AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಸಾವೊಪೊಲೊ ರಾಜ್ಯದ ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ.

ಟ್ರಕ್​-ಬಸ್​ ನಡುವೆ ಭೀಕರ ಅಪಘಾತ; ಕೆಲಸಕ್ಕೆ ಹೊರಟಿದ್ದ ಗಾರ್ಮೆಂಟ್ಸ್​ ಫ್ಯಾಕ್ಟರಿಯ 41 ಮಂದಿ ದುರ್ಮರಣ
Lakshmi Hegde
| Edited By: |

Updated on:Nov 26, 2020 | 10:55 AM

Share

ಬ್ರೆಸಿಲಿಯಾ: ಆಗ್ನೇಯ ಬ್ರೆಜಿಲ್​ನ ಸಾವೊ ಪಾಲೊ ರಾಜ್ಯದಲ್ಲಿ ಇಂದು (ನ.26) ಮುಂಜಾನೆ ಬಸ್​ ಹಾಗೂ ಟ್ರಕ್​ ನಡುವೆ ನಡೆದ ಭೀಕರ ಅಪಘಾತದಲ್ಲಿ 41 ಮಂದಿ ಮೃತಪಟ್ಟಿದ್ದು, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​ನಲ್ಲಿ ಟೆಕ್ಸ್​ಟೈಲ್​ ಕಾರ್ಖಾನೆಯ  ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲ ಮುಂಜಾನೆ ಕೆಲಸಕ್ಕೆ ಹೊರಟವರು. ಟಾಗುಯಿ ಎಂಬಲ್ಲಿ ಈ ಬಸ್​ಗೆ ಟ್ರಕ್​ ಡಿಕ್ಕಿಯಾಗಿದೆ. ನಾವು ಹೋಗುವಷ್ಟರಲ್ಲಿ ಸುತ್ತಮುತ್ತ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು, ರಕ್ತ ಹರಿಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳು, ಜನರ ದೇಹಗಳು ನಜ್ಜುಗುಜ್ಜಾಗಿವೆ. ಬಸ್​​ನಲ್ಲಿ ಇದ್ದವರು ಯಾರು, ಟ್ರಕ್​ನಲ್ಲಿ ಇದ್ದವರು ಯಾರು ಎಂಬುದು ಗೊತ್ತಾಗುತ್ತಿಲ್ಲ. ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೊದಲು ಸಾವಿನ ಸಂಖ್ಯೆ 32 ಇತ್ತು. ಅದು ಇನ್ನಷ್ಟು  ಏರಿದೆ. ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸಾಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಗುಯಿ ಪಟ್ಟಣ ಬ್ರೆಜಿಲ್​ನ ಅತಿದೊಡ್ಡ ರಾಜ್ಯ, ಆರ್ಥಿಕ ರಾಜಧಾನಿಯಾದ ಸಾವೊಪೊಲೊದಿಂದ 340 ಕಿಮೀ ದೂರ ಇದೆ. ಸ್ಥಳೀಯ ಮಾಧ್ಯಮವೊಂದು ಬಸ್​ನಲ್ಲಿ 53 ಮಂದಿ ಇದ್ದರು. ಟ್ರಕ್​ ಡ್ರೈವರ್ ಬದುಕಿದ್ದಾರೆ ಎಂದು ವರದಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಬ್ರೆಜಿಲ್​ನಲ್ಲಿ ಇಷ್ಟು ಭೀಕರ ಮಟ್ಟದ ಅಪಘಾತ ಸಂಭವಿಸಿರಲಿಲ್ಲ ಎನ್ನಲಾಗಿದೆ.

Published On - 9:51 am, Thu, 26 November 20

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ