AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 12:43 PM

Share

ತೈಪೆ: ಈಶಾನ್ಯ ತೈವಾನ್​​ನಲ್ಲಿ ಇಂದು ಪ್ರಬಲ ಭೂಕಂಪ ಉಂಟಾಗಿದೆ. ರಾಜಧಾನಿ ತೈಪೆಯಲ್ಲೂ ಸಹ ಇದರ ಪರಿಣಾಮ ಉಂಟಾಗಿದ್ದು, ಭೂಮಿ ಬಲವಾಗಿ ನಡುಗಿದೆ ಎಂದು ವರದಿಯಾಗಿದೆ. ಭೂಕಂಪದ ತೀವ್ರತೆ 6.5ರಷ್ಟಿತ್ತು ಎಂದು ತೈವಾನ್​​ನ ಕೇಂದ್ರೀಯ ಹವಾಮಾನ ಬ್ಯೂರೋ ವರದಿ ನೀಡಿದ್ದು, ಯುಎಸ್​​ನ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇಲ್ಲಿ 6.2ರಷ್ಟು ತೀವ್ರತೆಯಲ್ಲಿ ಭೂಮಿ ನಡುಗಿದೆ.  ಆದರೆ ಯಾವುದೇ ಆಸ್ತಿಪಾಸ್ತಿ ಹಾನಿ, ಜೀವ ಹೋದ ಬಗ್ಗೆ ವರದಿಯಾಗಿಲ್ಲ.

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸುಮಾರು 10 ಸೆಕೆಂಡ್​​ಗಳ ಕಾಲ ಪ್ರಬಲವಾಗಿಯೇ ಭೂಮಿ ನಡುಗಿದೆ ಎಂದು ಹೇಳಲಾಗಿದೆ. ಇನ್ನು ತೈವಾನ್​​ನಲ್ಲಿ ಪದೇಪದೆ ಭೂಕಂಪನವಾಗುತ್ತಿದೆ.  ಈ ದ್ವೀಪವು ಎರಡು ಟೆಕ್ಟೋನಿಕ್​ ಪ್ಲೇಟ್​​ಗಳ ನಡುವೆ ಇರುವುದೇ ಹೀಗೆ ಪದೇಪದೆ ಭೂಕಂಪವಾಗಲು ಕಾರಣ ಎಂದು ಹೇಳಲಾಗಿದೆ.  ಇಷ್ಟು ಗಟ್ಟಿ ಪ್ರಮಾಣದಲ್ಲಿ ಭೂಕಂಪನವಾದಾಗ ಸಹಜವಾಗಿಯೇ ಸಾವು, ಅಪಾರ ಹಾನಿ ಸಂಭವಿಸುತ್ತದೆ ಎಂದು ಹೇಳಲಾದರೂ, ಯಾವ ಪ್ರದೇಶದಲ್ಲಿ, ಎಷ್ಟು ಆಳದಲ್ಲಿ ಭೂಮಿ ನಡುಗಿದೆ ಎಂಬುದರ ಮೇಲೆಯೂ ಅದರ ಹಾನಿ, ಸಾವಿನ ಪ್ರಮಾಣ ಇರುತ್ತದೆ. ಇದೇ  ತೈವಾನ್​​ನಲ್ಲಿ 1999ರಲ್ಲಿ 7.6 ತೀವ್ರತೆಯ ಭೂಕಂಪನ ಉಂಟಾಗಿತ್ತು. ಅದರಲ್ಲಿ 2400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ