Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು

ಇರಾನ್ ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ.

Iran Terror Attack: ಇರಾನ್​ನ ಷಿಯಾ ಯಾತ್ರಾ ಸ್ಥಳದಲ್ಲಿ ಉಗ್ರರಿಂದ ಗುಂಡಿನ ದಾಳಿ; 15 ಮಂದಿ ಸಾವು
ಇರಾನ್​ನ ಶಾ ಚೆರಾಗ್ ಮಸೀದಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 27, 2022 | 7:22 AM

ತೆಹರಾನ್: ಇರಾನ್​ನಲ್ಲಿ ಹಿಜಾಬ್ ವಿರೋಧಿ ಹೋರಾಟಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಷಿಯಾ ಮುಸ್ಲಿಂ ಸಮುದಾಯದ ಪ್ರಮುಖ ಯಾತ್ರಾ ಸ್ಥಳ ‘ಷಾ ಚೆರಾಗ್’ ಮಸೀದಿಯ ಮೇಲೆ ಭೀಕರ ಭಯೋತ್ಪಾದನಾ ದಾಳಿ  (Terrorist Attack) ನಡೆದಿದೆ. ಅಪರಿಚಿತ ಬಂದೂಕುಧಾರಿ ಅಡ್ಡಾದಿಡ್ಡಿ ಗುಂಡು ಹಾರಿಸಿದಾಗ 15 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು. ‘ಷಾ ಚೆರಾಗ್’ ಮಸೀದಿಯಲ್ಲಿ (Shah Cheragh mausoleum in Shiraz) ಷಿಯಾ ಸಮುದಾಯದ 8ನೇ ಧರ್ಮಗುರು ಇಮಾಮ್ ರೆಜಾ ಅವರ ಸಮಾಧಿ ಇದೆ. ಇದು ದಕ್ಷಿಣ ಇರಾನ್​ನ ಪವಿತ್ರ ಯಾತ್ರಾಸ್ಥಳ (Shiite holy site in Iran) ಎಂದು ಹೆಸರುವಾಸಿಯಾಗಿದೆ.

ಇರಾನ್​ನ ಸರ್ಕಾರಿ ಮಾಧ್ಯಮಗಳನ್ನು ಉಲ್ಲೇಖಿಸಿ ಸುದ್ದಿ ಪ್ರಕಟಿಸಿರುವ ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆಯು, ‘15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ’ ಎಂದು ದೃಢಪಡಿಸಿದೆ. ಇರಾನ್​ನ ಸರ್ಕಾರಿ ಸುದ್ದಿಸಂಸ್ಥೆ ಐಆರ್​ಎನ್​ಎ ಸತ್ತವರ ನಿಖರ ಮಾಹಿತಿ ನೀಡಿಲ್ಲ. ಆದರೆ ಸ್ಥಳೀಯ ಮಾಧ್ಯಮಗಳು ಸುಮಾರು 40 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿವೆ.

ಈ ದಾಳಿಗೆ ಸುನ್ನಿ ತೀವ್ರಗಾಮಿಗಳೇ ಕಾರಣ ಎಂದು ಶಂಕಿಸಲಾಗಿದೆ. ಸರ್ಕಾರಿ ಪಡೆಗಳ ಗಣನೀಯ ಪ್ರಮಾಣದ ಸಿಬ್ಬಂದಿಯನ್ನು ಹಿಜಾಬ್ ವಿರೋಧಿ ಹೋರಾಟಗಳನ್ನು ಹತ್ತಿಕ್ಕಲೆಂದು ನಿಯೋಜಿಸಲಾಗಿದೆ. ಹೀಗಾಗಿ ಈ ಘಟನೆಯನ್ನು ಬಗ್ಗೆ ಎಚ್ಚರವಹಿಸಲು ಭದ್ರತಾ ಪಡೆಗಳು ವಿಫಲವಾದವು ಎಂಬ ಆರೋಪಗಳು ಕೇಳಿಬಂದಿವೆ.

ಹೊಣೆ ಹೊತ್ತ ಐಸಿಸ್, ಅಧ್ಯಕ್ಷರಿಂದ ಪ್ರತೀಕಾರದ ಪ್ರತಿಜ್ಞೆ

ಮಸೀದಿಗೆ ನುಗ್ಗಿದ ಅಪರಿಚತರು ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಏಕಾಏಕಿ ಅಡ್ಡಾದಿಡ್ಡಿ ಗುಂಡು ಹಾರಿಸಲು ಆರಂಭಿಸಿದರು. ಕೆಲ ಹೊತ್ತಿನ ನಂತರ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ (ಐಸಿಸ್) ಭಾಗವಾಗಿ ಗುರುತಿಸಿಕೊಂಡಿರುವ ಗುಂಪೊಂದು ದಾಳಿಯ ಹೊಣೆ ಹೊತ್ತುಕೊಂಡಿತು.

ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ದಾಳಿ ಮಾಡಿದವರು ಯಾರೇ ಆಗಿದ್ದರೂ ಬಿಡುವುದಿಲ್ಲ. ಅವರನ್ನು ಪತ್ತೆ ಹಚ್ಚಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ‘ದೇಶವನ್ನು ವಿಭಜಿಸಲು ಯತ್ನಿಸುತ್ತಿರುವ ಇರಾನ್ ವಿರೋಧಿಗಳನ್ನು ಸಹಿಸಲು ಆಗುವುದಿಲ್ಲ’ ಎಂದು ಕಟುವಾಗಿ ನುಡಿದರು.

Published On - 7:18 am, Thu, 27 October 22

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ