AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ.

ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್​ ಕಾಡಿನಲ್ಲಿ ಪತನ; 6ಮಂದಿ ಸಾವು
ವಿಮಾನ ಪತನ (ಚಿತ್ರ: ರಾಯಿಟರ್ಸ್​)
TV9 Web
| Edited By: |

Updated on:Oct 10, 2021 | 9:58 AM

Share

ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane)ವೊಂದು ಅಮೇಜಾನ್​ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೇಜಾನ್​ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದ್ದಾಗಿ ಮಾಹಿತಿ ಲಭ್ಯವಾಗಿದೆ.  

ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್​​ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್​ ಕಾಡಿನ ದಟ್ಟವಾದ ಮರಗಳ ಮಧ್ಯೆ ಪತನವಾಗಿದೆ. ಕೆಳಗೆ ಬಿದ್ದ ತಕ್ಷಣ ಬೆಂಕಿ ಹೊತ್ತಿಕೊಂಡು, ಇಡೀ ವಿಮಾನ ಬೆಂಕಿಗೆ ಆಹುತಿಯಾಗಿದೆ. ಅಲ್ಲಿಯೇ ಹತ್ತಿರದಲ್ಲಿ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ, ಸಾಧ್ಯವಾಗಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೇನಾ ವಿಮಾನ ಪತನಕ್ಕೆ ನೈಜ ಕಾರಣವೇನು ಎಂದು ಪತ್ತೆ ಹಚ್ಚುವ ಸಂಬಂಧ ತನಿಖೆ ನಡೆಯುತ್ತಿದೆ.

ಈ ವಿಮಾನ ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಘೆ-ಚಿಕೂನ್​ಗುನ್ಯಾ ಕಾರ್ಯಕ್ರಮದ ನಾಲ್ವರು ಅಧಿಕಾರಿಗಳನ್ನು ಕರೆದೊಯ್ಯುತ್ತಿತ್ತು. ಇವರೆಲ್ಲರೂ ಆರೋಗ್ಯಾಧಿಕಾರಿಗಳಾಗಿದ್ದಾರೆ. ಅಧಿಕಾರಿಗಳ ತಂಡವನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಅವರೆಲ್ಲ ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಕೊಂಡವರಾಗಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

Published On - 9:58 am, Sun, 10 October 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ