AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 12:43 PM

Share

ತೈಪೆ: ಈಶಾನ್ಯ ತೈವಾನ್​​ನಲ್ಲಿ ಇಂದು ಪ್ರಬಲ ಭೂಕಂಪ ಉಂಟಾಗಿದೆ. ರಾಜಧಾನಿ ತೈಪೆಯಲ್ಲೂ ಸಹ ಇದರ ಪರಿಣಾಮ ಉಂಟಾಗಿದ್ದು, ಭೂಮಿ ಬಲವಾಗಿ ನಡುಗಿದೆ ಎಂದು ವರದಿಯಾಗಿದೆ. ಭೂಕಂಪದ ತೀವ್ರತೆ 6.5ರಷ್ಟಿತ್ತು ಎಂದು ತೈವಾನ್​​ನ ಕೇಂದ್ರೀಯ ಹವಾಮಾನ ಬ್ಯೂರೋ ವರದಿ ನೀಡಿದ್ದು, ಯುಎಸ್​​ನ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇಲ್ಲಿ 6.2ರಷ್ಟು ತೀವ್ರತೆಯಲ್ಲಿ ಭೂಮಿ ನಡುಗಿದೆ.  ಆದರೆ ಯಾವುದೇ ಆಸ್ತಿಪಾಸ್ತಿ ಹಾನಿ, ಜೀವ ಹೋದ ಬಗ್ಗೆ ವರದಿಯಾಗಿಲ್ಲ.

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸುಮಾರು 10 ಸೆಕೆಂಡ್​​ಗಳ ಕಾಲ ಪ್ರಬಲವಾಗಿಯೇ ಭೂಮಿ ನಡುಗಿದೆ ಎಂದು ಹೇಳಲಾಗಿದೆ. ಇನ್ನು ತೈವಾನ್​​ನಲ್ಲಿ ಪದೇಪದೆ ಭೂಕಂಪನವಾಗುತ್ತಿದೆ.  ಈ ದ್ವೀಪವು ಎರಡು ಟೆಕ್ಟೋನಿಕ್​ ಪ್ಲೇಟ್​​ಗಳ ನಡುವೆ ಇರುವುದೇ ಹೀಗೆ ಪದೇಪದೆ ಭೂಕಂಪವಾಗಲು ಕಾರಣ ಎಂದು ಹೇಳಲಾಗಿದೆ.  ಇಷ್ಟು ಗಟ್ಟಿ ಪ್ರಮಾಣದಲ್ಲಿ ಭೂಕಂಪನವಾದಾಗ ಸಹಜವಾಗಿಯೇ ಸಾವು, ಅಪಾರ ಹಾನಿ ಸಂಭವಿಸುತ್ತದೆ ಎಂದು ಹೇಳಲಾದರೂ, ಯಾವ ಪ್ರದೇಶದಲ್ಲಿ, ಎಷ್ಟು ಆಳದಲ್ಲಿ ಭೂಮಿ ನಡುಗಿದೆ ಎಂಬುದರ ಮೇಲೆಯೂ ಅದರ ಹಾನಿ, ಸಾವಿನ ಪ್ರಮಾಣ ಇರುತ್ತದೆ. ಇದೇ  ತೈವಾನ್​​ನಲ್ಲಿ 1999ರಲ್ಲಿ 7.6 ತೀವ್ರತೆಯ ಭೂಕಂಪನ ಉಂಟಾಗಿತ್ತು. ಅದರಲ್ಲಿ 2400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ