AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 12:43 PM

Share

ತೈಪೆ: ಈಶಾನ್ಯ ತೈವಾನ್​​ನಲ್ಲಿ ಇಂದು ಪ್ರಬಲ ಭೂಕಂಪ ಉಂಟಾಗಿದೆ. ರಾಜಧಾನಿ ತೈಪೆಯಲ್ಲೂ ಸಹ ಇದರ ಪರಿಣಾಮ ಉಂಟಾಗಿದ್ದು, ಭೂಮಿ ಬಲವಾಗಿ ನಡುಗಿದೆ ಎಂದು ವರದಿಯಾಗಿದೆ. ಭೂಕಂಪದ ತೀವ್ರತೆ 6.5ರಷ್ಟಿತ್ತು ಎಂದು ತೈವಾನ್​​ನ ಕೇಂದ್ರೀಯ ಹವಾಮಾನ ಬ್ಯೂರೋ ವರದಿ ನೀಡಿದ್ದು, ಯುಎಸ್​​ನ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇಲ್ಲಿ 6.2ರಷ್ಟು ತೀವ್ರತೆಯಲ್ಲಿ ಭೂಮಿ ನಡುಗಿದೆ.  ಆದರೆ ಯಾವುದೇ ಆಸ್ತಿಪಾಸ್ತಿ ಹಾನಿ, ಜೀವ ಹೋದ ಬಗ್ಗೆ ವರದಿಯಾಗಿಲ್ಲ.

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸುಮಾರು 10 ಸೆಕೆಂಡ್​​ಗಳ ಕಾಲ ಪ್ರಬಲವಾಗಿಯೇ ಭೂಮಿ ನಡುಗಿದೆ ಎಂದು ಹೇಳಲಾಗಿದೆ. ಇನ್ನು ತೈವಾನ್​​ನಲ್ಲಿ ಪದೇಪದೆ ಭೂಕಂಪನವಾಗುತ್ತಿದೆ.  ಈ ದ್ವೀಪವು ಎರಡು ಟೆಕ್ಟೋನಿಕ್​ ಪ್ಲೇಟ್​​ಗಳ ನಡುವೆ ಇರುವುದೇ ಹೀಗೆ ಪದೇಪದೆ ಭೂಕಂಪವಾಗಲು ಕಾರಣ ಎಂದು ಹೇಳಲಾಗಿದೆ.  ಇಷ್ಟು ಗಟ್ಟಿ ಪ್ರಮಾಣದಲ್ಲಿ ಭೂಕಂಪನವಾದಾಗ ಸಹಜವಾಗಿಯೇ ಸಾವು, ಅಪಾರ ಹಾನಿ ಸಂಭವಿಸುತ್ತದೆ ಎಂದು ಹೇಳಲಾದರೂ, ಯಾವ ಪ್ರದೇಶದಲ್ಲಿ, ಎಷ್ಟು ಆಳದಲ್ಲಿ ಭೂಮಿ ನಡುಗಿದೆ ಎಂಬುದರ ಮೇಲೆಯೂ ಅದರ ಹಾನಿ, ಸಾವಿನ ಪ್ರಮಾಣ ಇರುತ್ತದೆ. ಇದೇ  ತೈವಾನ್​​ನಲ್ಲಿ 1999ರಲ್ಲಿ 7.6 ತೀವ್ರತೆಯ ಭೂಕಂಪನ ಉಂಟಾಗಿತ್ತು. ಅದರಲ್ಲಿ 2400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ