AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು

ಇರಾನ್ ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ.

Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು
ಇರಾನ್​ನ ಶಾ ಚೆರಾಗ್ ಮಸೀದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 27, 2022 | 7:22 AM

ತೆಹರಾನ್: ಇರಾನ್​ನಲ್ಲಿ ಹಿಜಾಬ್ ವಿರೋಧಿ ಹೋರಾಟಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಷಿಯಾ ಮುಸ್ಲಿಂ ಸಮುದಾಯದ ಪ್ರಮುಖ ಯಾತ್ರಾ ಸ್ಥಳ ‘ಷಾ ಚೆರಾಗ್’ ಮಸೀದಿಯ ಮೇಲೆ ಭೀಕರ ಭಯೋತ್ಪಾದನಾ ದಾಳಿ  (Terrorist Attack) ನಡೆದಿದೆ. ಅಪರಿಚಿತ ಬಂದೂಕುಧಾರಿ ಅಡ್ಡಾದಿಡ್ಡಿ ಗುಂಡು ಹಾರಿಸಿದಾಗ 15 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು. ‘ಷಾ ಚೆರಾಗ್’ ಮಸೀದಿಯಲ್ಲಿ (Shah Cheragh mausoleum in Shiraz) ಷಿಯಾ ಸಮುದಾಯದ 8ನೇ ಧರ್ಮಗುರು ಇಮಾಮ್ ರೆಜಾ ಅವರ ಸಮಾಧಿ ಇದೆ. ಇದು ದಕ್ಷಿಣ ಇರಾನ್​ನ ಪವಿತ್ರ ಯಾತ್ರಾಸ್ಥಳ (Shiite holy site in Iran) ಎಂದು ಹೆಸರುವಾಸಿಯಾಗಿದೆ.

ಇರಾನ್​ನ ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಪ್ರಕಟಿಸಿರುವ ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆಯು, ‘15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ’ ಎಂದು ದೃಢಪಡಿಸಿದೆ. ಇರಾನ್​ನ ಸರ್ಕಾರಿ ಸುದ್ದಿಸಂಸ್ಥೆ ಐಆರ್​ಎನ್​ಎ ಸತ್ತವರ ನಿಖರ ಮಾಹಿತಿ ನೀಡಿಲ್ಲ. ಆದರೆ ಸ್ಥಳೀಯ ಮಾಧ್ಯಮಗಳು ಸುಮಾರು 40 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿವೆ.

ಈ ದಾಳಿಗೆ ಸುನ್ನಿ ತೀವ್ರಗಾಮಿಗಳೇ ಕಾರಣ ಎಂದು ಶಂಕಿಸಲಾಗಿದೆ. ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ. ಹೀಗಾಗಿ ಈ ಘಟನೆಯನ್ನು ಬಗ್ಗೆ ಎಚ್ಚರವಹಿಸಲು ಭದ್ರತಾ ಪಡೆಗಳು ವಿಫಲವಾದವು ಎಂಬ ಆರೋಪಗಳು ಕೇಳಿಬಂದಿವೆ.

ಹೊಣೆ ಹೊತ್ತ ಐಸಿಸ್, ಅಧ್ಯಕ್ಷರಿಂದ ಪ್ರತೀಕಾರದ ಪ್ರತಿಜ್ಞೆ

ಮಸೀದಿಗೆ ನುಗ್ಗಿದ ಅಪರಿಚತರು ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಏಕಾಏಕಿ ಅಡ್ಡಾದಿಡ್ಡಿ ಗುಂಡು ಹಾರಿಸಲು ಆರಂಭಿಸಿದರು. ಕೆಲ ಹೊತ್ತಿನ ನಂತರ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ (ಐಸಿಸ್) ಭಾಗವಾಗಿ ಗುರುತಿಸಿಕೊಂಡಿರುವ ಗುಂಪೊಂದು ದಾಳಿಯ ಹೊಣೆ ಹೊತ್ತುಕೊಂಡಿತು.

ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದಾಳಿ ಮಾಡಿದವರು ಯಾರೇ ಆಗಿದ್ದರೂ ಬಿಡುವುದಿಲ್ಲ. ಅವರನ್ನು ಪತ್ತೆ ಹಚ್ಚಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ‘ದೇಶವನ್ನು ವಿಭಜಿಸಲು ಯತ್ನಿಸುತ್ತಿರುವ ಇರಾನ್ ವಿರೋಧಿಗಳನ್ನು ಸಹಿಸಲು ಆಗುವುದಿಲ್ಲ’ ಎಂದು ಕಟುವಾಗಿ ನುಡಿದರು.

Published On - 7:18 am, Thu, 27 October 22

ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ