AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka earthquake: ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ

ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Sri Lanka earthquake: ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 14, 2023 | 3:08 PM

Share

ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ (earthquake) ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. 14-11-2023ರಂದು, 6.2, ತೀವ್ರತೆಯ ಭೂಕಂಪ 12:31:10 IST ಗಂಟೆಗೆ ಸಂಭವಿಸಿದೆ. ಭೂಕಂಪದ ಲ್ಯಾಟ್: -2.96 & ಉದ್ದ: 86.54, ಆಳ: 10 ಕಿಮೀ , ಸ್ಥಳ: 1326 ಕಿಮೀ SE ಆಫ್ ಕೊಲಂಬೊ, ಶ್ರೀಲಂಕಾ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ಎಕ್ಸ್​​​ನಲ್ಲಿ ತಿಳಿಸಿದೆ. ಭೂಕಂಪದಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಿದೆ.

ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

ಇದನ್ನೂ ಓದಿ:  ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ

ಭೂಕಂಪ ಕೇಂದ್ರ ಎಕ್ಸ್​​​ನಲ್ಲಿ ಟ್ವಿಟ್​​

ಇನ್ನು ಸೋಮವಾರ (ನ.13) ಸಂಜೆ ತಜಕಿಸ್ತಾನ್‌ನಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ಕೇಂದ್ರದ ಪ್ರಕಾರ, ಕಂಪನವು ಸಂಜೆ 5:46 ರ ಸುಮಾರಿಗೆ ಸಂಭವಿಸಿದೆ. ಇದಕ್ಕಿಂತ ಮೊದಲು ಅಂದರೆ ಭಾನುವಾರ (ನ.12) ಇಂಡೋನೇಷ್ಯಾದ ವೆಸ್ಟ್ ಟಿಮೋರ್ ಬಳಿ ಭಾನುವಾರ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪಾಕಿಸ್ತಾನದಲ್ಲೂ 4.1 ತೀವ್ರತೆಯ ಭೂಕಂಪ ಉಂಟಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Tue, 14 November 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?