AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು.

Russia-Ukraine War: ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; 5 ಮಂದಿ ಸಾವು, ಚಾನಲ್​​ಗಳೆಲ್ಲ ಸ್ಥಗಿತ
ಟಿವಿ ಟವರ್​ ಮೇಲೆ ರಷ್ಯಾ ದಾಳಿ
TV9 Web
| Edited By: |

Updated on:Mar 02, 2022 | 8:30 AM

Share

ಉಕ್ರೇನ್​​ನ ಕೀವ್​ ಮತ್ತು ಖಾರ್ಕೀವ್​​ಗಳ ಮೇಲೆ ರಷ್ಯಾ ದಾಳಿ (Russia Attack) ಹೆಚ್ಚಾಗಿದೆ. ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್​​ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, 2ನೇ ಮಹಾಯುದ್ಧ ಕಾಲದಲ್ಲಿ ಸಾಮೂಹಿಕ ಹತ್ಯೆಯಾಗಿದ್ದ ಯಹೂದಿಗಳ ಸ್ಮರಣಾರ್ಥ ನಿರ್ಮಿಸಿದ್ದ ಸ್ಮಾರಕ ಕೇಂದ್ರಕ್ಕೂ ಹಾನಿಯಾಗಿದೆ.  ದಾಳಿಗೂ ಮೊದಲು ರಷ್ಯಾ ಎಚ್ಚರಿಕೆಯೊಂದನ್ನು ನೀಡಿತ್ತು. ಕೀವ್​​ನಲ್ಲಿರುವ ಭದ್ರತಾ ಸೇವೆಯ ಪ್ರಧಾನ ಕಚೇರಿ ಮೇಲೆ ಹೆಚ್ಚು ಪ್ರಭಾವ ಇರುವ ಶಸ್ತ್ರಗಳಿಂದ ದಾಳಿ ನಡೆಸುತ್ತೇವೆ. ಇಲ್ಲಿ ಸಮೀಪದಲ್ಲಿ ವಾಸವಾಗುತ್ತಿರುವ ಜನರು ಸ್ಥಳಾಂತರಗೊಳ್ಳುವಂತೆ ಹೇಳಿತ್ತು. ಅಷ್ಟೇ ಅಲ್ಲ, ಯುದ್ಧದ ಬಗ್ಗೆ ಮಾಹಿತಿ ಸಿಗದಂತೆ ಮಾಡುವುದಕ್ಕೋಸ್ಕರ್​, ಉಕ್ರೇನ್​ ರಾಜಧಾನಿ ಕೀವ್​​ನಲ್ಲಿರುವ ಇನ್​ಫಾರ್ಮೇಶನ್​ ಮತ್ತು ಸೈಕಾಲಜಿಕಲ್​ ಸೆಂಟರ್​ ಮೇಲೆ ಕೂಡ ಆಕ್ರಮಣ ಮಾಡುವುದಾಗಿ ಹೇಳಿತ್ತು.

ಉಕ್ರೇನ್​​ನ ಎರಡನೇ ದೊಡ್ಡ ನಗರವಾದ ಖಾರ್ಕೀವ್​​ನಲ್ಲಿ ರಷ್ಯಾ ನಿರಂತರವಾಗಿ ಶೆಲ್, ರಾಕೆಟ್​​ ದಾಳಿ ನಡೆಸಿದೆ. ಅದರಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಯುಎಸ್​​ ತಂತ್ರಜ್ಞಾನ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ಸೋಮವಾರ ಉಪಗ್ರಹಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ರಷ್ಯಾದ ಮಿಲಿಟರಿ ಪಡೆ ಕೈವ್​​ನತ್ತ ಹೋಗುತ್ತಿರುವುದು ಕಂಡುಬಂದಿತ್ತು. ಸುಮಾರು 64 ಕಿಮೀ ಉದ್ದದವರೆಗ ಈ ಮಿಲಿಟರಿ ಬೆಂಗಾವಲು ಪಡೆ ವ್ಯಾಪಿಸಿಕೊಂಡಿದ್ದನ್ನು ಉಪಗ್ರಹ ಚಿತ್ರ ತೋರಿಸಿತ್ತು.

ಇಂದು ಎರಡನೇ ಸುತ್ತಿನ ಮಾತುಕತೆ

ರಷ್ಯಾ ಮತ್ತು ಉಕ್ರೇನ್​ ನಡುವೆ ಮಾರ್ಚ್​ 2 (ಇಂದು) ರಂದು ಎರಡನೇ ಸುತ್ತಿನ ಮಾತುಕತೆ ನಡೆಯಲಿದೆ. ಸೋಮವಾರ ಬೆಲಾರಸ್​​​ನ ಗೋಮೆಲ್​​ನಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಇದರಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಹೊರಬೀಳದ ಕಾರಣ ಇಂದು ಮತ್ತೊಮ್ಮೆ ರಷ್ಯಾ-ಉಕ್ರೇನ್​ ಮಾತುಕತೆ ನಡೆಯಲಿದೆ. ಅಂದಹಾಗೇ, ಮೊದಲ ಸುತ್ತಿನ ಮಾತುಕತೆ ಸುಮಾರು 5 ತಾಸು ನಡೆದಿತ್ತು.

ಇದನ್ನೂ ಓದಿ: Russia- Ukraine Crisis: ರಷ್ಯಾ- ಉಕ್ರೇನ್ ಬಿಕ್ಕಟ್ಟಿನ ಮಧ್ಯೆ ಏನಾಗಲಿದೆ ಭಾರತದ ಆರ್ಥಿಕ ಪರಿಸ್ಥಿತಿ?

Published On - 8:09 am, Wed, 2 March 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?