AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ; ಮೂವರು ಸ್ಪ್ಯಾನಿಷ್ ಪ್ರವಾಸಿಗರು ಸೇರಿ 6 ಜನರ ಸಾವು

ಶುಕ್ರವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಿಂದ ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಮಧ್ಯ ಅಫ್ಘಾನಿಸ್ತಾನದ ಪರ್ವತ ನಗರವಾದ ಬಾಮಿಯಾನ್‌ನಲ್ಲಿರುವ ಬಜಾರ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಗುಂಪಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ; ಮೂವರು ಸ್ಪ್ಯಾನಿಷ್ ಪ್ರವಾಸಿಗರು ಸೇರಿ 6 ಜನರ ಸಾವು
ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ
ಸುಷ್ಮಾ ಚಕ್ರೆ
|

Updated on: May 18, 2024 | 10:09 PM

Share

ಕಾಬೂಲ್: ಪ್ರವಾಸಕ್ಕೆಂದು ಅಫ್ಘಾನಿಸ್ತಾನಕ್ಕೆ (Afghanistan) ತೆರಳಿದ್ದ ಮೂವರು ಸ್ಪ್ಯಾನಿಶ್​ ಪ್ರವಾಸಿಗರು ಹೆಣವಾಗಿದ್ದಾರೆ. ಅಫ್ಘಾನಿಸ್ತಾನದ ಮಾರುಕಟ್ಟೆಗೆ ಭೇಟಿ ನೀಡುತ್ತಿದ್ದಾಗ ಮೂವರು ಸ್ಪ್ಯಾನಿಷ್ ಪ್ರವಾಸಿಗರು ಮತ್ತು ಮೂವರು ಆಫ್ಘನ್ನರ ಮೇಲೆ ಗುಂಡು ಹಾರಿಸಿ ಕೊಲ್ಲಲಾಗಿದೆ. ಅವರ ಶವಗಳನ್ನು ರಾಜಧಾನಿ ಕಾಬೂಲ್​ಗೆ ಸಾಗಿಸಲಾಯಿತು ಎಂದು ತಾಲಿಬಾನ್ ಸರ್ಕಾರ ಶನಿವಾರ ತಿಳಿಸಿದೆ.

ಶುಕ್ರವಾರ ರಾಜಧಾನಿ ಕಾಬೂಲ್‌ನಿಂದ ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಮಧ್ಯ ಅಫ್ಘಾನಿಸ್ತಾನದ ಪರ್ವತ ನಗರವಾದ ಬಾಮಿಯಾನ್‌ನಲ್ಲಿರುವ ಬಜಾರ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುಂಪಿನ ಮೇಲೆ ಗುಂಡು ಹಾರಿಸಲಾಗಿದೆ. “ಎಲ್ಲಾ ಮೃತ ದೇಹಗಳನ್ನು ಕಾಬೂಲ್‌ಗೆ ಸ್ಥಳಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡವರು ಕೂಡ ಕಾಬೂಲ್‌ನಲ್ಲಿದ್ದಾರೆ. ಸತ್ತವರು ಮತ್ತು ಗಾಯಗೊಂಡವರಲ್ಲಿ ಮಹಿಳೆಯರೂ ಸೇರಿದ್ದಾರೆ” ಎಂದು ಸರ್ಕಾರದ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ AFPಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾದರೆ 6 ತಿಂಗಳೊಳಗೆ ಪಿಒಕೆ ಭಾರತಕ್ಕೆ ಸೇರಲಿದೆ; ಸಿಎಂ ಯೋಗಿ ಭರವಸೆ

8 ಗಾಯಾಳುಗಳ ಪೈಕಿ ನಾಲ್ವರು ವಿದೇಶಿಗರಾಗಿದ್ದಾರೆ. ಒಬ್ಬ ಹಿರಿಯ ವಿದೇಶಿ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದವರಲ್ಲಿ ಇಬ್ಬರು ಅಫ್ಘಾನ್ ನಾಗರಿಕರು ಮತ್ತು ಒಬ್ಬ ತಾಲಿಬಾನ್ ಸದಸ್ಯ ಸೇರಿದ್ದಾರೆ ಎಂದು ಖಾನಿ ಹೇಳಿದ್ದಾರೆ.

ಸತ್ತವರಲ್ಲಿ ಮೂವರು ಸ್ಪ್ಯಾನಿಷ್ ಪ್ರವಾಸಿಗರು ಎಂದು ಸ್ಪೇನ್ ಸರ್ಕಾರ ಶುಕ್ರವಾರ ಘೋಷಿಸಿದೆ. ಹಾಗೇ, ಒಬ್ಬ ಸ್ಪ್ಯಾನಿಷ್ ಪ್ರಜೆ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಈಗಾಗಲೇ ಕಾಬೂಲ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!