AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ.

ಆಫ್ರಿಕಾದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 57 ಮಂದಿ ಸಾವು; ಒಂದೇ ತಿಂಗಳಲ್ಲಿ ಇದು ಎರಡನೇ ದುರಂತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 27, 2021 | 9:50 AM

Share

ಆಫ್ರಿಕನ್​​ ವಲಸಿಗರಿದ್ದ ಹಡಗು ಲಿಬಿಯಾ(Libya)ದ ಕರಾವಳಿ ತೀರ (Coast)ದಲ್ಲಿ ಮುಳುಗಿದ ಪರಿಣಾಮ ಸುಮಾರು 57 ಮಂದಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಯುರೋಪ್​​​ನಲ್ಲಿ ವಲಸಿಗರು ಉತ್ತಮವಾಗಿ ಜೀವನ ನಡೆಸಲು ಪ್ರಯತ್ನಿಸುತ್ತಿರುವ ಮಧ್ಯೆಯೇ, ಮೆಡಿಟೇರಿಯನ್​ ಸಮುದ್ರದಲ್ಲಿ ಸಂಭವಿಸಿದ ಅತ್ಯಂತ ದೊಡ್ಡ ದುರಂತವಾಗಿದೆ. ಈ ಹಡಗು ಪಶ್ಚಿಮ ಕರಾವಳಿ ಪಟ್ಟಣ ಖುಮ್ಸ್​​ನಿಂದ ಭಾನುವಾರ ಹೊರಟಿತ್ತು ಎಂದು ಅಂತಾರಾಷ್ಟ್ರೀಯ ವಲಸೆ ಆರ್ಗನೈಸೇಶನ್​​ನ ವಕ್ತಾರೆ ಸಫಾ ಮೆಸೆಲಿ ತಿಳಿಸಿದ್ದಾರೆ.

ಹಡಗಿನಲ್ಲಿ ಮಕ್ಕಳು, ಮಹಿಳೆಯರೆಲ್ಲ ಸೇರಿ ಸುಮಾರು 75 ವಲಸಿಗರು ಇದ್ದರು. ಈಗ 57 ಜನರು ಮೃತಪಟ್ಟಿದ್ದು, ಅದರಲ್ಲಿ 20 ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆಂದು ಮೆಸೆಲಿ ಹೇಳಿದ್ದಾರೆ. ಅಲ್ಲದೆ, ಉಳಿದ 18 ಜನರನ್ನು ಮೀನುಗಾರರು ರಕ್ಷಿಸಿದ್ದಾರೆಂದೂ ಮಾಹಿತಿ ನೀಡಿದ್ದಾರೆ.

ಹಡಗು ಮೊದಲು ಇಂಜಿನ್​ ಸಮಸ್ಯೆಯಿಂದ ನಿಂತಿತ್ತು. ಆದರೆ ನಂತರ ಕೆಟ್ಟ ಹವಾಮಾನದ ಕಾರಣದಿಂದ ಮುಳುಗಿ ದುರಂತ ಸಂಭವಿಸಿದೆ. ಹೀಗೆ ಪ್ರಾಣಾಪಾಯದಿಂದ ಪಾರಾದವರಲ್ಲಿ ನೈಜೀರಿಯಾ, ಘಾನಾ, ಗಾಂಬಿಯಾದವರು ಇದ್ದಾರೆ ಎಂದು ಹೇಳಲಾಗಿದೆ. ಇದು ಲಿಬಿಯಾ ಕರಾವಳಿ ತೀರದಲ್ಲಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಹಡಗು ದುರಂತವಾಗಿದೆ. ಕೆಲವೇ ದಿನಗಳ ಹಿಂದೆ ಹಡಗು ಮುಳುಗಿ 20 ವಲಸಿಗರು ಮೃತಪಟ್ಟಿದ್ದರು.

ಇದನ್ನೂ ಓದಿ: ‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

57 dead as boat carrying African migrants capsizes off In Libya

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್