AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಸಾವೊಪೊಲೊ ರಾಜ್ಯದ ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ
Lakshmi Hegde
| Edited By: |

Updated on:Nov 26, 2020 | 10:55 AM

Share

ಬ್ರೆಸಿಲಿಯಾ: ಆಗ್ನೇಯ ಬ್ರೆಜಿಲ್​ನ ಸಾವೊ ಪಾಲೊ ರಾಜ್ಯದಲ್ಲಿ ಇಂದು (ನ.26) ಮುಂಜಾನೆ ಬಸ್​ ಹಾಗೂ ಟ್ರಕ್​ ನಡುವೆ ನಡೆದ ಭೀಕರ ಅಪಘಾತದಲ್ಲಿ 41 ಮಂದಿ ಮೃತಪಟ್ಟಿದ್ದು, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ. ನಾವು ಹೋಗುವಷ್ಟರಲ್ಲಿ ಸುತ್ತಮುತ್ತ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು, ರಕ್ತ ಹರಿಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳು, ಜನರ ದೇಹಗಳು ನಜ್ಜುಗುಜ್ಜಾಗಿವೆ. ಬಸ್​​ನಲ್ಲಿ ಇದ್ದವರು ಯಾರು, ಟ್ರಕ್​ನಲ್ಲಿ ಇದ್ದವರು ಯಾರು ಎಂಬುದು ಗೊತ್ತಾಗುತ್ತಿಲ್ಲ. ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೊದಲು ಸಾವಿನ ಸಂಖ್ಯೆ 32 ಇತ್ತು. ಅದು ಇನ್ನಷ್ಟು  ಏರಿದೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸಾಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಗುಯಿ ಪಟ್ಟಣ ಬ್ರೆಜಿಲ್​ನ ಅತಿದೊಡ್ಡ ರಾಜ್ಯ, ಆರ್ಥಿಕ ರಾಜಧಾನಿಯಾದ ಸಾವೊಪೊಲೊದಿಂದ 340 ಕಿಮೀ ದೂರ ಇದೆ. ಸ್ಥಳೀಯ ಮಾಧ್ಯಮವೊಂದು ಬಸ್​ನಲ್ಲಿ 53 ಮಂದಿ ಇದ್ದರು. ಟ್ರಕ್​ ಡ್ರೈವರ್ ಬದುಕಿದ್ದಾರೆ ಎಂದು ವರದಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಬ್ರೆಜಿಲ್​ನಲ್ಲಿ ಇಷ್ಟು ಭೀಕರ ಮಟ್ಟದ ಅಪಘಾತ ಸಂಭವಿಸಿರಲಿಲ್ಲ ಎನ್ನಲಾಗಿದೆ.

Published On - 9:51 am, Thu, 26 November 20

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!