AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bulgaria: ಧಗಧಗನೇ ಹೊತ್ತಿ ಉರಿದ ಬಸ್​; 12ಮಕ್ಕಳೂ ಸೇರಿ 45 ಮಂದಿ ದುರ್ಮರಣ

ಆಂತರಿಕ ಸಚಿವಾಲಯದ ಸಚಿವ ಬಾಯ್ಕೊ ರಾಶ್ಕೋವ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಬಸ್​​ನೊಳಗೆ ಗುಂಪುಗುಂಪಾಗಿ ಸುಟ್ಟು ಬೂದಿಯಾಗಿದ್ದಾರೆ ಎಂದಿದ್ದಾರೆ.

Bulgaria: ಧಗಧಗನೇ ಹೊತ್ತಿ ಉರಿದ ಬಸ್​; 12ಮಕ್ಕಳೂ ಸೇರಿ 45 ಮಂದಿ ದುರ್ಮರಣ
ಬೆಂಕಿ ಹೊತ್ತಿ ಉರಿದ ಬಸ್​
TV9 Web
| Edited By: |

Updated on:Nov 23, 2021 | 2:45 PM

Share

ಪ್ರವಾಸಿ ಬಸ್​ವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ 12 ಮಕ್ಕಳು ಸೇರಿ 45 ಮಂದಿ ದುರ್ಮರಣಕ್ಕೀಡಾದ ಘಟನೆ ಬಲ್ಗೇರಿಯಾ ಪ್ರದೇಶದ ಪಶ್ಚಿಮದಲ್ಲಿರುವ ಹೆದ್ದಾರಿಯಲ್ಲಿ ನಡೆದಿದೆ. ಈ ಬಸ್​​ನಲ್ಲಿದ್ದವರೆಲ್ಲ ಉತ್ತರ ಮೆಸೆಡೋನಿಯನ್​ ಪ್ರವಾಸಿಗರೇ ಆಗಿದ್ದರು ಎಂದು ವರದಿಯಾಗಿದೆ. ಬಲ್ಕನ್​ ದೇಶಗಳ ಇತಿಹಾಸದಲ್ಲಿಯೇ ಇದು ಭಯಂಕರವಾದ ಅಪಘಾತ ಎಂದೂ ಹೇಳಲಾಗಿದೆ.  ಇನ್ನು ಗಾಯಗೊಂಡ ಏಳುಮಂದಿಯನ್ನು ಸೋಫಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಆಂತರಿಕ ಸಚಿವಾಲಯದ ಸಚಿವ ಬಾಯ್ಕೊ ರಾಶ್ಕೋವ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಬಸ್​​ನೊಳಗೆ ಗುಂಪುಗುಂಪಾಗಿ ಸುಟ್ಟು ಬೂದಿಯಾಗಿದ್ದಾರೆ ಎಂದಿದ್ದಾರೆ. ವೈರಲ್​ ಆದ ವಿಡಿಯೋಗಳು ನೋಡಲು ಸಾಧ್ಯವಿಲ್ಲದಷ್ಟು ಭಯಾನಕವಾಗಿವೆ. ಇಂಥ ಸನ್ನಿವೇಶವನ್ನು ನಾನು ಮೊದಲೆಂದೂ ನೋಡಿಯೇ ಇರಲಿಲ್ಲ ಎಂದೂ ತಿಳಿಸಿದ್ದಾರೆ.  ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಬಸ್​ ಹೆದ್ದಾರಿಯ ಬ್ಯಾರಿಯರ್​ (ಬೇಲಿ)ಗೆ ಡಿಕ್ಕಿ ಹೊಡೆದು ನಿಂತಿದೆ. ಬೆಂಕಿ ಹೊತ್ತಿ ಉರಿಯಲು ಪ್ರಾರಂಭವಾದ ಬಳಿಕ ಹೀಗಾಯಿತೋ, ಅಥವಾ ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿತೋ ಎಂಬುದು ಇನ್ನೂ ಅಸ್ಪಷ್ಟವಾಗಿಯೇ ಇದೆ.

ಸೋಫಿಯಾದಿಂದ ಪಶ್ಚಿಮಕ್ಕೆ 45 ಕಿಮೀ ದೂರದಲ್ಲಿರುವ ಸ್ಟ್ರುಮಾ ಹೆದ್ದಾರಿಯಲ್ಲಿ ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಆ್ಯಕ್ಸಿಡೆಂಟ್​ ನಡೆದಿದೆ. ಇದರಲ್ಲಿ ಇದ್ದವರು ಇಸ್ತಾನ್​ಬುಲ್​​ಗೆ ವೀಕೆಂಡ್​ ಪ್ರವಾಸಕ್ಕೆ ತೆರಳಿದ್ದರು. ಅವರೆಲ್ಲ ವಾಪಸ್​ ಬರುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರನ ದಾಖಲು ಮಾಡಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ಬಗ್ಗೆ ನಮ್ಮ ವರದಿ ಬಹಿರಂಗಪಡಿಸಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ಸಮಿತಿ ಸದಸ್ಯರ ಮನವಿ

Published On - 2:43 pm, Tue, 23 November 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ