AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ.

ತೈವಾನ್​​ ಈಶಾನ್ಯ ಭಾಗದಲ್ಲಿ 6.5ತೀವ್ರತೆಯ ಭೂಕಂಪ; 10 ಸೆಕೆಂಡ್​ಗಳ ಕಾಲ ನಡುಗಿದ ಭೂಮಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 24, 2021 | 12:43 PM

Share

ತೈಪೆ: ಈಶಾನ್ಯ ತೈವಾನ್​​ನಲ್ಲಿ ಇಂದು ಪ್ರಬಲ ಭೂಕಂಪ ಉಂಟಾಗಿದೆ. ರಾಜಧಾನಿ ತೈಪೆಯಲ್ಲೂ ಸಹ ಇದರ ಪರಿಣಾಮ ಉಂಟಾಗಿದ್ದು, ಭೂಮಿ ಬಲವಾಗಿ ನಡುಗಿದೆ ಎಂದು ವರದಿಯಾಗಿದೆ. ಭೂಕಂಪದ ತೀವ್ರತೆ 6.5ರಷ್ಟಿತ್ತು ಎಂದು ತೈವಾನ್​​ನ ಕೇಂದ್ರೀಯ ಹವಾಮಾನ ಬ್ಯೂರೋ ವರದಿ ನೀಡಿದ್ದು, ಯುಎಸ್​​ನ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಇಲ್ಲಿ 6.2ರಷ್ಟು ತೀವ್ರತೆಯಲ್ಲಿ ಭೂಮಿ ನಡುಗಿದೆ.  ಆದರೆ ಯಾವುದೇ ಆಸ್ತಿಪಾಸ್ತಿ ಹಾನಿ, ಜೀವ ಹೋದ ಬಗ್ಗೆ ವರದಿಯಾಗಿಲ್ಲ.

ಭೂ ಕಂಪನದ ಕೇಂದ್ರ ಬಿಂದು ಯಿಲಾನ್​ ಕೌಂಟಿಯಿಂದ ದಕ್ಷಿಣಕ್ಕೆ 22.7 ಕಿಮೀ ದೂರದಲ್ಲಿದ್ದು, ಸುಮಾರು 67 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದು ಅಲ್ಲಿನ ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸುಮಾರು 10 ಸೆಕೆಂಡ್​​ಗಳ ಕಾಲ ಪ್ರಬಲವಾಗಿಯೇ ಭೂಮಿ ನಡುಗಿದೆ ಎಂದು ಹೇಳಲಾಗಿದೆ. ಇನ್ನು ತೈವಾನ್​​ನಲ್ಲಿ ಪದೇಪದೆ ಭೂಕಂಪನವಾಗುತ್ತಿದೆ.  ಈ ದ್ವೀಪವು ಎರಡು ಟೆಕ್ಟೋನಿಕ್​ ಪ್ಲೇಟ್​​ಗಳ ನಡುವೆ ಇರುವುದೇ ಹೀಗೆ ಪದೇಪದೆ ಭೂಕಂಪವಾಗಲು ಕಾರಣ ಎಂದು ಹೇಳಲಾಗಿದೆ.  ಇಷ್ಟು ಗಟ್ಟಿ ಪ್ರಮಾಣದಲ್ಲಿ ಭೂಕಂಪನವಾದಾಗ ಸಹಜವಾಗಿಯೇ ಸಾವು, ಅಪಾರ ಹಾನಿ ಸಂಭವಿಸುತ್ತದೆ ಎಂದು ಹೇಳಲಾದರೂ, ಯಾವ ಪ್ರದೇಶದಲ್ಲಿ, ಎಷ್ಟು ಆಳದಲ್ಲಿ ಭೂಮಿ ನಡುಗಿದೆ ಎಂಬುದರ ಮೇಲೆಯೂ ಅದರ ಹಾನಿ, ಸಾವಿನ ಪ್ರಮಾಣ ಇರುತ್ತದೆ. ಇದೇ  ತೈವಾನ್​​ನಲ್ಲಿ 1999ರಲ್ಲಿ 7.6 ತೀವ್ರತೆಯ ಭೂಕಂಪನ ಉಂಟಾಗಿತ್ತು. ಅದರಲ್ಲಿ 2400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ