AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಆಕಾಶದಲ್ಲಿ 2 ಹೆಲಿಕಾಪ್ಟರ್​​ಗಳ ನಡುವೆ ಡಿಕ್ಕಿ; ನಾಲ್ವರು ಸಾವು

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಹೆಲಿಕಾಪ್ಟರ್ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಆಸ್ಟ್ರೇಲಿಯಾದ ಆಕಾಶದಲ್ಲಿ 2 ಹೆಲಿಕಾಪ್ಟರ್​​ಗಳ ನಡುವೆ ಡಿಕ್ಕಿ; ನಾಲ್ವರು ಸಾವು
ಆಸ್ಟ್ರೇಲಿಯಾದಲ್ಲಿ ಹೆಲಿಕಾಪ್ಟರ್​ ಅಪಘಾತ
TV9 Web
| Edited By: |

Updated on:Jan 02, 2023 | 2:07 PM

Share

ಸಿಡ್ನಿ: ಆಸ್ಟ್ರೇಲಿಯಾದ ಸಮುದ್ರದ ತೀರದಲ್ಲಿ ಇಂದು (ಸೋಮವಾರ) 2 ಹೆಲಿಕಾಪ್ಟರ್‌ಗಳು (Helicopter Crash) ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, ವಿಮಾನದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಡಲ ತೀರದ ಬಳಿ ಎರಡು ಹೆಲಿಕಾಪ್ಟರ್​​ಗಳ ನಡುವೆ ಘರ್ಷಣೆ ಉಂಟಾದ ನಂತರ 1 ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಗಿದೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಹೆಲಿಕಾಪ್ಟರ್ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಬೀಚ್ ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್‌ನಿಂದ ದಕ್ಷಿಣಕ್ಕೆ 45 ಮೈಲುಗಳಷ್ಟು ದೂರದಲ್ಲಿ ಗೋಲ್ಡ್ ಕೋಸ್ಟ್‌ ಇದೆ. ಈ ಪ್ರದೇಶವು ಆಸ್ಟ್ರೇಲಿಯಾದ ಅತ್ಯಂತ ಜನಪ್ರಿಯ ಪ್ರವಾಸೋದ್ಯಮ ತಾಣಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾರು-ಟ್ರಕ್ ಡಿಕ್ಕಿಹೊಡೆದು ಅಪಘಾತ: 5 ಮಂದಿ ಸಾವು

ಆಕಾಶದಲ್ಲಿ ಹೆಲಿಕಾಪ್ಟರ್​​ಗಳು ಡಿಕ್ಕಿ ಹೊಡೆದಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನದ ರೋಟರ್‌ಗಳಲ್ಲಿ 1 ಮರಳಿನ ದಂಡೆಯ ಮೇಲೆ ಬಿದ್ದಿರುವ ಫೋಟೋಗಳು ಹರಿದಾಡುತ್ತಿವೆ.

ಒಂದು ಹೆಲಿಕಾಪ್ಟರ್ ಸಮುದ್ರದ ತೀರದಿಂದ ಕೆಲವು ಅಡಿಗಳಷ್ಟು ದೂರದಲ್ಲಿ ಮರಳಿನ ಮೇಲೆ ಪಲ್ಟಿಯಾಗಿದೆ. ಇದರ ರೋಟರ್‌ಗಳು ಸ್ವಲ್ಪ ದೂರದಲ್ಲಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Mon, 2 January 23

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ