AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ
ಟಿವಿ ಟವರ್​ ಮೇಲೆ ರಷ್ಯಾ ದಾಳಿ
TV9 Web
| Edited By: |

Updated on:Mar 02, 2022 | 8:30 AM

Share

ಉಕ್ರೇನ್​​ನ ಕೀವ್​ ಮತ್ತು ಖಾರ್ಕೀವ್​​ಗಳ ಮೇಲೆ ರಷ್ಯಾ ದಾಳಿ (Russia Attack) ಹೆಚ್ಚಾಗಿದೆ. ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್​​ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, 2ನೇ ಮಹಾಯುದ್ಧ ಕಾಲದಲ್ಲಿ ಸಾಮೂಹಿಕ ಹತ್ಯೆಯಾಗಿದ್ದ ಯಹೂದಿಗಳ ಸ್ಮರಣಾರ್ಥ ನಿರ್ಮಿಸಿದ್ದ ಸ್ಮಾರಕ ಕೇಂದ್ರಕ್ಕೂ ಹಾನಿಯಾಗಿದೆ.  ದಾಳಿಗೂ ಮೊದಲು ರಷ್ಯಾ ಎಚ್ಚರಿಕೆಯೊಂದನ್ನು ನೀಡಿತ್ತು. ಕೀವ್​​ನಲ್ಲಿರುವ ಭದ್ರತಾ ಸೇವೆಯ ಪ್ರಧಾನ ಕಚೇರಿ ಮೇಲೆ ಹೆಚ್ಚು ಪ್ರಭಾವ ಇರುವ ಶಸ್ತ್ರಗಳಿಂದ ದಾಳಿ ನಡೆಸುತ್ತೇವೆ. ಇಲ್ಲಿ ಸಮೀಪದಲ್ಲಿ ವಾಸವಾಗುತ್ತಿರುವ ಜನರು ಸ್ಥಳಾಂತರಗೊಳ್ಳುವಂತೆ ಹೇಳಿತ್ತು. ಅಷ್ಟೇ ಅಲ್ಲ, ಯುದ್ಧದ ಬಗ್ಗೆ ಮಾಹಿತಿ ಸಿಗದಂತೆ ಮಾಡುವುದಕ್ಕೋಸ್ಕರ್​, ಉಕ್ರೇನ್​ ರಾಜಧಾನಿ ಕೀವ್​​ನಲ್ಲಿರುವ ಇನ್​ಫಾರ್ಮೇಶನ್​ ಮತ್ತು ಸೈಕಾಲಜಿಕಲ್​ ಸೆಂಟರ್​ ಮೇಲೆ ಕೂಡ ಆಕ್ರಮಣ ಮಾಡುವುದಾಗಿ ಹೇಳಿತ್ತು.

ಉಕ್ರೇನ್​​ನ ಎರಡನೇ ದೊಡ್ಡ ನಗರವಾದ ಖಾರ್ಕೀವ್​​ನಲ್ಲಿ ರಷ್ಯಾ ನಿರಂತರವಾಗಿ ಶೆಲ್, ರಾಕೆಟ್​​ ದಾಳಿ ನಡೆಸಿದೆ. ಅದರಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಯುಎಸ್​​ ತಂತ್ರಜ್ಞಾನ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ಸೋಮವಾರ ಉಪಗ್ರಹಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ರಷ್ಯಾದ ಮಿಲಿಟರಿ ಪಡೆ ಕೈವ್​​ನತ್ತ ಹೋಗುತ್ತಿರುವುದು ಕಂಡುಬಂದಿತ್ತು. ಸುಮಾರು 64 ಕಿಮೀ ಉದ್ದದವರೆಗ ಈ ಮಿಲಿಟರಿ ಬೆಂಗಾವಲು ಪಡೆ ವ್ಯಾಪಿಸಿಕೊಂಡಿದ್ದನ್ನು ಉಪಗ್ರಹ ಚಿತ್ರ ತೋರಿಸಿತ್ತು.

ಇಂದು ಎರಡನೇ ಸುತ್ತಿನ ಮಾತುಕತೆ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಇದರಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಹೊರಬೀಳದ ಕಾರಣ ಇಂದು ಮತ್ತೊಮ್ಮೆ ರಷ್ಯಾ-ಉಕ್ರೇನ್​ ಮಾತುಕತೆ ನಡೆಯಲಿದೆ. ಅಂದಹಾಗೇ, ಮೊದಲ ಸುತ್ತಿನ ಮಾತುಕತೆ ಸುಮಾರು 5 ತಾಸು ನಡೆದಿತ್ತು.

ಇದನ್ನೂ ಓದಿ: Russia- Ukraine Crisis: ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಏನಾಗಲಿದೆ ಭಾರತದ ಆರ್ಥಿಕ ಪರಿಸ್ಥಿತಿ?

Published On - 8:09 am, Wed, 2 March 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ