AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ
ಟಿವಿ ಟವರ್​ ಮೇಲೆ ರಷ್ಯಾ ದಾಳಿ
TV9 Web
| Edited By: |

Updated on:Mar 02, 2022 | 8:30 AM

Share

ಉಕ್ರೇನ್​​ನ ಕೀವ್​ ಮತ್ತು ಖಾರ್ಕೀವ್​​ಗಳ ಮೇಲೆ ರಷ್ಯಾ ದಾಳಿ (Russia Attack) ಹೆಚ್ಚಾಗಿದೆ. ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್​​ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, 2ನೇ ಮಹಾಯುದ್ಧ ಕಾಲದಲ್ಲಿ ಸಾಮೂಹಿಕ ಹತ್ಯೆಯಾಗಿದ್ದ ಯಹೂದಿಗಳ ಸ್ಮರಣಾರ್ಥ ನಿರ್ಮಿಸಿದ್ದ ಸ್ಮಾರಕ ಕೇಂದ್ರಕ್ಕೂ ಹಾನಿಯಾಗಿದೆ.  ದಾಳಿಗೂ ಮೊದಲು ರಷ್ಯಾ ಎಚ್ಚರಿಕೆಯೊಂದನ್ನು ನೀಡಿತ್ತು. ಕೀವ್​​ನಲ್ಲಿರುವ ಭದ್ರತಾ ಸೇವೆಯ ಪ್ರಧಾನ ಕಚೇರಿ ಮೇಲೆ ಹೆಚ್ಚು ಪ್ರಭಾವ ಇರುವ ಶಸ್ತ್ರಗಳಿಂದ ದಾಳಿ ನಡೆಸುತ್ತೇವೆ. ಇಲ್ಲಿ ಸಮೀಪದಲ್ಲಿ ವಾಸವಾಗುತ್ತಿರುವ ಜನರು ಸ್ಥಳಾಂತರಗೊಳ್ಳುವಂತೆ ಹೇಳಿತ್ತು. ಅಷ್ಟೇ ಅಲ್ಲ, ಯುದ್ಧದ ಬಗ್ಗೆ ಮಾಹಿತಿ ಸಿಗದಂತೆ ಮಾಡುವುದಕ್ಕೋಸ್ಕರ್​, ಉಕ್ರೇನ್​ ರಾಜಧಾನಿ ಕೀವ್​​ನಲ್ಲಿರುವ ಇನ್​ಫಾರ್ಮೇಶನ್​ ಮತ್ತು ಸೈಕಾಲಜಿಕಲ್​ ಸೆಂಟರ್​ ಮೇಲೆ ಕೂಡ ಆಕ್ರಮಣ ಮಾಡುವುದಾಗಿ ಹೇಳಿತ್ತು.

ಉಕ್ರೇನ್​​ನ ಎರಡನೇ ದೊಡ್ಡ ನಗರವಾದ ಖಾರ್ಕೀವ್​​ನಲ್ಲಿ ರಷ್ಯಾ ನಿರಂತರವಾಗಿ ಶೆಲ್, ರಾಕೆಟ್​​ ದಾಳಿ ನಡೆಸಿದೆ. ಅದರಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಯುಎಸ್​​ ತಂತ್ರಜ್ಞಾನ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ಸೋಮವಾರ ಉಪಗ್ರಹಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ರಷ್ಯಾದ ಮಿಲಿಟರಿ ಪಡೆ ಕೈವ್​​ನತ್ತ ಹೋಗುತ್ತಿರುವುದು ಕಂಡುಬಂದಿತ್ತು. ಸುಮಾರು 64 ಕಿಮೀ ಉದ್ದದವರೆಗ ಈ ಮಿಲಿಟರಿ ಬೆಂಗಾವಲು ಪಡೆ ವ್ಯಾಪಿಸಿಕೊಂಡಿದ್ದನ್ನು ಉಪಗ್ರಹ ಚಿತ್ರ ತೋರಿಸಿತ್ತು.

ಇಂದು ಎರಡನೇ ಸುತ್ತಿನ ಮಾತುಕತೆ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಇದರಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಹೊರಬೀಳದ ಕಾರಣ ಇಂದು ಮತ್ತೊಮ್ಮೆ ರಷ್ಯಾ-ಉಕ್ರೇನ್​ ಮಾತುಕತೆ ನಡೆಯಲಿದೆ. ಅಂದಹಾಗೇ, ಮೊದಲ ಸುತ್ತಿನ ಮಾತುಕತೆ ಸುಮಾರು 5 ತಾಸು ನಡೆದಿತ್ತು.

ಇದನ್ನೂ ಓದಿ: Russia- Ukraine Crisis: ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಏನಾಗಲಿದೆ ಭಾರತದ ಆರ್ಥಿಕ ಪರಿಸ್ಥಿತಿ?

Published On - 8:09 am, Wed, 2 March 22

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ