ್ಲಿ ಉಗ್ರರ ದಾಳಿ
ಸುಷ್ಮಾ ಚಕ್ರೆ
|

Updated on: Oct 23, 2024 | 9:23 PM

Share

ನವದೆಹಲಿ: ಟರ್ಕಿಯ ಏರೋಸ್ಪೇಸ್ ಇಂಡಸ್ಟ್ರೀಸ್ (TUSAS) ನ ಪ್ರಧಾನ ಕಚೇರಿಯಲ್ಲಿ ಇಂದು ಮಾರಣಾಂತಿಕ ದಾಳಿ ನಡೆದಿದೆ ಎಂದು ಟರ್ಕಿ ದೃಢಪಡಿಸಿದೆ. ಮಾಧ್ಯಮಗಳು ಘಟನಾ ಸ್ಥಳದಲ್ಲಿ ಜೋರಾಗಿ ಸ್ಫೋಟವನ್ನು ವರದಿ ಮಾಡಿದೆ ಮತ್ತು ಗುಂಡಿನ ವಿನಿಮಯದ ವಿಡಿಯೋ ತುಣುಕನ್ನು ಪ್ರಸಾರ ಮಾಡಿವೆ. ಈ ಸ್ಫೋಟದ ಕಾರಣ ಮತ್ತು ನಂತರದ ಗುಂಡಿನ ದಾಳಿ ನಡೆಸಿದವರ ವಿವರ ಇನ್ನೂ ತಿಳಿದುಬಂದಿಲ್ಲ. ಆದರೂ ಕೆಲವು ವರದಿಗಳು ಸಂಭವನೀಯ ಆತ್ಮಹತ್ಯಾ ದಾಳಿಯನ್ನು ಸೂಚಿಸುತ್ತವೆ. ಸರ್ಕಾರಿ ಸ್ವಾಮ್ಯದ ಅನಡೋಲು ಏಜೆನ್ಸಿ ವರದಿ ಮಾಡಿದಂತೆ ತುರ್ತು ಸೇವೆಗಳನ್ನು ಪ್ರದೇಶಕ್ಕೆ ರವಾನಿಸಲಾಗಿದೆ.

TUSAS ಟರ್ಕಿಯ ಪ್ರಮುಖ ರಕ್ಷಣಾ ಮತ್ತು ವಾಯುಯಾನ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸೌಲಭ್ಯವು ಅಂಕಾರಾದ ಕಹ್ರಾಮಂಕಜನ್‌ನಲ್ಲಿ 43 ಮಿಲಿಯನ್ ಚದರ ಅಡಿಗಳನ್ನು ಒಳಗೊಂಡಿದೆ. ಇದು ವಿಮಾನಗಳು, ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು ಮತ್ತು ಉಪಗ್ರಹಗಳ ಉತ್ಪಾದನಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಈ ಘಟನೆಯ ನಂತರ, ಟರ್ಕಿಯ ಬೆಂಚ್‌ಮಾರ್ಕ್ ಸ್ಟಾಕ್ ಸೂಚ್ಯಂಕವು ಶೇ. 2ರಷ್ಟು ಕುಸಿದಿದೆ. ಈ ಘಟನಾ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರಿದಿದ್ದು, ಕೆಲವು ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿರಬಹುದು ಎಂದು ಎನ್‌ಟಿವಿ ವರದಿ ಮಾಡಿದೆ. ಅಂಕಾರಾದ ಕಹ್ರಾಮಂಕಜನ್ ಜಿಲ್ಲೆಯ ಆವರಣದ ಮೇಲೆ ಹೆಲಿಕಾಪ್ಟರ್‌ಗಳು ಹಾರುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ- ಭಾರತ ಮುಖಾಮುಖಿ; ಭಯೋತ್ಪಾದನೆ ವಿರುದ್ಧ ದ್ವಂದ್ವ ನಿಲುವಿಲ್ಲ ಎಂದ ಮೋದಿ

ನಾನು ಈ ಹೇಯ ದಾಳಿಯನ್ನು ಖಂಡಿಸುತ್ತೇನೆ. ಭಯೋತ್ಪಾದಕನನ್ನು ಕೊಲ್ಲುವವರೆಗೂ ನಮ್ಮ ಹೋರಾಟವು ಮುಂದುವರಿಯುತ್ತದೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಹೇಳಿದ್ದಾರೆ. ನಮ್ಮ ಹುತಾತ್ಮರ ಮೇಲೆ ದೇವರು ಕರುಣಿಸಲಿ. ನಮ್ಮ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ