AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯ ಏರೋಸ್ಪೇಸ್ ಕಂಪನಿ ಮೇಲೆ ಉಗ್ರರ ದಾಳಿ; ನಾಲ್ವರು ಸಾವು, 14 ಮಂದಿಗೆ ಗಾಯ

ಟರ್ಕಿಯ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಎಐ) ಕಂಪನಿ ಮೇಲೆ ಇಂದು ಭಯೋತ್ಪಾದಕರು ದಾಳಿ ಮಾಡಿದ ನಂತರ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 14 ಜನ ಗಾಯಗೊಂಡಿದ್ದಾರೆ. ಟರ್ಕಿಯ ಅಂಕಾರದ ಕಹ್ರಾಮಂಕಜನ್‌ನಲ್ಲಿರುವ ಟುಸಾಸ್ ಕಂಪನಿ ಮೇಲೆ ಉಗ್ರರ ದಾಳಿ ನಡೆಸಲಾಯಿತು.

ಟರ್ಕಿಯ ಏರೋಸ್ಪೇಸ್ ಕಂಪನಿ ಮೇಲೆ ಉಗ್ರರ ದಾಳಿ; ನಾಲ್ವರು ಸಾವು, 14 ಮಂದಿಗೆ ಗಾಯ
ಟರ್ಕಿಯಲ್ಲಿ ಉಗ್ರರ ದಾಳಿ
ಸುಷ್ಮಾ ಚಕ್ರೆ
|

Updated on: Oct 23, 2024 | 9:23 PM

Share

ನವದೆಹಲಿ: ಟರ್ಕಿಯ ಏರೋಸ್ಪೇಸ್ ಇಂಡಸ್ಟ್ರೀಸ್ (TUSAS) ನ ಪ್ರಧಾನ ಕಚೇರಿಯಲ್ಲಿ ಇಂದು ಮಾರಣಾಂತಿಕ ದಾಳಿ ನಡೆದಿದೆ ಎಂದು ಟರ್ಕಿ ದೃಢಪಡಿಸಿದೆ. ಮಾಧ್ಯಮಗಳು ಘಟನಾ ಸ್ಥಳದಲ್ಲಿ ಜೋರಾಗಿ ಸ್ಫೋಟವನ್ನು ವರದಿ ಮಾಡಿದೆ ಮತ್ತು ಗುಂಡಿನ ವಿನಿಮಯದ ವಿಡಿಯೋ ತುಣುಕನ್ನು ಪ್ರಸಾರ ಮಾಡಿವೆ. ಈ ಸ್ಫೋಟದ ಕಾರಣ ಮತ್ತು ನಂತರದ ಗುಂಡಿನ ದಾಳಿ ನಡೆಸಿದವರ ವಿವರ ಇನ್ನೂ ತಿಳಿದುಬಂದಿಲ್ಲ. ಆದರೂ ಕೆಲವು ವರದಿಗಳು ಸಂಭವನೀಯ ಆತ್ಮಹತ್ಯಾ ದಾಳಿಯನ್ನು ಸೂಚಿಸುತ್ತವೆ. ಸರ್ಕಾರಿ ಸ್ವಾಮ್ಯದ ಅನಡೋಲು ಏಜೆನ್ಸಿ ವರದಿ ಮಾಡಿದಂತೆ ತುರ್ತು ಸೇವೆಗಳನ್ನು ಪ್ರದೇಶಕ್ಕೆ ರವಾನಿಸಲಾಗಿದೆ.

TUSAS ಟರ್ಕಿಯ ಪ್ರಮುಖ ರಕ್ಷಣಾ ಮತ್ತು ವಾಯುಯಾನ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸೌಲಭ್ಯವು ಅಂಕಾರಾದ ಕಹ್ರಾಮಂಕಜನ್‌ನಲ್ಲಿ 43 ಮಿಲಿಯನ್ ಚದರ ಅಡಿಗಳನ್ನು ಒಳಗೊಂಡಿದೆ. ಇದು ವಿಮಾನಗಳು, ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು ಮತ್ತು ಉಪಗ್ರಹಗಳ ಉತ್ಪಾದನಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಈ ಘಟನೆಯ ನಂತರ, ಟರ್ಕಿಯ ಬೆಂಚ್‌ಮಾರ್ಕ್ ಸ್ಟಾಕ್ ಸೂಚ್ಯಂಕವು ಶೇ. 2ರಷ್ಟು ಕುಸಿದಿದೆ. ಈ ಘಟನಾ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರಿದಿದ್ದು, ಕೆಲವು ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿರಬಹುದು ಎಂದು ಎನ್‌ಟಿವಿ ವರದಿ ಮಾಡಿದೆ. ಅಂಕಾರಾದ ಕಹ್ರಾಮಂಕಜನ್ ಜಿಲ್ಲೆಯ ಆವರಣದ ಮೇಲೆ ಹೆಲಿಕಾಪ್ಟರ್‌ಗಳು ಹಾರುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ- ಭಾರತ ಮುಖಾಮುಖಿ; ಭಯೋತ್ಪಾದನೆ ವಿರುದ್ಧ ದ್ವಂದ್ವ ನಿಲುವಿಲ್ಲ ಎಂದ ಮೋದಿ

ನಾನು ಈ ಹೇಯ ದಾಳಿಯನ್ನು ಖಂಡಿಸುತ್ತೇನೆ. ಭಯೋತ್ಪಾದಕನನ್ನು ಕೊಲ್ಲುವವರೆಗೂ ನಮ್ಮ ಹೋರಾಟವು ಮುಂದುವರಿಯುತ್ತದೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಹೇಳಿದ್ದಾರೆ. ನಮ್ಮ ಹುತಾತ್ಮರ ಮೇಲೆ ದೇವರು ಕರುಣಿಸಲಿ. ನಮ್ಮ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ