AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ.

ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Jul 27, 2021 | 9:50 AM

Share

ಆಫ್ರಿಕನ್​​ ವಲಸಿಗರಿದ್ದ ಹಡಗು ಲಿಬಿಯಾ(Libya)ದ ಕರಾವಳಿ ತೀರ (Coast)ದಲ್ಲಿ ಮುಳುಗಿದ ಪರಿಣಾಮ ಸುಮಾರು 57 ಮಂದಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಯುರೋಪ್​​​ನಲ್ಲಿ ವಲಸಿಗರು ಉತ್ತಮವಾಗಿ ಜೀವನ ನಡೆಸಲು ಪ್ರಯತ್ನಿಸುತ್ತಿರುವ ಮಧ್ಯೆಯೇ, ಮೆಡಿಟೇರಿಯನ್​ ಸಮುದ್ರದಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ದುರಂತವಾಗಿದೆ. ಈ ಹಡಗು ಪಶ್ಚಿಮ ಕರಾವಳಿ ಪಟ್ಟಣ ಖುಮ್ಸ್​​ನಿಂದ ಭಾನುವಾರ ಹೊರಟಿತ್ತು ಎಂದು ಅಂತಾರಾಷ್ಟ್ರೀಯ ವಲಸೆ ಆರ್ಗನೈಸೇಶನ್​​ನ ವಕ್ತಾರೆ ಸಫಾ ಮೆಸೆಲಿ ತಿಳಿಸಿದ್ದಾರೆ.

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ. ಅಲ್ಲದೆ, ಉಳಿದ 18 ಜನರನ್ನು ಮೀನುಗಾರರು ರಕ್ಷಿಸಿದ್ದಾರೆಂದೂ ಮಾಹಿತಿ ನೀಡಿದ್ದಾರೆ.

ಹಡಗು ಮೊದಲು ಇಂಜಿನ್​ ಸಮಸ್ಯೆಯಿಂದ ನಿಂತಿತ್ತು. ಆದರೆ ನಂತರ ಕೆಟ್ಟ ಹವಾಮಾನದ ಕಾರಣದಿಂದ ಮುಳುಗಿ ದುರಂತ ಸಂಭವಿಸಿದೆ. ಹೀಗೆ ಪ್ರಾಣಾಪಾಯದಿಂದ ಪಾರಾದವರಲ್ಲಿ ನೈಜೀರಿಯಾ, ಘಾನಾ, ಗಾಂಬಿಯಾದವರು ಇದ್ದಾರೆ ಎಂದು ಹೇಳಲಾಗಿದೆ. ಇದು ಲಿಬಿಯಾ ಕರಾವಳಿ ತೀರದಲ್ಲಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಹಡಗು ದುರಂತವಾಗಿದೆ. ಕೆಲವೇ ದಿನಗಳ ಹಿಂದೆ ಹಡಗು ಮುಳುಗಿ 20 ವಲಸಿಗರು ಮೃತಪಟ್ಟಿದ್ದರು.

ಇದನ್ನೂ ಓದಿ: ‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

57 dead as boat carrying African migrants capsizes off In Libya

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್