AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ; ಮೂವರು ಸ್ಪ್ಯಾನಿಷ್ ಪ್ರವಾಸಿಗರು ಸೇರಿ 6 ಜನರ ಸಾವು

ಶುಕ್ರವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಿಂದ ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಮಧ್ಯ ಅಫ್ಘಾನಿಸ್ತಾನದ ಪರ್ವತ ನಗರವಾದ ಬಾಮಿಯಾನ್‌ನಲ್ಲಿರುವ ಬಜಾರ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಗುಂಪಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ; ಮೂವರು ಸ್ಪ್ಯಾನಿಷ್ ಪ್ರವಾಸಿಗರು ಸೇರಿ 6 ಜನರ ಸಾವು
ಅಫ್ಘಾನಿಸ್ತಾನದಲ್ಲಿ ಗುಂಡಿನ ದಾಳಿ
ಸುಷ್ಮಾ ಚಕ್ರೆ
|

Updated on: May 18, 2024 | 10:09 PM

Share

ಕಾಬೂಲ್: ಪ್ರವಾಸಕ್ಕೆಂದು ಅಫ್ಘಾನಿಸ್ತಾನಕ್ಕೆ (Afghanistan) ತೆರಳಿದ್ದ ಮೂವರು ಸ್ಪ್ಯಾನಿಶ್​ ಪ್ರವಾಸಿಗರು ಹೆಣವಾಗಿದ್ದಾರೆ. ಅಫ್ಘಾನಿಸ್ತಾನದ ಮಾರುಕಟ್ಟೆಗೆ ಭೇಟಿ ನೀಡುತ್ತಿದ್ದಾಗ ಮೂವರು ಸ್ಪ್ಯಾನಿಷ್ ಪ್ರವಾಸಿಗರು ಮತ್ತು ಮೂವರು ಆಫ್ಘನ್ನರ ಮೇಲೆ ಗುಂಡು ಹಾರಿಸಿ ಕೊಲ್ಲಲಾಗಿದೆ. ಅವರ ಶವಗಳನ್ನು ರಾಜಧಾನಿ ಕಾಬೂಲ್​ಗೆ ಸಾಗಿಸಲಾಯಿತು ಎಂದು ತಾಲಿಬಾನ್ ಸರ್ಕಾರ ಶನಿವಾರ ತಿಳಿಸಿದೆ.

ಶುಕ್ರವಾರ ರಾಜಧಾನಿ ಕಾಬೂಲ್‌ನಿಂದ ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಮಧ್ಯ ಅಫ್ಘಾನಿಸ್ತಾನದ ಪರ್ವತ ನಗರವಾದ ಬಾಮಿಯಾನ್‌ನಲ್ಲಿರುವ ಬಜಾರ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುಂಪಿನ ಮೇಲೆ ಗುಂಡು ಹಾರಿಸಲಾಗಿದೆ. “ಎಲ್ಲಾ ಮೃತ ದೇಹಗಳನ್ನು ಕಾಬೂಲ್‌ಗೆ ಸ್ಥಳಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡವರು ಕೂಡ ಕಾಬೂಲ್‌ನಲ್ಲಿದ್ದಾರೆ. ಸತ್ತವರು ಮತ್ತು ಗಾಯಗೊಂಡವರಲ್ಲಿ ಮಹಿಳೆಯರೂ ಸೇರಿದ್ದಾರೆ” ಎಂದು ಸರ್ಕಾರದ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ AFPಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾದರೆ 6 ತಿಂಗಳೊಳಗೆ ಪಿಒಕೆ ಭಾರತಕ್ಕೆ ಸೇರಲಿದೆ; ಸಿಎಂ ಯೋಗಿ ಭರವಸೆ

8 ಗಾಯಾಳುಗಳ ಪೈಕಿ ನಾಲ್ವರು ವಿದೇಶಿಗರಾಗಿದ್ದಾರೆ. ಒಬ್ಬ ಹಿರಿಯ ವಿದೇಶಿ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದವರಲ್ಲಿ ಇಬ್ಬರು ಅಫ್ಘಾನ್ ನಾಗರಿಕರು ಮತ್ತು ಒಬ್ಬ ತಾಲಿಬಾನ್ ಸದಸ್ಯ ಸೇರಿದ್ದಾರೆ ಎಂದು ಖಾನಿ ಹೇಳಿದ್ದಾರೆ.

ಸತ್ತವರಲ್ಲಿ ಮೂವರು ಸ್ಪ್ಯಾನಿಷ್ ಪ್ರವಾಸಿಗರು ಎಂದು ಸ್ಪೇನ್ ಸರ್ಕಾರ ಶುಕ್ರವಾರ ಘೋಷಿಸಿದೆ. ಹಾಗೇ, ಒಬ್ಬ ಸ್ಪ್ಯಾನಿಷ್ ಪ್ರಜೆ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಈಗಾಗಲೇ ಕಾಬೂಲ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!